ಔರಂಗಾಬಾದ್ & ಉಸ್ಮಾನಾಬಾದ್ ಹೆಸರು ಬದಲಾವಣೆ – ಹೊಸ ಹೆಸರುಗಳೇನು ಗೊತ್ತಾ..!?

ಔರಂಗಾಬಾದ್ & ಉಸ್ಮಾನಾಬಾದ್ ಹೆಸರು ಬದಲಾವಣೆ  – ಹೊಸ ಹೆಸರುಗಳೇನು ಗೊತ್ತಾ..!?

ಮಹಾರಾಷ್ಟ್ರದ ಎರಡು ಪ್ರಮುಖ ನಗರಗಳ ಹೆಸರು ಬದಲಾವಣೆ ಮಾಡಲಾಗಿದೆ. ಔರಂಗಾಬಾದ್ (Aurangabad) ಹಾಗೂ ಉಸ್ಮಾನಾಬಾದ್ ಗಳ (Osmanabad) ಹೆಸರುಗಳನ್ನು ಅನುಕ್ರಮವಾಗಿ ಛತ್ರಪತಿ ಸಾಂಭಾಜಿನಗರ್ (Chhatrapati Sambhajinagar) ಹಾಗೂ ಧಾರಾಶಿವ್ (Dharashiv) ಅಂತ ಬದಲಾಯಿಸಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ. ಕೇಂದ್ರ ಗೃಹ ಸಚಿವಾಲಯವು ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಸಮ್ಮತಿ ಸೂಚಿಸಿ ಮಹಾರಾಷ್ಟ್ರದಲ್ಲಿರುವ ಜಿಲ್ಲೆಗಳ ಹೆಸರುಗಳನ್ನು ಬದಲಾಯಿಸಲು ಕೇಂದ್ರ ಸರ್ಕಾರಕ್ಕೆ ಯಾವುದೇ ಆಕ್ಷೇಪಣೆ ಇಲ್ಲ ಎಂದು ಶುಕ್ರವಾರ ಬಿಡುಗಡೆಯಾಗಿರುವ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಇದನ್ನೂ ಓದಿ : ಅಕ್ವೇರಿಯಂನಲ್ಲಿದ್ದ ಮೀನು ಮೃತಪಟ್ಟಿದ್ದಕ್ಕೆ ಬಾಲಕ ಆತ್ಮಹತ್ಯೆ – ಮನೆಯ ಮಹಡಿ ಮೇಲೆ ಕಂಡಿದ್ದು ಭಯಾನಕ!

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದು,  ಉಸ್ಮಾನಾಬಾದ್ ಹಾಗೂ ಔರಂಗಾಬಾದ್ ಜಿಲ್ಲೆಗಳ ಹೆಸರುಗಳನ್ನು ಬದಲಾಯಿಸುವ ಮೂಲಕ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ತನ್ನ ಧೃಡಸಂಕಲ್ಪ ಪ್ರದರ್ಶಿಸಿದೆ ಎಂದು ಹೇಳಿದ್ದಾರೆ. ಔರಂಗಾಬಾದ್ ಹೆಸರನ್ನು ಛತ್ರಪತಿ ‘ಸಾಂಭಾಜಿನಗರ್’ ಎಂದು ಮತ್ತು ಉಸ್ಮಾನಾಬಾದ್ ಹೆಸರು ‘ಧಾರಾಶಿವ್’ ಅಂತ ಬದಲಾಯಿಸಲು ರಾಜ್ಯ ಸರ್ಕಾರ ಕಳಿಸಿದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಸಹಸ್ರಾರು ಧನ್ಯವಾದಗಳು. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು ತಮ್ಮ ಸಂಕಲ್ಪವನ್ನು ಪ್ರದರ್ಶಿಸಿದೆ,’ ಎಂದು ಫಡ್ನವಿಸ್ ತಮ್ಮ ಟ್ವೀಟ್​ನಲ್ಲಿ ಹೇಳಿದ್ದಾರೆ.

ಕೇಂದ್ರ ಗೃಹ ಸಚಿವಾಲಯದ ಅನುಮೋದನಾ ಪತ್ರದ ಪ್ರತಿಯನ್ನು ಫಡ್ನಾವಿಸ್ ತಮ್ಮ ಟ್ವೀಟ್ ಗೆ ಲಗತ್ತಿಸಿದ್ದಾರೆ. ಹಿಂದೆ ಅಧಿಕಾರದಲ್ಲಿದ್ದ ಮಹಾ ವಿಕಾಸ್ ಆಗಾಧಿ ಸರ್ಕಾರದ ಮುಖ್ಯಭಾಗವಾಗಿದ್ದ ಶಿವಸೇನೆಯು ಉಸ್ಮಾನಾಬಾದ್ ಹಾಗೂ ಔರಂಗಾಬಾದ್ ಜಿಲ್ಲೆಗಳ ಹೆಸರುಗಳನ್ನು ಬದಲಾಯಿಸಲು ಬಹಳ ದಿನಗಳಿಂದ ಪ್ರಯತ್ನಶೀಲವಾಗಿತ್ತು. ಕಳೆದ ವರ್ಷ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಈ ಎರಡು ಜಿಲ್ಲೆಗಳ ಹೆಸರುಗಳನ್ನು ಬದಲಾಯಿಸುವ ಪ್ರಸ್ತಾಪವನ್ನು ಸದನದಲ್ಲಿ ಪಾಸು ಮಾಡಿತ್ತು

suddiyaana