ಸಿಎಂ ಆಯ್ಕೆ ಕಸರತ್ತಿನಲ್ಲಿರುವ ಖರ್ಗೆಗೆ ಬಿಗ್ ಶಾಕ್ – ಎಐಸಿಸಿ ಅಧ್ಯಕ್ಷರಿಗೆ ಕೋರ್ಟ್ ನಿಂದ ಸಮನ್ಸ್ 

ಸಿಎಂ ಆಯ್ಕೆ ಕಸರತ್ತಿನಲ್ಲಿರುವ ಖರ್ಗೆಗೆ ಬಿಗ್ ಶಾಕ್ – ಎಐಸಿಸಿ ಅಧ್ಯಕ್ಷರಿಗೆ ಕೋರ್ಟ್ ನಿಂದ ಸಮನ್ಸ್ 

ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರುವ ಉತ್ಸಾಹದಲ್ಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಯ್ಕೆ ವಿಚಾರವಾಗಿ ಫುಲ್ ಬ್ಯುಸಿಯಾಗಿದ್ದಾರೆ. ಈ ನಡುವೆ ಖರ್ಗೆಗೆ ಕೋರ್ಟ್ ಸಮನ್ಸ್ ನೀಡುವ ಮೂಲಕ ಶಾಕ್ ಕೊಟ್ಟಿದೆ.

ಬಜರಂಗದಳವನ್ನು ಪಿಎಫ್​ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್​ ಸಮನ್ಸ್ ನೀಡಿದೆ. ​​ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಅವರಿಗೆ ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ. ಖರ್ಗೆಯವರು ಈ ಹಿಂದೆ ಭಜರಂಗದಳ ಸಂಘಟನೆಯನ್ನು ಪಿಎಫ್ ಐ ಜೊತೆ ಹೋಲಿಕೆ ಮಾಡಿದ್ದರು.

ಇದನ್ನೂ ಓದಿ : ಇಂದು ರಾತ್ರಿಯೊಳಗೆ ಮುಖ್ಯಮಂತ್ರಿ ಆಯ್ಕೆ – ಯಾರಿಗೆ ಸಿಗಲಿದೆ ಸಿಎಂ ಪಟ್ಟ?

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಶ್ವ ಹಿಂದೂ ಪರಿಷತ್‌ ಚಂಡೀಗಡ ಘಟಕವು 100 ಕೋಟಿ ರೂಪಾಯಿ ಮಾನಹಾನಿ ಪರಿಹಾರ ಕೋರಿ ನೋಟಿಸ್‌ ಜಾರಿ ಮಾಡಿತ್ತು. ತನ್ನ ಯುವ ಘಟಕವಾದ ಬಜರಂಗದಳಕ್ಕೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಅಪಮಾನ ಮಾಡಲಾಗಿದೆ ಎಂದು ‘ವಿಹೆಚ್‌ಪಿ’ ಆರೋಪಿಸಿದೆ. ವಿಶ್ವ ಹಿಂದೂ ಪರಿಷತ್‌ನ ಚಂಡೀಗಡ ಘಟಕ ಮತ್ತು ಅದರ ಯುವ ಘಟಕ ಬಜರಂಗದಳ ಮೇ 4ರಂದು ನೋಟಿಸ್ ಜಾರಿ ಮಾಡಿದ್ದು, 14 ದಿನಗಳ ಒಳಗೆ 100.10 ಕೋಟಿ ರೂ ಪರಿಹಾರ ನೀಡುವಂತೆ ಒತ್ತಾಯಿಸಿತ್ತು.

ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮಾಜದಲ್ಲಿ ದ್ವೇಷ ಹರಡುತ್ತಿರುವ ಆರೋಪ ಎದುರಿಸುತ್ತಿರುವ ಬಜರಂಗದಳ, ಪಿಎಫ್‌ಐ ಮುಂತಾದ ಸಂಘಟನೆಗಳನ್ನು ನಿಷೇಧಿಸುವುದಾಗಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಬಜರಂಗದಳವನ್ನು ಪಿಎಫ್‌ಐ, ಸಿಮಿ ಮುಂತಾದ ನಿಷೇಧಿತ ಸಂಘಟನೆಗಳ ಜತೆ ಹೋಲಿಸಿರುವುದು ಮಾನಹಾನಿಕರ ಎಂದು ವಿಹೆಚ್‌ಪಿ ಪರ ವಕೀಲರು ನೋಟಿಸ್‌ನಲ್ಲಿ ದೂರಿದ್ದರು.

suddiyaana