ಮೋದಿ ಸಮಾವೇಶಕ್ಕೆ ತೆರಳುತ್ತಿದ್ದ ಬಸ್‌ ಟ್ರಕ್‌ಗೆ ಡಿಕ್ಕಿ – 39ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯ

ಮೋದಿ ಸಮಾವೇಶಕ್ಕೆ ತೆರಳುತ್ತಿದ್ದ ಬಸ್‌ ಟ್ರಕ್‌ಗೆ ಡಿಕ್ಕಿ – 39ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರಿಗೆ ಗಂಭೀರ ಗಾಯ

ಭೋಪಾಲ್: ಮಧ್ಯಪ್ರದೇಶದ ಖಾರ್ಗೋನ್​ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ಬಸ್ಸೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸುಮಾರು 39 ಕ್ಕೂ ಹೆಚ್ಚು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಕಾವೇರಿ ಕಿಚ್ಚು ತೀವ್ರಗೊಳ್ಳುತ್ತಿರುವ ನಡುವೆಯೇ ಕೆಆರ್‌ಎಸ್‌ ಅಣೆಕಟ್ಟೆಯಿಂದ ಹೊರ ಹರಿವು ಹೆಚ್ಚಳ!

ಜನಸಂಘದ ಸಹ ಸಂಸ್ಥಾಪಕ ದೀನ್​ದಯಾಳ್​ ಉಪಧ್ಯಾಯ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಕಾರ್ಯಕರ್ತ ಮಹಾಕುಂಭವನ್ನು ಸೋಮವಾರ ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಖಾರ್ಗೋನ್​ ಜಿಲ್ಲೆಯ ಕಾಸರವಾಡ ಬಳಿ ತಡರಾತ್ರಿ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಪ್ರದೇಶದಲ್ಲಿ ನಡೆದ ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕಳೆದ 45ದಿನಗಳ ಅಂತರದಲ್ಲಿ ಪ್ರಧಾನಿ ಮೋದಿ ಮೂರನೇ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಸಮಾವೇಶದಲ್ಲಿ ಸುಮಾರು 10ಲಕ್ಷ ಮಂದಿ ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ.

Shwetha M