ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ನೋಡಿ ಬೆಚ್ಚಿಬಿದ್ದ ಬಾಲಿವುಡ್..!

ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ನೋಡಿ ಬೆಚ್ಚಿಬಿದ್ದ ಬಾಲಿವುಡ್..!

ಮಣಿಪುರದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮೆರವಣಿಗೆ ಕೃತ್ಯಕ್ಕೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿದೆ. ಇದೀಗ ಬಾಲಿವುಡ್ ಮಂದಿ ಕೂಡಾ ಈ ಕೃತ್ಯವನ್ನು ಖಂಡಿಸಿದ್ದಾರೆ. ತಪ್ಪಿತಸ್ಥರು ಯಾರೇ ಇರಲಿ. ಅವರನ್ನು ಬಂಧಿಸಿ ಶಿಕ್ಷೆ ಕೊಡಿ ಎಂದು ಬಾಲಿವುಡ್ ನಟ ನಟಿಯರು ಆಗ್ರಹಿಸಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್, ರಿತೇಶ್ ದೇಶ್‌ಮುಖ್, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸೇರಿ ಅನೇಕರು ಈ ಪ್ರಕರಣವನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ನಡೆದ ಪೈಶಾಚಿಕ ಕೃತ್ಯ ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ – ತಪ್ಪಿತಸ್ಥರ ಬಂಧನಕ್ಕೆ ಅಮಿತ್ ಶಾ ಸೂಚನೆ

ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಲೇ ಇದೆ. ಅನೇಕ ಹಿಂಸಾಚಾರ ಪ್ರಕರಣಗಳು ಬೆಳಕಿಗೆ ಬಂದಿವೆ. ಆದರೆ, ಇದರಲ್ಲಿ ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದ್ದು ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಮಹಿಳೆಯರ ಮೇಲಾದ ಸಾಮೂಹಿಕ ಅತ್ಯಾಚಾರ ಪ್ರಕರಣ. ಈ ವಿಡಿಯೋ ಈಗ ವೈರಲ್ ಆಗಿದೆ. ಈ ಬಗ್ಗೆ ಅನೇಕ ಸೆಲೆಬ್ರಿಟಿಗಳು ದನಿಯೆತ್ತಿದ್ದಾರೆ. ಈ ವಿಚಾರವಾಗಿ ಬಾಲಿವುಡ್ ನಟ ಅಕ್ಷಯ್ ಕುಮಾರ್ , ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವೀಡಿಯೋ ನೋಡಿ ಬೆಚ್ಚಿಬಿದ್ದೆ, ಜಿಗುಪ್ಸೆ ಉಂಟಾಯಿತು. ತಪ್ಪಿತಸ್ಥರಿಗೆ ಘೋರ ಶಿಕ್ಷೆ ಸಿಗಲಿ. ಆ ಶಿಕ್ಷೆ ಹೇಗಿರಬೇಕು ಎಂದರೆ ಅದನ್ನು ನೋಡಿ ಮುಂದೆ ಯಾರೂ ಇಂಥ ತಪ್ಪು ಮಾಡುವ ಬಗ್ಗೆ ಆಲೋಚನೆಯನ್ನೂ ಮಾಡಬಾರದು’ ಎಂದು ಅವರು ಬರೆದುಕೊಂಡಿದ್ದಾರೆ. ಬಾಲಿವುಡ್ ಹೀರೋ ರಿತೇಶ್ ದೇಶ್‌ಮುಖ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿಡಿಯೋದಿಂದ ಆಳವಾಗಿ ವಿಚಲಿತನಾಗಿದ್ದೇನೆ. ಕೋಪ ಬರುತ್ತಿದೆ. ಇಂತಹ ಅಪರಾಧಕ್ಕೆ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಮಹಿಳೆಯ ಘನತೆಯ ಮೇಲಿನ ದಾಳಿಯು ಮಾನವೀಯತೆಯ ಮೇಲಿನ ದಾಳಿಯೇ ಆಗಿದೆ’ ಎಂದು ರಿತೇಶ್ ಹೇಳಿದ್ದಾರೆ.

‘ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿಡಿಯೋ ಭಯಾನಕವಾಗಿದೆ. ಇದು ನನ್ನನ್ನು ಬೆಚ್ಚಿಬೀಳಿಸಿದೆ. ಮಹಿಳೆಯರಿಗೆ ಆದಷ್ಟು ಬೇಗ ನ್ಯಾಯ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಆಗಲಿ’ ಎಂದು ಕಿಯಾರಾ ಟ್ವೀಟ್ ಮಾಡಿದ್ದಾರೆ.  ಇಷ್ಟೇ ಅಲ್ಲದೆ ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮೊದಲಾದವರು ಕೂಡ ಟ್ವೀಟ್ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಆಗ್ರಹಿಸಿದ್ದಾರೆ.

suddiyaana