ಸೂರ್ಯ ಬಂಡಲ್ ಬ್ಯಾಂಕ್ಎ ಟಿಎಂ ಕಾರ್ಡ್‌ – ತೇಜಸ್ವಿ ಸೂರ್ಯ ಸೋಲಿಸಲು ಕೈ ಕಾರ್ಯಕರ್ತರಿಂದ ಹೊಸ ಅಸ್ತ್ರ!

ಸೂರ್ಯ ಬಂಡಲ್ ಬ್ಯಾಂಕ್ಎ ಟಿಎಂ ಕಾರ್ಡ್‌ – ತೇಜಸ್ವಿ ಸೂರ್ಯ ಸೋಲಿಸಲು ಕೈ ಕಾರ್ಯಕರ್ತರಿಂದ ಹೊಸ ಅಸ್ತ್ರ!

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆದ್ದೇ ಗೆಲ್ಲಬೇಕು ಅಂತಾ ಪಣ ತೊಟ್ಟಿದೆ. ಇದೀಗ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯರನ್ನು ಸೋಲಿಸಲು ಕೈ ಕಾರ್ಯಕರ್ತರು ರಣತಂತ್ರ ರೂಪಿಸಿದ್ದಾರೆ. ಗುರು ರಾಘವೇಂದ್ರ ಬ್ಯಾಂಕ್ ಹಗರಣವನ್ನು ಮುಂದಿಟ್ಟುಕೊಂಡು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ವಿನೂತನ ಪ್ರತಿಭಟನೆ, ಪ್ರಚಾರ ನಡೆಸುತ್ತಿದೆ.

ಇದನ್ನೂ ಓದಿ: ಕೊಹ್ಲಿಗೆ RCBಯೇ ಉಸಿರು! – ಆರ್‌ಸಿಬಿ ಸೋಲಿನ ನೋವಲ್ಲಿ ಏಕಾಂಗಿಯಾದ್ರಾ ವಿರಾಟ್ ಕೊಹ್ಲಿ?

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಾದ್ಯಂತ ಪ್ರಚಾರ ಆರಂಭಿಸಿದ ಕೈಪಡೆ, ತೇಜಸ್ವಿ ಸೂರ್ಯ ಭಾವಚಿತ್ರ ಇರುವ ನಕಲಿ ಎಟಿಎಂ ಕಾರ್ಡ್  ವಿತರಣೆ ಮಾಡುತ್ತಿದೆ. ನಕಲಿ ಎಟಿಎಂ ಕಾರ್ಡ್​ನಲ್ಲಿ ತೇಜಸ್ವಿ ಸೂರ್ಯ ಹಣ ಗುಳುಂ ಮಾಡುತ್ತಿರುವ ಫೋಟೋ ಅಳವಡಿಕೆ ಮಾಡಲಾಗಿದೆ. ಅಲ್ಲದೇ, ಎಟಿಎಂ ಕಾರ್ಡ್ ಮೇಲೆ ಎಸ್​​ಬಿಬಿ ಬ್ಯಾಂಕ್ ಎಂದು ಉಲ್ಲೇಖಿಸಲಾಗಿದೆ. ಎಸ್​​ಬಿಬಿ ಬ್ಯಾಂಕ್ ಎಂದರೆ, ‘ಸೂರ್ಯ ಬಂಡಲ್ ಬ್ಯಾಂಕ್’ ಎಂದು ನಮೂದಿಸಲಾಗಿದೆ.

‘ಸೂರ್ಯನ ನಂಬಿ ಬ್ಯಾಂಕ್​ನಲ್ಲಿ ಹಣ ಇಡಬೇಡಿ’ ಎಂದೂ ಕಾರ್ಡ್ ಮೇಲೆ ಮುದ್ರಣ ಮಾಡಲಾಗಿದೆ. ಕಾರ್ಡ್ ಮೇಲೆ ‘100% ನೋ ಮನಿ ಬ್ಯಾಕ್’ ಎಂದು ಮುದ್ರಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕ್ಷೇತ್ರದಾದ್ಯಂತ ನಕಲಿ ಎಟಿಎಂ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಈ ಮೂಲಕ ಗುರು ರಾಘವೇಂದ್ರ ಬ್ಯಾಂಕ್ ಹಗರಣವನ್ನು ಚುನಾವಣಾ ಪ್ರಚಾರಕ್ಕಾಗಿ ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಹೋಟೆಲ್ ಅಂಗಡಿಗಳಿಗೆ ನಕಲಿ ಎಟಿಎಂ ಕಾರ್ಡ್​​ಗಳನ್ನು ಕಾಂಗ್ರೆಸ್ ಕಾರ್ಯಕರ್ತರು ವಿತರಿಸುತ್ತಿದ್ದಾರೆ. ಕಾಂಗ್ರೆಸ್‌ ವಿತರಿಸುತ್ತಿರುವ ನಕಲಿ ಎಟಿಎಂ ಕಾರ್ಡ್ ನೋಡಿ ಸಾರ್ವಜನಿಕರು ಗೊಂದಲಕ್ಕೊಳಗಾಗಿದ್ದಾರೆ.

Shwetha M