ಬೆಂಗಳೂರಿನ ಮತ್ತೊಂದು ಹೋಟೆಲ್‌ಗೆ ಬಾಂಬ್‌ ಬೆದರಿಕೆ! – ಕೆಫೆ ಬ್ಲಾಸ್ಟ್ ಮಾಡಿದ್ದು ನಾನೇ ಎಂದು ಪೊಲೀಸರಿಗೆ ಪತ್ರ ಬರೆದ ಅನಾಮಿಕ!

ಬೆಂಗಳೂರಿನ ಮತ್ತೊಂದು ಹೋಟೆಲ್‌ಗೆ ಬಾಂಬ್‌ ಬೆದರಿಕೆ! – ಕೆಫೆ ಬ್ಲಾಸ್ಟ್ ಮಾಡಿದ್ದು ನಾನೇ ಎಂದು ಪೊಲೀಸರಿಗೆ ಪತ್ರ ಬರೆದ ಅನಾಮಿಕ!

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸುವಂತೆ ಮಾಡಿತ್ತು. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಈಗಾಗಲೇ ಸ್ಟೋಟದ ಮಾಸ್ಟರ್‌ಮೈಂಡ್‌ ಹಾಗೂ ಬಾಂಬರ್‌ ಅನ್ನು ಅರೆಸ್ಟ್‌ ಮಾಡಲಾಗಿದೆ. ಇದೀಗ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಖಾಸಗಿ ಹೋಟೆಲ್‌ಗೆ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮುಂಬೈ ಇಂಡಿಯನ್ಸ್‌ಗೆ ರಾಜಸ್ತಾನ್ ರಾಯಲ್ಸ್ ಸವಾಲ್- ಹಿಂದಿನ ಸೋಲಿನ ಸೇಡು ತೀರಿಸಿಕೊಳ್ತಾರಾ ಹಾರ್ದಿಕ್ ಪಾಂಡ್ಯ?

ಬೆಂಗಳೂರಿನ ಜಾಲಹಳ್ಳಿಯ ಕದಂಬ  ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಪತ್ರ ಕಳುಹಿಸಲಾಗಿದೆ. ಸೋಮವಾರ ಮಧ್ಯಾಹ್ನ  11.45ಕ್ಕೆ ಕದಂಬ ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರೋದಾಗಿ ಪೋಸ್ಟ್ ಮೂಲಕ ಬೆದರಿಕೆ ಪತ್ರ ಹಾಕಲಾಗಿದೆ. ಈ ಸುದ್ದಿ ತಿಳಿದ ಕೂಡಲೇ ಕದಂಬ ಗಾರ್ಡೇನಿಯಾ ಹೋಟೆಲ್‌ಗೆ ಜಾಲಹಳ್ಳಿ ಪೊಲೀಸರು, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಹೊಟೇಲ್‌ನಲ್ಲಿದ್ದ ಸಿಬ್ಬಂದಿ, ಗ್ರಾಹಕರನ್ನೆಲ್ಲಾ ಪೊಲೀಸರು ಹೊರಗೆ ಕಳುಹಿಸಿದ್ದಾರೆ. ಕದಂಬ ಹೋಟೆಲ್ ಬಳಿಯೇ ಜಾಲಹಳ್ಳಿ ಪೊಲೀಸರು ಬೀಡು ಬಿಟ್ಟಿದ್ದಾರೆ.

ದುಷ್ಕರ್ಮಿಗಳು ಪೊಲೀಸರಿಗೆ ಕಳುಹಿಸಿರುವ ಪತ್ರದಲ್ಲಿ, ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದ್ದು ನಾನೇ. ಈಗ ಈ ಹೊಟೇಲ್‌ನಲ್ಲಿ ಬಾಂಬ್ ಇಟ್ಟಿರುವುದು ಕೂಡ ನಾನೇ ಎಂದು ಬರೆದಿದ್ದಾರೆ ಎನ್ನಲಾಗಿದೆ. ಬಾಂಬ್ ಬೆದರಿಕೆ ಪತ್ರ ಬರೆದಿರುವ ಅನಾಮಿಕ ಪೊಲೀಸರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಇದೀಗ ಹೋಟೆಲ್‌ ಅನ್ನು ಸಂಪೂರ್ಣವಾಗಿ ಪರಿಶೀಲಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Shwetha M

Leave a Reply

Your email address will not be published. Required fields are marked *