ಟೀಮ್ ಇಂಡಿಯಾದಲ್ಲಿ ಮೇಜರ್ ಸರ್ಜರಿ – ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನ ವಜಾಗೊಳಿಸಿದ ಬಿಸಿಸಿಐ
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋತಿದ್ದಕ್ಕೆ ಬಿಸಿಸಿಐ ಮಹತ್ವದ ನಿರ್ಧಾರ

ಟೀಮ್ ಇಂಡಿಯಾದಲ್ಲಿ ಮೇಜರ್ ಸರ್ಜರಿ – ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನ ವಜಾಗೊಳಿಸಿದ ಬಿಸಿಸಿಐಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೋತಿದ್ದಕ್ಕೆ ಬಿಸಿಸಿಐ ಮಹತ್ವದ ನಿರ್ಧಾರ

ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸಿದ ಟೀಮ್ ಇಂಡಿಯಾ ವಿರುದ್ಧ ಆಕ್ರೋಶದ ಮಾತುಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಮಾಜಿ ವೇಗದ ಬೌಲರ್ ಚೇತನ್ ಶರ್ಮಾ ಸಾರಥ್ಯದ ಆಯ್ಕೆ ಸಮಿತಿಯನ್ನು ಕಿತ್ತೊಗೆಯಲು ಬಿಸಿಸಿಐ ಮುಂದಾಗಿದೆ.

ಇದನ್ನೂ ಓದಿ:  ಏಷ್ಯಾಕಪ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಸೆಮಿಫೈನಲ್ ತಲುಪಿದ ಭಾರತದ ಮಣಿಕಾ ಬಾತ್ರಾ

ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಕಂಡಿತ್ತು. ಈ ಮೂಲಕ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿತ್ತು. ಅಸಮರ್ಪಕ ಆಯ್ಕೆ ಕೂಡ ಸೋಲಿಗೆ ಪ್ರಮುಖ ಕಾರಣ ಅನ್ನೋ ಮಾತುಗಳು ಸಹ ಕೇಳಿಬಂದಿದ್ದವು. ಇದೀಗ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನೇ ಬಿಸಿಸಿಐ ವಜಾಗೊಳಿಸಿದ್ದು, ಹೊಸ ಆಯ್ಕೆ ಸಮಿತಿ ರಚಿಸಲು ಅರ್ಜಿ ಅಹ್ವಾನಿಸಿದೆ. ಅರ್ಜಿ ಹಾಕುವವರಿಗೆ ಏನೆಲ್ಲಾ ಅರ್ಹತೆಗಳು ಇರಬೇಕೆಂದು ಸಹ ತಿಳಿಸಿದೆ. ಚೇತನ್‌ ಶರ್ಮಾ ಹೊರತಾಗಿ, ಸುನಿಲ್‌ ಜೋಶಿ, ಹವಿಂದರ್‌ ಸಿಂಗ್‌ ಮತ್ತು ದೇಬಾಶಿಶ್‌ ಮೊಹಾಂತಿ ಭಾರತ ಪುರುಷರ ತಂಡದ ಆಯ್ಕೆ ಸಮಿತಿಯ ಸದಸ್ಯರಾಗಿದ್ದರು.

ಬಿಸಿಸಿಐ ಹಿರಿಯರ ತಂಡದ ಆಯ್ಕೆ ಸಮಿತಿಗೆ ಸದಸ್ಯ ಹಾಗೂ ಮುಖ್ಯಸ್ಥ ಸ್ಥಾನಕ್ಕೆ ಅರ್ಜಿ ಹಾಕುವ ಅಭ್ಯರ್ಥಿಗಳು ಕನಿಷ್ಠ 7 ಟೆಸ್ಟ್ ಪಂದ್ಯ ಅಥವಾ, 30 ಪ್ರಥಮ ದರ್ಜೆ ಕ್ರಿಕೆಟ್ ಅಥವಾ 10 ಏಕದಿನ ಹಾಗೂ 20 ಪ್ರಥಮ ದರ್ಜೆ ಪಂದ್ಯ ಆಡಿರಬೇಕು ಎಂದು ಬಿಸಿಸಿಐ ಹೇಳಿದೆ. ಇದೀಗ ಹೊಸ ಆಯ್ಕೆ ಸಮಿತಿ ಸೇರಲು ಆಸಕ್ತರು ನವೆಂಬರ್‌ 28ರ ಒಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

suddiyaana