ಮನೆ ಯಜಮಾನಿಗೆ ಪ್ರತೀ ತಿಂಗಳು ₹2 ಸಾವಿರ – ಯಾರಿಗೆಲ್ಲಾ ಬಂಪರ್ ಆಫರ್..?

ಮನೆ ಯಜಮಾನಿಗೆ ಪ್ರತೀ ತಿಂಗಳು ₹2 ಸಾವಿರ – ಯಾರಿಗೆಲ್ಲಾ ಬಂಪರ್ ಆಫರ್..?

ಕೆಲಸ ಕೆಲಸ ಅನ್ಕೊಂಡು ಮನೆಯಲ್ಲೇ ಇರೋ ಹೆಣ್ಮಕ್ಕಳಿಗೆ ಇಲ್ಲಿದೆ ಗುಡ್ ನ್ಯೂಸ್. ಪ್ರತೀ ತಿಂಗಳು ನಿಮಗೆ 2 ಸಾವಿರ ಹಣ ಸಿಗೋ ಚಾನ್ಸ್ ಇದೆ. ಅಷ್ಟಕ್ಕೂ ಈ ಆಫರ್ ಯಾರಿಗೆಲ್ಲಾ ಸಿಗುತ್ತೆ ಅನ್ನೋ ಡೀಟೇಲ್ಸ್ ಇಲ್ಲಿದೆ ನೋಡಿ.

ಇದನ್ನೂ ಓದಿ: ಬೆದರಿಕೆ ಕರೆ ಬಗ್ಗೆ ಸೂಕ್ತ ತನಿಖೆ ನಡೆಸುತ್ತೇವೆ – ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ಈ ಮಹತ್ವದ ಯೋಜನೆಯನ್ನ ಘೋಷಣೆ ಮಾಡಿದೆ. ಮಹಿಳೆಯರನ್ನೇ ಟಾರ್ಗೆಟ್ ಮಾಡಿರೋ ಕಾಂಗ್ರೆಸ್ ಹೊಸ ಅಸ್ತ್ರ ಪ್ರಯೋಗ ಮಾಡಿದೆ. ಇವತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಂಗಳೂರಿಗೆ ಭೇಟಿ ನೀಡಿದ್ರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ನಾ ನಾಯಕಿ ಮಹಿಳಾ ಸಮಾವೇಶವನ್ನ ಉದ್ಘಾಟನೆ ಮಾಡಿದ್ರು. ಇದೇ ವೇಳೆ ಕಾಂಗ್ರೆಸ್​ನಿಂದ ಗೃಹಲಕ್ಷ್ಮೀ ಯೋಜನೆಯನ್ನ ಘೋಷಣೆ ಮಾಡಲಾಯ್ತು.

ಗೃಹಲಕ್ಷ್ಮೀ ಹೆಸರಿನಲ್ಲಿ ಪ್ರತೀ ಮನೆಯ ಯಜಮಾನಿಗೆ ಪ್ರತೀ ತಿಂಗಳು 2 ಸಾವಿರ ರೂಪಾಯಿ ನೀಡುವುದು ಈ ಯೋಜನೆಯ ಉದ್ದೇಶ. ಪ್ರತೀ ತಿಂಗಳು 2 ಸಾವಿರ ರೂಪಾಯಿಯಂತೆ ವರ್ಷಕ್ಕೆ 24 ಸಾವಿರ ರೂಪಾಯಿ ನೀಡಲಾಗುತ್ತೆ. ಈ ಯೋಜನೆಯಿಂದ ರಾಜ್ಯದ 1.5 ಕೋಟಿ ಮಹಿಳೆಯರಿಗೆ ನೆರವಾಗಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ವಿಪಕ್ಷನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಚೆಕ್ ಮಾದರಿಯನ್ನ ಬಿಡುಗಡೆ ಮಾಡಲಾಯ್ತು. ವಿಪಕ್ಷನಾಯಕ ಸಿದ್ದರಾಮಯ್ಯ ಚುನಾವಣೆಯಲ್ಲಿ ನಮ್ಮ ಸರ್ಕಾರ ಬಂದರೆ ಮಹಿಳೆಯರಿಗೆ ರಾಜಕೀಯದಲ್ಲಿ ಶೇಕಡಾ 33ರಷ್ಟು ಮೀಸಲಾತಿ ಕೊಡೋದಾಗಿ ಭರವಸೆ ನೀಡಿದ್ರು.

 

suddiyaana