ಬಿಜೆಪಿ ಒಂದು ʼಪಂಚೆʼಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ! –ಕಾಂಗ್ರೆಸ್‌ ಕೌಂಟರ್‌ ಕೊಟ್ಟಿದ್ದು ಯಾರಿಗೆ?

ಬಿಜೆಪಿ ಒಂದು ʼಪಂಚೆʼಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ! –ಕಾಂಗ್ರೆಸ್‌ ಕೌಂಟರ್‌ ಕೊಟ್ಟಿದ್ದು ಯಾರಿಗೆ?

ಬಿಜೆಪಿ ಅಂತರ್ಯುದ್ಧ ತಣಿಸಲು ನಾಯಕರು ಸರ್ಕಸ್ ಮಾಡ್ತಿದ್ರೆ ಇತ್ತ ಕಾಂಗ್ರೆಸ್ ನಾಯಕರು ಟ್ವಿಟ್ಟರ್​ನಲ್ಲೇ ಕೌಂಟರ್ ಕೊಡ್ತಿದ್ದಾರೆ. ಇಡೀ ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ಇದನ್ನೂ ಓದಿ: SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ – ಪಾಸ್‌ ಆದವರಿಗಿಂತ ಫೇಲ್‌ ಆದವರೇ ಹೆಚ್ಚು!

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ಒಂದು ಪಂಚೆಯೊಳಗೆ ಬಂಧಿಯಾಗಿ ವಿಲವಿಲ ಒದ್ದಾಡುತ್ತಿದೆ! ಬಂಧನದಿಂದ ಹೊರಬರಬೇಕು ಎಂದರೆ ಆ ‘ಪಂಚೆ’ಯನ್ನು ಹರಿಯಲೇಬೇಕು! ದುಡಿಯದೆ, ಬೆವರು ಹರಿಸದೆ, ತಿರುಗದೆ, ನಾಲ್ಕು ಮತವನ್ನು ಗಳಿಸುವ ಶಕ್ತಿಯೂ ಇಲ್ಲದ ಆ ‘ಸಂಘ’ಟನಾ ಕಾರ್ಯದರ್ಶಿಯ ವಿರುದ್ಧ ಮಾತನಾಡಿದ ಒಬ್ಬೇ ಒಬ್ಬ ವ್ಯಕ್ತಿ ಅಂದರೆ ರೇಣುಕಾಚಾರ್ಯ. ಬಿಜೆಪಿಯಲ್ಲಿ ಅವರು ಬದುಕುಳಿಯಲು ಸಾಧ್ಯವೇ ಎಂದು ಕಾದು ನೋಡಬೇಕು! ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದಲ್ಲಿ ಬಿ.ಎಸ್ ಸಂತೋಷ್ ಹೆಸರೇಳದೆ ಲೇವಡಿ ಮಾಡಿದೆ.

ಹಾಗೇ ಬಿಎಸ್ ಯಡಿಯೂರಪ್ಪ ವಿರುದ್ಧ ಹೀನಾಯವಾಗಿ ಮಾತನಾಡುತ್ತಿದ್ದವರ ವಿರುದ್ಧ ಒಂದೇ ಒಂದು ನೋಟಿಸ್ ನೀಡದ ಬಿಜೆಪಿ ಪಕ್ಷ, ಸಂತೋಷ ಕೂಟದ ವಿರುದ್ಧ ಮಾತನಾಡಿದ 24 ಗಂಟೆಯೊಳಗೆ ನೋಟಿಸ್ ನೀಡಲಾಗಿದೆ. BSY ಅಂದರೆ ಅಷ್ಟೊಂದು ತಾತ್ಸಾರವೇ? ಪಂಚೆ ಸಂತೋಷರ ಮೇಲೆ ಅಷ್ಟೊಂದು ಪ್ರೀತಿಯೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

suddiyaana