ಖಡ್ಗದಿಂದ ಕೇಕ್ ಕಟ್- ಅತ್ಯಾಚಾರ ಆರೋಪಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ರಾಮ್ ರಹೀಮ್ ಸಂಭ್ರಮ

ಖಡ್ಗದಿಂದ ಕೇಕ್ ಕಟ್- ಅತ್ಯಾಚಾರ ಆರೋಪಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ರಾಮ್ ರಹೀಮ್ ಸಂಭ್ರಮ

ಪೆರೋಲ್ ಮೇಲೆ ಜೈಲಿಂದ ಹೊರಬಂದಿರುವ ಅತ್ಯಾಚಾರ ಆರೋಪಿ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಖಡ್ಗದಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಅತ್ಯಾಚಾರ ಮತ್ತು ಕೊಲೆ ಆರೋಪ ಎದುರಿಸಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್ ಶನಿವಾರ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿಂದ 40 ದಿನಗಳ ಪೆರೋಲ್ ಪಡೆದಿದ್ದರು. ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿರುವ ಅವರ ಬರ್ನಾವಾ ಆಶ್ರಮಕ್ಕೆ ಬಂದಿರುವ ರಾಮ್ ರಹೀಮ್ ಬೃಹತ್ ಗಾತ್ರದ ಕೇಕ್​ ನ್ನು ಖಡ್ಗದಿಂದ ಕಟ್ ಮಾಡಿದ್ದಾರೆ.

ಇದನ್ನೂ ಓದಿ:  ಬೆಂಗಳೂರಲ್ಲಿ ಆಕಾಶದಿಂದ ಬಿತ್ತು ಹಣದ ಮಳೆ – ನಂಗೆ ನಂಗೆ ಅಂತಾ ಮುಗಿಬಿದ್ದ ಜನ!

ಜಾಮೀನು ಅರ್ಜಿಯಲ್ಲಿ ರಾಮ್ ರಹೀಮ್ ಅವರು ಜನವರಿ 25 ರಂದು ಮಾಜಿ ಡೇರಾ ಮುಖ್ಯಸ್ಥ ಷಾ ಸತ್ನಾಮ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದ ಸಮಾರಂಭದಲ್ಲಿ ಭಾಗವಹಿಸಲು ಬಯಸುವುದಾಗಿ ಹೇಳಿದ್ದರು. ಐದು ವರ್ಷಗಳ ನಂತರ ಈ ರೀತಿ ಆಚರಿಸಲು ಅವಕಾಶ ಸಿಕ್ಕಿದೆ ಹಾಗಾಗಿ ಕನಿಷ್ಠ ಐದು ಕೇಕ್‌ಗಳನ್ನಾದರೂ ಕತ್ತರಿಸಬೇಕು. ಇದು ಮೊದಲ ಕೇಕ್ ಎಂದು ಹೇಳುತ್ತಿರುವುದು ವೀಡಿಯೋದಲ್ಲಿ ಕೇಳಿಬಂದಿತ್ತು. ಶಸ್ತ್ರಾಸ್ತ್ರಗಳ ಕಾಯ್ದೆ ಪ್ರಕಾರ ಶಸ್ತ್ರಾಸ್ತ್ರಗಳ ಸಾರ್ವಜನಿಕ ಪ್ರದರ್ಶನವನ್ನು ನಿಷೇಧಿಸಲಾಗಿದೆ.

ರಾಮ್ ರಹೀಮ್ ಸೋಮವಾರ ಹರ್ಯಾಣ ಮತ್ತು ಇತರ ಕೆಲವು ರಾಜ್ಯಗಳಲ್ಲಿ ಅನೇಕ ಸ್ಥಳಗಳಲ್ಲಿ ತಮ್ಮ ಪಂಥದ ಸ್ವಯಂಸೇವಕರು ಆಯೋಜಿಸಿದ್ದ ಮೆಗಾ ಸ್ವಚ್ಛತಾ ಅಭಿಯಾನವನ್ನು ಉದ್ಘಾಟಿಸಿದ್ದರು. ರಾಜ್ಯಸಭಾ ಸಂಸದ ಕ್ರಿಶನ್ ಲಾಲ್ ಪನ್ವಾರ್ ಮತ್ತು ಮಾಜಿ ಸಚಿವ ಕ್ರಿಶನ್ ಕುಮಾರ್ ಬೇಡಿ ಸೇರಿದಂತೆ ಹರ್ಯಾಣದ ಕೆಲವು ಹಿರಿಯ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಳೆದ 14 ತಿಂಗಳಲ್ಲಿ ಇದು ನಾಲ್ಕನೇ ಬಾರಿ ಮತ್ತು ಮೂರು ತಿಂಗಳೊಳಗೆ ಎರಡನೇ ಬಾರಿಗೆ ರಾಮ್ ರಹೀಮ್‌ಗೆ ಪೆರೋಲ್ ನೀಡಲಾಗಿದೆ. ಇದಕ್ಕೂ ಮೊದಲು, ಹರ್ಯಾಣ ಪಂಚಾಯತ್ ಚುನಾವಣೆ ಮತ್ತು ಆದಂಪುರ ವಿಧಾನಸಭಾ ಉಪಚುನಾವಣೆಗೆ ಮುಂಚಿತವಾಗಿ ಅವರನ್ನು ಅಕ್ಟೋಬರ್ 2022 ರಲ್ಲಿ 40 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿತ್ತು.

suddiyaana