ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ – RCB ಮಾರ್ಕೆಟಿಂಗ್​ ಮುಖ್ಯಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ – RCB ಮಾರ್ಕೆಟಿಂಗ್​ ಮುಖ್ಯಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ

ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್​ಸಿಬಿ ಅಭಿಮಾನಿಗಳ ಸಾವನ್ನಪ್ಪಿದ್ದಾರೆ. ಈ ಪ್ರಕರಣ ಸದ್ಯ ರಾಷ್ಟ್ರಮಟ್ಟದಲ್ಲಿ ಭಾರೀ ಚರ್ಚೆ ಗ್ರಾಸವಾಗಿದೆ. ರಾಜ್ಯ ಸರ್ಕಾರ ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್​ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ದುರಂತಕ್ಕೆ ಸಂಬಂಧಿಸಿದಂತೆ ಇದೀಗ​​​ ಪೊಲೀಸರು ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಗೇಟ್ ನಂ.20.. ಅವಸರ.. ಅನಾಹುತ.. ಫ್ಯಾನ್ಸ್ ಚಪ್ಪಲಿ ತೂರಿದ್ದೇ ಮುಳುವಾಯ್ತಾ? – RCB ಫ್ರಾಂಚೈಸಿಗೆ ಪ್ರಾಣಗಳು ಲೆಕ್ಕಕ್ಕಿಲ್ವಾ?

ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮುಂಬೈಗೆ ತೆರಳುತ್ತಿದ್ದ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ, ಡಿಎನ್​ಎ ಮ್ಯಾನೇಜ್​ಮೆಂಟ್​​ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್​ ಬಂಧಿತರು. ಸದ್ಯ ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ವಿಚಾರಣೆ ಮಾಡಿದ್ದಾರೆ.

ಇನ್ನು ನಿನ್ನೆ ರಾತ್ರಿ ಬೆಂಗಳೂರಲ್ಲಿ ಕೆಎಸ್​ಸಿಎ ಕಾರ್ಯದರ್ಶಿ ಶಂಕರ್​ ಮನೆ ಮೇಲೆ ದಾಳಿ ಮಾಡಿದ ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಕೆಎಸ್​ಸಿಎ ಖಜಾಂಚಿ ಜಯರಾಮ್​ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಕೆಎಸ್​ಸಿಎ ಕಾರ್ಯದರ್ಶಿ ಮತ್ತು ಖಜಾಂಚಿ ಇಬ್ಬರೂ ನಾಪತ್ತೆ ಆಗಿದ್ದಾರೆ. ಇದೀಗ ಇವರಿಬ್ಬರಿಗಾಗಿ ಪೊಲೀಸರು ಹಡುಕಾಟ ನಡೆಸಿದ್ದಾರೆ.

Shwetha M

Leave a Reply

Your email address will not be published. Required fields are marked *