‘ಭಾರತ್ ಜೋಡೋ ಯಾತ್ರೆ’ ಸಮಾರೋಪ ಸಮಾರಂಭ – ದೇವೇಗೌಡರಿಗೆ ಆಹ್ವಾನ

‘ಭಾರತ್ ಜೋಡೋ ಯಾತ್ರೆ’ ಸಮಾರೋಪ ಸಮಾರಂಭ – ದೇವೇಗೌಡರಿಗೆ ಆಹ್ವಾನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ ಯಾತ್ರೆ’ ಕಾಶ್ಮೀರ ತಲುಪಿದೆ. ಶ್ರೀನಗರದಲ್ಲಿ ಜನವರಿ 30ರಂದು ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮಾಜಿ ಪ್ರಧಾನಿ, ಜೆಡಿಎಸ್​ ನಾಯಕ ಹೆಚ್​ ಡಿ ದೇವೇಗೌಡ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನಿಸಿದ್ದಾರೆ.

ಇದನ್ನೂ ಓದಿ: ಚುನಾವಣೆ ತಯಾರಿ ನಡುವೆಯೇ ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾ ಘೋಷಣೆ

ಈ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ತನ್ನನ್ನು ಆತ್ಮೀಯವಾಗಿ ಆಹ್ವಾನಿಸಿದ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇವೇಗೌಡರು ಪತ್ರ ಬರೆದಿದ್ದಾರೆ. ‘ನಾನು ಈ ಕಾರ್ಯಕ್ರಮದಲ್ಲಿ ಹಾಜರಾಗಲು ಆಗುತ್ತಿಲ್ಲ. ರಾಹುಲ್ ಗಾಂಧಿ ಅವರಿಗೆ ಶುಭಾಷಯ ಕೋರುತ್ತೇನೆ. ದೇಶದ ಒಗ್ಗೂಡಿವಿಕೆಗೆ ರಾಹುಲ್ ಗಾಂಧಿಯವರು ಪಾದಯಾತ್ರೆ ಮಾಡಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಹುತಾತ್ಮರಾದ ದಿನದಂದು ಈ ಕಾರ್ಯಕ್ರಮ ಆಯೋಜಿಸುತ್ತಿರುವುದು ಅತ್ಯಂತ ಸೂಕ್ತವಾಗಿದೆ. 3,500 ಕಿಲೋ‌ಮೀಟರ್ ರಾಹುಲ್ ಗಾಂಧಿ ಯಾತ್ರೆ ನಡೆಸಿದ್ದಾರೆ. ನನ್ನ ಶುಭಾಶಯಗಳನ್ನು ರಾಹುಲ್ ಗಾಂಧಿ ಅವರಿಗೆ ತಿಳಿಸಿ’ ಎಂದು ಪತ್ರದ ಮೂಲಕ ಅಭಿನಂದನೆ ತಿಳಸಿದ್ದಾರೆ.

suddiyaana