ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌‌ರಿಂದ ಕುಕ್ಕರ್‌ ಹಂಚಿಕೆ! -ಡಿಕೆ ಸುರೇಶ್ ವಿರುದ್ಧ ಬಿಜೆಪಿ ವಾಗ್ದಾಳಿ

ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌‌ರಿಂದ ಕುಕ್ಕರ್‌ ಹಂಚಿಕೆ! -ಡಿಕೆ ಸುರೇಶ್ ವಿರುದ್ಧ ಬಿಜೆಪಿ ವಾಗ್ದಾಳಿ

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿಸಿದೆ. ಈ ಹೊತ್ತಲ್ಲೇ ಕುಕ್ಕರ್‌ ಪಾಲಿಟಿಕ್ಸ್‌ ಶುರುವಾಗಿದೆ. ಲೋಕಸಭೆ ಚುನಾವಣೆ ಸಮೀಪದಲ್ಲಿರುವಾಗ ಮತದಾರರನ್ನು ಸೆಳೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಕುಕ್ಕರ್ ವಿತರಿಸಿ ಆಮಿಷವೊಡ್ಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: 9 ರಿಂದ 12 ನೇ ತರಗತಿ ಮಕ್ಕಳಿಗೆ ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ!

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಬಿಜೆಪಿ, ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಮಾಡಿದ ಬ್ರದರ್ಸ್‌ಗಳ ಬ್ರದರ್‌‌ರಿಂದ ಕುಕ್ಕರ್‌ ಹಂಚಿಕೆ! ದೇಶದ ವಿಭಜನೆ ಮಾಡುವ ಸಂಚು ರೂಪಿಸಿದ್ದ ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಅವರಿಗೆ ಚುನಾವಣೆ ಘೋಷಣೆ ಮುನ್ನವೇ ಸೋಲಿನ ಭೀತಿ ಶುರುವಾಗಿದೆ. ಗೂಂಡಾಗಿರಿ ಮಾಡುವ ಜೊತೆಗೆ ಸ್ವಲ್ಪ ಅಭಿವೃದ್ಧಿಯನ್ನು ಮಾಡಿದ್ದರೆ, ಈಗ ಊರಿಗಿಂತ ಮುಂಚೆ ಮತದಾರರಿಗೆ ಕುಕ್ಕರ್‌ ಹಂಚುವ ಪ್ರಮೇಯ ಬರುತ್ತಿರಲಿಲ್ಲಾ ಮಾನ್ಯ ಡಿ .ಕೆ. ಸುರೇಶ್‌ ಅವರೇ ಎಂದು ವ್ಯಂಗ್ಯವಾಡಿದೆ.

ಅಂದ ಹಾಗೆ ಕನಕಪುರದಲ್ಲಿ ನೀವು ಪ್ರತಿ ಬಾರಿ ಗೆಲ್ಲುವುದು ಗೂಂಡಾಗಿರಿಯಿಂದ ಎಂದು ತಿಳಿದಿತ್ತು, ಆದರೆ ನಿಮ್ಮ ಗೂಂಡಾ ಮನಸ್ಸಿನೊಳಗೆ ವಾಮಮಾರ್ಗದ ಕುಕ್ಕರ್‌ ವಿಶಲ್‌ ಸಹ ಇದೆ ಎಂಬುದು ಇಂದು ಜಗಜ್ಜಾಹೀರಾಗಿದೆ. ಮತದಾರರಿಗೆ ಕುಕ್ಕರ್‌ ಆಮಿಷ ಒಡ್ಡುತ್ತಿರುವ ಸಂಸದ ಡಿಕೆ ಸುರೇಶ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಭಾರತೀಯ ಚುನಾವಣಾ ಆಯೋಗಕ್ಕೆ ಟ್ವೀಟ್ ಮೂಲಕ ಬಿಜೆಪಿ ಒತ್ತಾಯಿಸಿದೆ. ಅಲ್ಲದೆ, ಕುಕ್ಕರ್​ ಬಾಕ್ಸ್​ಗಳ ಫೋಟೋಗಳನ್ನು ಹಂಚಿಕೊಂಡಿದೆ.

Shwetha M