ಸರ್ಕಾರದ ವಿರುದ್ಧ ಮತ್ತೆ ಮೊಳಗಿತು ಕಹಳೆ – ಸಾರಿಗೆ, ಆರೋಗ್ಯ ಇಲಾಖೆ ನೌಕರರ ಬೇಡಿಕೆಗಳೇನು..!?

ಸರ್ಕಾರದ ವಿರುದ್ಧ ಮತ್ತೆ ಮೊಳಗಿತು ಕಹಳೆ – ಸಾರಿಗೆ, ಆರೋಗ್ಯ ಇಲಾಖೆ ನೌಕರರ ಬೇಡಿಕೆಗಳೇನು..!?

ಬೆಂಗಳೂರು : ನಗರದ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನಾ ಕಾವು ಜೋರಾಗಿದೆ. ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗ್ತಿದೆ. ಸಾರಿಗೆ ನೌಕರರು ಹಾಗೂ ಆರೋಗ್ಯ ಸಿಬ್ಬಂದಿ ಸಮರ ಸಾರಿದ್ದು, ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ಇದನ್ನೂ ಓದಿ : ಅಮೆರಿಕಕ್ಕೆ ಹೋಗೋ ಪ್ಲಾನ್ ಇದ್ಯಾ? – ಭಾರತೀಯರಿಗೆ ವೀಸಾ ಪಡೆಯಲು ಹೊಸ ನಿಯಮ

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ರೆ ಮತ್ತೊಂದೆಡೆ ಆರೋಗ್ಯ ಇಲಾಖೆ ಸಿಬ್ಬಂದಿ ಬೆಂಗಳೂರು ಚಲೋಗೆ  ಕರೆ ಕೊಟ್ಟಿದ್ದಾರೆ.. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಸಾರಿಗೆ ಇಲಾಖೆಯ 4 ನಿಗಮಗಳ ನೌಕರರಿಂದ ಪ್ರತಿಭಟನೆ ನಡೆಯುತ್ತಿದ್ದು ಫ್ರೀಡಂ ಪಾರ್ಕ್ ನಲ್ಲಿ ಕುಟುಂಬ ಸಮೇತ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿದ್ದಾರೆ. ಆದ್ರೆ ಬಸ್ ಸಂಚಾರದಲ್ಲಿ ಯಾವುದೇ ಅಡೆತಡೆ ಇಲ್ಲದಂತೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ಸಾರಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದಾರೆ. ಏನೆಲ್ಲಾ ಬೇಡಿಕೆಗಳನ್ನ ಇಟ್ಟಿದ್ದಾರೆ ಅನ್ನೋ ಮಾಹಿತಿ ಇಲ್ಲಿದೆ.

– 2020ರ ಜ.1 ರಿಂದ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಬಾಕಿ ಇದ್ದು, ಕೂಡಲೇ ವೇತನ ಹೆಚ್ಚಳ ಮಾಡುವುದು

– ಮುಷ್ಕರದ ಸಮಯದಲ್ಲಿ ವಜಾಗೊಂಡಿರುವ ನಾಲ್ಕು ನಿಗಮಗಳ ನೌಕರರನ್ನು ಯಾವುದೇ ಷರತ್ತುಗಳಿಲ್ಲದೆ ಮರುನೇಮಕಾತಿ ಮಾಡಿಕೊಳ್ಳುವುದು

-ಮುಷ್ಕರದ ಸಮಯದಲ್ಲಿ ಸಾರಿಗೆ ನೌಕರರು ಮತ್ತು ಅವರ ಕುಟುಂಬಸ್ಥರ ಮೇಲೆ ದಾಖಲಾಗಿರುವ ಎಲ್ಲಾ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು

– ಸಾರಿಗೆ ಸಂಸ್ಥೆಯಲ್ಲಿ ನಿವೃತ್ತಿಗೊಂಡಿರುವ ನೌಕರರಿಗೆ ನೀಡಬೇಕಾಗಿರುವ ಬಾಕಿ ಹಣವನ್ನು ಕೂಡಲೇ ನೀಡುವುದು, ಅವರಿಗೆ ಸರಿಯಾದ ರೀತಿ ಪಿಂಚಣೆ ಸೌಲಭ್ಯವನ್ನು ಒದಗಿಸುವುದು

-ಸಾರಿಗೆ ಸಂಸ್ಥೆಯ ನೌಕರರಿಗೆ ನಗದುರಹಿತ ಉತ್ತಮವಾದ ಆರೋಗ್ಯ ಯೋಜನೆಗಳನ್ನು ಒದಗಿಸುವುದು.

ಇದು ಸಾರಿಗೆ ನೌಕರರ ಬೇಡಿಕೆಗಳಾದ್ರೆ ಮತ್ತೊಂದೆಡೆ ಬಿಎಂಎಸ್ ಸಂಘ ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದೆ. ಸರ್ಕಾರದ ವಿರುದ್ಧ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಇಂದು ಪ್ರತಿಭಟನೆ ನಡೆಸಲು ಮುಂದಾಗಿದೆ. ರಾಜ್ಯದ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಇಂದು ಬೆಂಗಳೂರು ಚಲೋ ಕೈಗೊಂಡಿದ್ದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಭಾಗಿಯಾಗಲಿದ್ದಾರೆ. ಅಷ್ಟಕ್ಕೂ ಆರೋಗ್ಯ ಇಲಾಖೆ ಸಿಬ್ಬಂದಿಯ ಬೇಡಿಕೆಗಳು ಏನು ಅನ್ನೋ ಮಾಹಿತಿ ಇಲ್ಲಿದೆ.

– ರಾಜ್ಯದ ಆರೋಗ್ಯ ಇಲಾಖೆ ಗುತ್ತಿಗೆ ಹೊರಗುತ್ತಿಗೆ ನೌಕರರ ಸಂಬಂಧಿಸಿದ ಶ್ರೀನಿವಾಸಚಾರ್ಯ ವರದಿ ಜಾರಿಗೆ ಆಗ್ರಹ

-ರಾಜ್ಯದ ಆರೋಗ್ಯ ಇಲಾಖೆ ಒಳ, ಹೊರಗುತ್ತಿಗೆ ನೌಕರರ ಸೇವೆ ಆಧಾರದ ಮೇಲೆ ಖಾಯಂ ಮಾಡಬೇಕು

– ಸರ್ಕಾರದ ಎಲ್ಲಾ ಇಲಾಖೆಗಳ ಗುತ್ತಿಗೆ ಹೊರಗುತ್ತಿಗೆ ಕಾರ್ಮಿಕ ಪದ್ದತಿ ಕೈ ಬಿಡಬೇಕು ಹಾಲಿ ಇರುವ ಗುತ್ತಿಗೆ ಕಾರ್ಮಿಕರನ್ನ ಖಾಯಂಗೊಳಿಸಬೇಕು

– ಕಟ್ಟಡ ಕಾರ್ಮಿಕ ಮಂಡಳಿಯಲ್ಲಿನ ಭ್ರಷಚಾರ ನಿಲ್ಲಿಸಿ ತನಿಖೆ ಮಾಡಿಸಬೇಕು

suddiyaana