ಬಹುಭಾಷಾ ಗಾಯಕ ಪಂಕಜ್ ನಿಧನ – ಮಂಗಳವಾರ ಅಂತ್ಯಕ್ರಿಯೆ

ಬಹುಭಾಷಾ ಗಾಯಕ ಪಂಕಜ್ ನಿಧನ – ಮಂಗಳವಾರ ಅಂತ್ಯಕ್ರಿಯೆ

ಬಾಲಿವುಡ್ ನ ಹೆಸರಾಂತ ಗಾಯಕ, ಗಝಲ್ ಮಾಂತ್ರಿಕ ಪಂಕಜ್ ಉದಾಸ್ ನಿಧನರಾಗಿದ್ದಾರೆ. ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಸೋಮವಾರ ಉದಾಸ್‌ ನಿಧನರಾಗಿದ್ದಾರೆ ಎಂದು ಉದಾಸ್‌ ಅವರ ಪುತ್ರಿ ನಯಾಬ್​ ಉಧಾಸ್​ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ವಾಹನ ಸವಾರರಿಗೆ ಹೊಸ ರೂಲ್ಸ್! – ಇನ್ನುಮುಂದೆ ವಾಹನ ಸೀಜ್ ಆದ್ರೆ ನೇರ  ಗುಜುರಿಗೆ!

ದಶಕದಲ್ಲಿ ಪಂಕಜ್​ ಉಧಾಸ್​ ಅವರು ಗಝಲ್​ ಗಾಯನದ ಮೂಲಕ ಫೇಮಸ್​ ಆಗಿದ್ದರು. ಬಳಿಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಬಾಲಿವುಡ್​ ಮಾತ್ರವಲ್ಲದೇ ಕನ್ನಡದಲ್ಲೂ ಅವರು ಹಾಡಿದ್ದಾರೆ. ಸುದೀಪ್ ನಟನೆಯ ಸ್ಪರ್ಶ ಸಿನಿಮಾದ ‘ಚೆಂದಕ್ಕಿಂತ ಚೆಂದ ನೀನೇ ಸುಂದರ’ ಗೀತೆಯು ಕೂಡ ಇವರ  ಕಂಠದಲ್ಲೇ ಮೂಡಿ ಬಂದಿತ್ತು. ಪಂಕಜ್ ಉದಾಸ್ ನಿಧನಕ್ಕೆ ಬಾಲಿವುಡ್, ಗಝಲ್ ಪ್ರೇಮಿಗಳ ಕಂಬನಿ ಮಿಡಿದಿದ್ದಾರೆ. ಅವರು ಹಾಡಿದ ಗೀತೆಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ.

ಉದಾಸ್‌ ಅಂತಿಮ ದರ್ಶನಕ್ಕಾಗಿ ಅವರ ಪಾರ್ಥಿವ ಶರೀರವನ್ನು ಅವರ ಮನೆಯಲ್ಲಿ ಇರಿಸಲಾಗಿದೆ. ಪಂಕಜ್ ಉದಾಸ್ ಅವರಿಗೆ ಅಂತಿಮ ನಮನ ಸಲ್ಲಿಸಲು ಚಿತ್ರರಂಗ ಗಣ್ಯರು ಮತ್ತು ರಾಜಕೀಯ ನಾಯಕರು ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಮಂಗಳವಾರ ಮಧ್ಯಾಹ್ನ 3 ರಿಂದ 5 ಗಂಟೆಯೊಳಗೆ ವರ್ಲಿಯಲ್ಲಿ ಅವರ ಅಂತ್ಯಕ್ರಿಯೆಯನ್ನು ಮಾಡಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Shwetha M