ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ! – ಬಸನಗೌಡ ಪಾಟೀಲ್‌ ಯತ್ನಾಳ್‌

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ! – ಬಸನಗೌಡ ಪಾಟೀಲ್‌ ಯತ್ನಾಳ್‌

ಕರ್ನಾಟಕದಲ್ಲಿ ಈಗ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಪ್ರಚಾರದ ಭರಾಟೆ ಜೋರಾಗಿದೆ. ಇದರ ನಡುವೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಮ್ಮ ಮುಖ್ಯಮಂತ್ರಿ ಆಗುವ ಆಸೆಯನ್ನು ಪ್ರಚಾರದ ವೇಳೆ ಬಿಚ್ಚಿಟ್ಟಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ ಆಗ್ತೀನಿ ಎಂದು ಯತ್ನಾಳ್‌ ಹೇಳಿದ್ದಾರೆ. ಅದಲ್ಲದೇ ನಾನು ಯಾರಿಗೂ ಅಪ್ಪಾಜಿ ಅಂತ ಕಾಲಿಗೆ ಬೀಳಲ್ಲ ಎನ್ನುವ ಮೂಲಕ ಪರೋಕ್ಷವಾಗಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ವಿರುದ್ಧವೂ ಕಿಡಿಕಾರಿದರು.

ಇದನ್ನೂ ಓದಿ: ಟ್ರೋಲ್ ಗಳ ನಡುವೆ ಹಾರ್ದಿಕ್ ಪಾಂಡ್ಯ ಸಹೋದರ ಅರೆಸ್ಟ್! – ಪಾಂಡ್ಯ ಬ್ರದರ್ಸ್ ಯಾಮಾರಿದ್ದೇಗೆ..?  

ಅಥಣಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ  ಯತ್ನಾಳ್‌, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ನಾನೇ ಮುಖ್ಯಮಂತ್ರಿ ಆಗುತ್ತೇನೆ. ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೇ ಉತ್ತರ ಕರ್ನಾಟಕದ, ನಾನೇ ಮುಖ್ಯಮಂತ್ರಿಯಾಗುತ್ತೇನೆ. ಜಾತಿ ಜಾತಿ ಅಂತ ನೋಡದೆ, ದೇಶ ಉಳಿಸುವುದಕ್ಕಾಗಿ ಎಲ್ಲರೂ ವೋಟ್ ಹಾಕಿ ಅಂತ ಹೇಳಿದ್ದಾರೆ.

ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿ, ಸಾಹುಕಾರ್ ಸಾಹುಕಾರ್ ಯಾಕೆ ಅನ್ನುತ್ತೀರಿ. ಅವರ ಮನೆಯ ತೊಟ್ಟಿಲನಲ್ಲಿರುವ ಕಂದಮ್ಮಗಳಿಗೂ ನಮಸ್ಕರಿಸುತ್ತೀರಿ. ಯಾಕೆ ನಿಮಗೆ ಸ್ವಾಭಿಮಾನ ಇಲ್ಲವೇ? ನಿಮ್ಮ ಜಮೀನಿನಲ್ಲಿ ಕಬ್ಬು ಬೆಳೆಯುತ್ತೀರಾ ಅಥವಾ ಅವರ ಜಮೀನಿನಲ್ಲಿ ಬೆಳೆಯುತ್ತೀರಾ? ಯಾರಿಗೂ ನಮಸ್ಕರಿಸಬೇಡಿ, ಸ್ವಾವಲಂಭಿಗಳಾಗಿ. ಪ್ರಧಾನಿ ನರೇಂದ್ರ ಮೋದಿಯವರೇ ಕಾಲಿಗೆ ನಮಸ್ಕಾರ ಮಾಡಿಸಿಕೊಳ್ಳುವುದಿಲ್ಲ. ಅಂದಮೇಲೆ ಇವರ ಕಾಲಿಗೆ ಏಕೆ ನಮಸ್ಕಾರ ಮಾಡುತ್ತೀರಿ ಎಂದು ಗುಡುಗಿದರು.

ನಾನು ಯಾರಿಗೂ ಅಪ್ಪಾಜಿ ಅಪ್ಪಾಜಿ ಅಂತ ಕಾಲಿಗೆ ನಮಸ್ಕರಿಸುವುದಿಲ್ಲ. ದೇವರು ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ನಾನು ಯಾರಿಗೂ ವಂಚನೆ ಮಾಡುವುದಿಲ್ಲ. ರೈತರು ಬರಗಾಲ ಬರಲಿ ಅಂತ ಬಯಸುತ್ತಾರೆ, ಐದು ಲಕ್ಷದ ಆಸೆಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅಂತ ಹೇಳಿದರು. ಇಂದು ಗ್ಯಾರಂಟಿ ಗ್ಯಾರಂಟಿ ಅಂತಿದ್ದಾರೆ, ಆದರೆ ದೇಶ ಉಳಿದರೆ ಮಾತ್ರ ಗ್ಯಾರಂಟಿ ಜಾರಿಯಲ್ಲಿರುತ್ತದೆ. ದೇಶ ಉಳಿಯದಿದ್ದರೆ, ಮುಸ್ಲಿಂರೆಲ್ಲ ಒಂದಾದರೆ ಹಿಂದೂಗಳ ಜಮೀನು ಉಳಿಯಲ್ಲ, ಮನೆನೂ ಉಳಿಯಲ್ಲ. ಒಂದು ಮತಾಂತರವಾಗಬೇಕು, ಇಲ್ಲ ಸಾಯಬೇಕು ಇವೆರಡೇ ಆಯ್ಕೆ ಉಳಿಯುತ್ತೆ. ನಮ್ಮ ಅಜ್ಜ, ಮುತ್ತಜ್ಜರು ಟಿಪ್ಪು ಸುಲ್ತಾನ್ ವಿರುದ್ಧ, ಔರಂಗಜೇಬನ ವಿರುದ್ಧ ಹೋರಾಟ ಮಾಡಿದ್ದಕ್ಕೆ ಹಿಂದೂಗಳು ಉಳಿದಿದ್ದೇವೆ. ನಾವು ಯಾರಾದರೂ ಹಿಂದೂಗಳಾಗಿ ಉಳಿದಿದ್ದರೆ ಛತ್ರಪತಿ ಶಿವಾಜಿ ಮಹಾರಾಜರ ಪುಣ್ಯದಿಂದ ಎಂದರು.

Shwetha M