ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ – ರಾಸಾಯನಿಕ ಓವರ್ ರಿಯಾಕ್ಷನ್​ ದುರಂತಕ್ಕೆ ಕಾರಣ?

ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ – ರಾಸಾಯನಿಕ ಓವರ್ ರಿಯಾಕ್ಷನ್​ ದುರಂತಕ್ಕೆ ಕಾರಣ?

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿರುವ ಗುಣನಿಯಂತ್ರಣ ಪ್ರಯೋಗಾಲಯದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಪ್ರಕರಣಕ್ಕೆ ಈಗ ರಾಜಕೀಯ ಬಣ್ಣ ಬಳಿಯಲಾಗುತ್ತಿದೆ. ಇದೀಗ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮುಖ್ಯ ಇಂಜಿನಿಯರ್​​​ ಬಿ.ಎಸ್.ಪ್ರಹ್ಲಾದ್ ಸ್ಪಷ್ಟಣೆ ನೀಡಿದ್ದಾರೆ. ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಸಂಭವಿಸಿದ ಅಗ್ನಿಅವಘಡವು ರಾಸಾಯನಿಕ ಓವರ್ ರಿಯಾಕ್ಷನ್​ನಿಂದ ಆಗಿದೆ. ಅವಘಡದಲ್ಲಿ ಬೇರೆ ಯಾವುದೇ ನೌಕರರ ಕೈವಾಡವಿಲ್ಲ ಎಂದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ: ಬೆಂಕಿ ಬಿದ್ದಿರುವುದು ಆಕಸ್ಮಿಕವಲ್ಲ, ಬಿಜೆಪಿ ಷಡ್ಯಂತ್ರ! – ಕಾಂಗ್ರೆಸ್‌ ಆರೋಪ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಚ್ಚಾ ವಸ್ತು ಗುಣಮಟ್ಟ ಪರೀಕ್ಷೆಗೆ ಬಳಸುವ ಏಜೆಂಟ್​​ನಿಂದ ದುರಂತ ಸಂಭವಿಸಿದೆ. ಬೆಂಜೀನ್ ಏಜೆಂಟ್​ನ ಓವರ್ ರಿಯಾಕ್ಷನ್​ನಿಂದ ದುರಂತವಾಗಿರುವ ಸಾಧ್ಯತೆ ಇದೆ. ನಿರ್ದಿಷ್ಟ ಪ್ರಮಾಣಕ್ಕಿಂತ ಹೆಚ್ಚು ಹಾಕಿದ್ದರಿಂದ ಬೆಂಕಿ ಅವಘಡ ಸಂಭವಿಸಿರಬಹುದು. ಬೆಂಜೀನ್ ಗಾಳಿಗೆ ಬೇಗನೆ ದಹಿಸಿಕೊಳ್ಳುವ ಗುಣ ಹೊಂದಿದೆ. ಅದರ ರಾಸಾಯನಿಕ ತೀವ್ರತೆ ಹೆಚ್ಚಾಗಿರಬಹುದು. ಬೆಂಜೀನ್ ಒರೆಸಿಟ್ಟ ಬಟ್ಟೆಗೆ ಬೆಂಕಿ ತಗುಲಿ ದುರಂತ ಆಗಿರಬಹುದು. ತಾಂತ್ರಿಕವಾಗಿ ಇದನ್ನು ಪರಿಶೀಲಿಸುವ ಕೆಲಸ ನಡೆಯುತ್ತಿದೆ. ವಿಧಿವಿಜ್ಞಾನ ಪ್ರಯೋಗಾಲಯದವರು ಸ್ಯಾಂಪಲ್ಸ್ ಪಡೆದುಕೊಂಡಿದ್ದಾರೆ. ಟೆಕ್ನಿಕಲ್ ಕಮಿಟಿ ಕೂಡ ಪರಿಶೀಲನೆ ನಡೆಸುತ್ತಿದೆ. ವರದಿ ಬಂದ ಮೇಲೆಯೇ ನಿಖರ ಕಾರಣ ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಎಇಇ ಆನಂದ್ ಬಿಬಿಎಂಪಿ ನೌಕರರ ಅಮೃತ್​ ರಾಜ್ ಜತೆ ಮಾತಾಡಿರುವ ಆಡಿಯೋ ವೈರಲ್​ ಆಗಿದೆ. ನಾವು ಮೊದಲಿನಿಂದಲೂ ಲ್ಯಾಬ್​​ನಲ್ಲಿ ಟೆಸ್ಟ್ ಮಾಡುತ್ತಿದ್ದೇವು. ಎಲ್ಲಾ ಸ್ಯಾಂಪಲ್​​ಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡುತ್ತೇವೆ. ಪರೀಕ್ಷೆ ನಡೆಸುವ ಬಗ್ಗೆ ಮೊದಲೇ ಎಲ್ಲರಿಗೂ ತರಬೇತಿ ನೀಡಿದ್ದೇವೆ. ಬೆಲ್ಜಿನ್​​ ಕೆಮಿಕಲ್ ಹಾಕಿ ಟೆಸ್ಟ್​​ ಮಾಡಿರುವಾಗ ಸೋರಿಕೆಯಾಗಿರಬಹದು. ಬೆಲ್ಜಿನ್‌ ಹಾಕಿ ವಾಶ್ ಮಾಡುವಾಗ ಬೆಂಕಿ ಹರಡಿ ದರುಂತ ಸಂಭವಿಸಿದೆ ಎಂದು ಹೇಳಿದ್ದಾರೆ.

ಎಂಸಿಬಿ ಆಫ್​​​​ ಮಾಡುವಾಗ ಬೆಂಕಿ ಇನ್ನೂ ಜಾಸ್ತಿಯಾಯ್ತು. ಈ ವೇಳೆ ನಾವು ಕೆಳಗೆ ಇಳಿದೆವು. ಕೆಲವರು ಮೇಲೆ ಸಿಕ್ಕಿಹಾಕಿಕೊಂಡರು. ನಾವು ಕೆಳಗೆ ಇದ್ದ ಕಾರಣ ನಾವು ಬಚಾವ್‌ ಆಗಿದ್ದೇವೆ. ಬಸವನಗುಡಿ ವ್ಯಾಪ್ತಿಗೆ ಸಂಬಂಧಿಸಿದ ಟಾರ್ ಸಂಗ್ರಹ ಮಾಡಿದ್ದೇವು. ಇದರ ಟೆಸ್ಟಿಂಗ್ ವೇಳೆ ಅಗ್ನಿ ಅವಘಡ ನಡೆದಿದೆ. ಆಕಸ್ಮಿಕವಾಗಿ ಈ ರೀತಿಯಾದ ಘಟನೆಯಾಗಿದೆ. ನಮ್ಮ ಹಣೆ ಬರಹ ಸರಿ ಇಲ್ಲ ಸರ್ ಎಂದು ಎಇಇ ಆನಂದ್​​ ದೂರವಾಣಿ ಕರೆಯಲ್ಲಿ ಮಾತನಾಡಿದ್ದಾರೆ.

suddiyaana