ಬಿಗ್‌ಬಾಸ್‌ನಲ್ಲಿ ರೈತನ ಮಗ ವಿನ್ನರ್! – ಸ್ಟುಡಿಯೋದಲ್ಲಿಯೇ ಹೊಡೆದಾಟ!

ಬಿಗ್‌ಬಾಸ್‌ನಲ್ಲಿ ರೈತನ ಮಗ ವಿನ್ನರ್! – ಸ್ಟುಡಿಯೋದಲ್ಲಿಯೇ ಹೊಡೆದಾಟ!

ತೆಲುಗು ಬಿಗ್‌ಬಾಸ್‌ ಸೀಸನ್‌ 7 ಅನ್ನು ಪಲ್ಲವಿ ಪ್ರಶಾಂತ್‌ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಕಾಮನ್ ಮ್ಯಾನ್ ಆಗಿ ಮನೆ ಪ್ರವೇಶಿಸಿದ ರೈತನ ಮಗ ಈಗ ಟೈಟಲ್ ವಿನ್ನರ್ ಆಗಿದ್ದಾರೆ. ಈ ಮೂಲಕ ಬಿಗ್ ಬಾಸ್ ಇತಿಹಾಸದಲ್ಲಿ ಸಾಮಾನ್ಯ ವಿಭಾಗದಲ್ಲಿ ಆಗಮಿಸಿ ಗೆದ್ದ ಮೊದಲ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬಿಗ್‌ ಬಾಸ್‌ ವಿನ್ನರ್‌ ಅನೌನ್ಸ್‌ ಆಗುತ್ತಿದ್ದಂತೆ ಬಿಗ್‌ ಬಾಸ್ ಕಂಟೆಸ್ಟೆಂಟ್ ಅಭಿಮಾನಿಗಳು ಸ್ಟುಡಿಯೋದಲ್ಲಿಯೇ  ಹೊಡೆದಾದಿಕೊಂಡಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಗಂಧರ್ವರು ರಾಕ್ಷಸರು ಟಾಸ್ಕ್ ನಲ್ಲಿ ಹೋದ ಬಿಗ್ ಬಾಸ್ ಮಾನ ಶಾಲೆಯಲ್ಲಿ ವಾಪಸ್ ಬಂತಾ – ವಿನಯ್-ಸಂಗೀತ ಪ್ರಾಬ್ಲಂ ಏನು?

ಹೌದು, ತೆಲುಗು ಬಿಗ್‌ಬಾಸ್‌ ಸೀಸನ್‌ 7ನ ಫಿನಾಲೆ ವೇಳೆ ಈ ಗಲಾಟೆ ನಡೆದಿದೆ. ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಬಿಗ್ ಬಾಸ್ ತೆಲುಗು ಸೀಸನ್ 7ರ ಗ್ರ್ಯಾಂಡ್ ಫಿನಾಲೆ ನಡೆಯುತ್ತಿತ್ತು. ಈ ವೇಳೆ ಕಂಟೆಸ್ಟೆಂಟ್ ಆಗಿದ್ದ ಅಮರ್ ದೀಪ್ ಮತ್ತು ಪಲ್ಲವಿ ಪ್ರಶಾಂತ್ ಅವರ ಅಭಿಮಾನಿಗಳು ಆಗಮಿಸಿದ್ದರು. ಗ್ರ್ಯಾಂಡ್ ಫಿನಾಲೆಯಲ್ಲಿ ತಮ್ಮ ನೆಚ್ಚಿನ ಕಂಟೆಸ್ಟೆಂಟ್ ವಿನ್ನರ್ ಆಗುತ್ತಾರೆ ಎನ್ನುವುದು ಅವರವರ ಅಭಿಮಾನಿಗಳ ನಿರೀಕ್ಷೆ ಆಗಿತ್ತು. ಆದರೆ, ಆಗಿದ್ದು ಉಲ್ಟಾ ಎನ್ನುವ ಕಾರಣಕ್ಕಾಗಿ ಗಲಾಟೆ ಶುರುವಾಗಿದೆ. ಪಲ್ಲವಿ ಪ್ರಶಾಂತ್ ವಿನ್ ಆಗಿ, ಅಮರ್ ದೀಪ್ ರನ್ನರ್ ಅಪ್ ಆಗಿ ಘೋಷಣೆ ಆಗುತ್ತಿದ್ದಂತೆಯೇ ಗಲಾಟೆ ಶುರುವಾಗಿದೆ. ಇಬ್ಬರ ಫ್ಯಾನ್ಸ್ ಮಾತು ವಿಕೋಪಕ್ಕೆ ಹೋದ ಕಾರಣದಿಂದಾಗಿ ಆರ್.ಟಿ.ಸಿ ಬಸ್ ಮತ್ತು ಕಾರಿನ ಗಾಜು ಪುಡಿ ಪುಡಿ ಆಗಿದೆ ಎಂದು ವರದಿಯಾಗಿದೆ.

ಪಲ್ಲವಿ ಪ್ರಶಾಂತ್ ಅಭಿಮಾನಿಗಳು ರನ್ನರ್ ಅಪ್ ಆಗಿದ್ದ ಅಮರ್ ಅವರ ಕಾರಿನ ಮೇಲೂ ದಾಳಿ ಮಾಡಿದ್ದಾರೆ. ಕೂಡಲೇ ಪೊಲೀಸರು ಮಧ್ಯ ಪ್ರವೇಶಿಸಿ ಅನಾಹುತ ಆಗಿರುವುದನ್ನು ತಡೆದಿದ್ದಾರೆ. ಜೊತೆ ಇನ್ನೋರ್ವ ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಶ್ರೀ ಅವರು ಕಾರಿನ ಗಾಜು ಪುಡಿ ಪುಡಿ ಆಗಿದೆ.  ಈ ಕುರಿತಂತೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Shwetha M