ನ್ಯಾಯ ಕೊಡಿಸಿ ಎಂದು ತಾಯಿ ಮಗಳು ಮನೆಗೆ ಬಂದಿದ್ದರು – ಲೈಂಗಿಕ ಕಿರುಕುಳ ಆರೋಪಕ್ಕೆ ಬಿಎಸ್‌ವೈ ಪ್ರತಿಕ್ರಿಯೆ

ನ್ಯಾಯ ಕೊಡಿಸಿ ಎಂದು ತಾಯಿ ಮಗಳು ಮನೆಗೆ ಬಂದಿದ್ದರು – ಲೈಂಗಿಕ ಕಿರುಕುಳ ಆರೋಪಕ್ಕೆ ಬಿಎಸ್‌ವೈ ಪ್ರತಿಕ್ರಿಯೆ

ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲೆ ಗಂಭೀರ ಆರೋಪವೊಂದು ಕೇಳಿಬಂದಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಿಎಸ್‌ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿದೆ. ಇದೀಗ ಈ ಕುರಿತು ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಆ ಅರೋಪ ನಿರಾಧಾರವಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ವೈ, ಯಾರೋ ಒಬ್ಬ ಹೆಣ್ಣು ಮಗಳು ಅನ್ಯಾಯವಾಗಿದೆ ಎಂದು ನನ್ನ ಬಳಿ ಬಂದಿದ್ದರು. ತಾಯಿಮಗಳು ಅನೇಕ ಬಾರಿ ಬಂದು ಹೋಗುತ್ತಿದ್ದರು. ಆದರೆ ನಾನು ಅವರನ್ನು ಮಾತಾಡಿಸೋ ಪ್ರಯತ್ನ ಮಾಡಿಲ್ಲ. ಹೀಗೆ ಒಂದು ದಿನ ಕಣ್ಣೀರು ಹಾಕುತ್ತಿರುವುದನ್ನು ನೋಡಿ ಒಳಗೆ ಕರೆದುಕೊಂಡು ಹೋಗಿ ಏನು ಸಮಸ್ಯೆ ಅನ್ನೋದನ್ನು ಕೇಳಿದೆ. ವೇಳೆ ಅವರು ನಮಗೆ ತುಂಬಾ ಅನ್ಯಾಯವಾಗಿದೆ ಎಂದು ಹೇಳಿದರು. ಆಗ ನಾನು ಪೊಲೀಸ್ಕಮಿಷನರ್ಗೆ ಕರೆ ಮಾಡಿ ವಿಚಾರ ತಿಳಿಸಿದೆ.  ಬಳಿಕ ಅವರನ್ನ ಕಮಿಷನರ್​ ಬಳಿ ಕಳಿಸಿಕೊಟ್ಟೆ ಎಂದು ಹೇಳಿದರು.

ಇದನ್ನೂ ಓದಿ: ಆಹಾರಕ್ಕಾಗಿ ಕಾಯುತ್ತಿದ್ದ ಸಂತ್ರಸ್ತರ ಮೇಲೆ ದಾಳಿ ನಡೆಸಿದ ಇಸ್ರೇಲ್‌  – 20 ಮಂದಿ ಸಾವು

ಇದಾದ ಮೇಲೆ ಆಕೆ ನನ್ನ ಮೇಲೆಯೇ ಏನೇನೋ ಮಾತಾಡೋಕೆ ಶುರು ಮಾಡಿದಳು. ಆಗ ಮಹಿಳೆ ಯಾಕೋ ಆರೋಗ್ಯವಂತೆಯಾಗಿಲ್ಲ ಅನ್ನೋದು ನನಗೆ ಗೊತ್ತಾಯಿತು. ಹೀಗಾಗಿ ಅತೀ ಹೆಚ್ಚು ಮಾತಾಡಿದರೆ ಉಪಯೋಗ ಇಲ್ಲವೆಂದು ನಾನು ಅವರನ್ನು ಪೊಲೀಸ್ಕಮಿಷನರ್ಬಳಿ ಕಳುಹಿಸಿಕೊಟ್ಟೆ. ಅವರು ಕೂಡ ಎಲ್ಲಾ ವಿಚಾರಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಈಗ ಇದು ಬೇರೆ ರೀತಿ ಏನೋ ಮಾಡಿ ನನ್ನ ಮೇಲೆ ಎಫ್ಐಆರ್ಆಗಿದೆ. ಕಾನೂನು ಪ್ರಕಾರ ಏನು ಎದುರಿಸಬೇಕೋ ಎದುರಿಸ್ತೀನಿ. ಆದರೆ ಒಬ್ಬರಿಗೆ ಉಪಕಾರ ಮಾಡಲು ಹೋಗಿ ಹೀಗಾಗಿದೆ. ಆದರೆ ಮಹಿಳೆಗೆ ಕಷ್ಟ ಇದೆ ಅಂತಾ ಹೇಳಿ ಸ್ವಲ್ಪ ಹಣನೂ ಕೊಟ್ಟು ಕಳುಹಿಸಿದ್ದೀನಿ. ಇಷ್ಟೆಲ್ಲಾ ಮಾಡಿದರೂ ಹೀಗೆ ರೀತಿಯ ಬೆಳವಣಿಗೆ ನಡೆದಿದೆ. ಇದೆಲ್ಲಾ ನಾವು ನಿರೀಕ್ಷೆ ಮಾಡಿರಲಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಏನಿದು ಕೇಸ್?‌

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಸಂಬಂಧ ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್ಠಾಣೆಯಲ್ಲಿ ದೂರು ನೀಡಿದ್ದಾಳೆ. ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 () ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Shwetha M