ಸೌಜನ್ಯ ಸಾವಿನ ನ್ಯಾಯಕ್ಕಾಗಿ ಚಲೋ ಬೆಳ್ತಂಗಡಿ – ಸರ್ಕಾರದ ವಿರುದ್ಧ ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ

ಸೌಜನ್ಯ ಸಾವಿನ ನ್ಯಾಯಕ್ಕಾಗಿ ಚಲೋ ಬೆಳ್ತಂಗಡಿ – ಸರ್ಕಾರದ ವಿರುದ್ಧ ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ

ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ 17 ವರ್ಷದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹಿಸಿ ಹೋರಾಟಗಳು ಹೆಚ್ಚುತ್ತಿವೆ. ಇವತ್ತು ಕೂಡ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಚಲೋ ಬೆಳ್ತಂಗಡಿ ಹೆಸರಿನಡಿ ಮಹಾಧರಣಿ ನಡೆಸಲಾಯ್ತು. ಪ್ರಕರಣದ ತನಿಖೆಯನ್ನ ಎಸ್​ಐಟಿಗೆ ಒಪ್ಪಿಸುವಂತೆ ಒತ್ತಾಯಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ಮಾಡಲಾಯ್ತು. ಮಿನಿ ವಿಧಾನ ಸೌಧದ ಎದುರು ಜನಪರ ಸಂಘಟನೆಗಳ ಒಕ್ಕೂಟದ ಗೌರವಾಧ್ಯಕ್ಷ, ಮಾಜಿ ಶಾಸಕ ಕೆ.ವಸಂತ ಬಂಗೇರ ಹೋರಾಟಕ್ಕೆಚಾಲನೆ ನೀಡಿದರು.

ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಬಂಗೇರಾ ಹನ್ನೊಂದು ವರ್ಷಗಳ ಹಿಂದೆ ಸೌಜನ್ಯಳ ಹತ್ಯೆಯಾಗಿದೆ. ಸೌಜನ್ಯ ಅತ್ಯಾಚಾರ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಪ್ರಾರಂಭದಲ್ಲಿ ಪೊಲೀಸ್ ತನಿಖೆ ಬಳಿಕ ಸಿಐಡಿ ತನಿಖೆಯಾಯಿತು ಆದರೂ ಈ ತನಿಖೆಗಳು ಹಳ್ಳ ಹಿಡಿದವು. ಬಳಿಕ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ವೇಳೆ ಸಿಬಿಐಗೆ ವಹಿಸಲಾಯಿತು ಎಂದರು. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧವೂ ವಾಗ್ದಾಳಿ ನಡೆಸಿದ ಬಂಗೇರಶಾಸಕ ಹರೀಶ್ ಪೂಂಜಾರನ್ನು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ: ಹಿಜಾಬ್‌ ಬಳಿಕ ಈಗ ಅಬಯಾ ಕೂಡ ನಿಷೇಧ! – ಶಾಲೆಗಳಲ್ಲಿ ಹೊಸ ನಿಯಮ ಜಾರಿಗೊಳಿಸಿದ ಫ್ರಾನ್ಸ್‌!

ಇನ್ನು ಚಿತ್ರದುರ್ಗದ ಮುರುಘಾಶ್ರೀ ಪ್ರಕರಣ ಬಯಲು ಮಾಡಿದ್ದ ಮೈಸೂರಿನ ಒಡನಾಡಿ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಸ್ಟಾನ್ಲಿ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು.. ಸಿಎಂ ಸಿದ್ದರಾಮಯ್ಯನವರು ರಾಜ್ಯದ ಹೆಣ್ಣು ಮಕ್ಕಳಿಗೆ ಹಲವು ಭಾಗ್ಯಗಳಮನ್ನ ಕೊಟ್ಟಿದ್ದಾರೆ. ಈಗ ಸೌಜನ್ಯಳ ಸಾವಿನ ತನಿಖೆಯನ್ನ ಬಯಲಿಗೆಳೆದು ಮತ್ತೊಂದು ಭಾಗ್ಯ ಕೊಡಬೇಕು. ತನಿಖೆ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯದೇ ತಾವೇ ಕಾನೂನು ಮೂಲಕ ನಿರ್ಧಾರ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

ಇನ್ನು ಮಗಳ ಸಾವಿನ ನ್ಯಾಯಕ್ಕಾಗಿ 11 ವರ್ಷಗಳಿಂದಲೂ ಬೇಡುತ್ತಿರುವ ಸೌಜನ್ಯ ತಾಯಿ ಕುಸುಮಾವತಿ ಇವತ್ತಿನ ಪ್ರತಿಭಟನೆಯಲ್ಲೂ ಭಾಗಿಯಾಗಿದರು. ನನ್ನ ಮಗಳನ್ನ ಕೊಂದವರಿಗೆ ಶಿಕ್ಷೆಯಾಗಬೇಕು.. ನನಗೆ ನ್ಯಾಯ ಕೊಡಿಸಿ ಎಂದು ಸೆರಗೊಡ್ಡಿ ಕಣ್ಣೀರಿಟ್ಟರು.

ಸೌಜನ್ಯ ಸಾವಿನ ನ್ಯಾಯಕ್ಕಾಗಿ ಆರಂಭದಿಂದಲೂ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ರಾಜಕೀಯ ಪಕ್ಷಗಳ ವಿರುದ್ಧ ಹರಿಹಾಯ್ದರು.. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತ್ಯಾಚಾರ ಕೊಲೆ ನಡೆದಿತ್ತು.. ಆದ್ರೆ ನ್ಯಾಯ ಸಿಗ್ಲಿಲ್ಲ.. ಈ ಬಾರಿ ಜನ ಕಾಂಗ್ರೆಸ್ ಪಕ್ಷಕ್ಕೆ ಸಂಪೂರ್ಣ ಅಧಿಕಾರ ಕೊಟ್ಟಿದ್ದಾರೆ.. ಈ ಬಾರಿ ನೀವು ಸೌಜನ್ಯ ಸಾವಿಗೆ ನ್ಯಾಯ ಕೊಡದಿದ್ರೆ ಎರಡೂ ಪಕ್ಷಗಳು ಸರ್ವನಾಶ ಆಗಿ ಹೋಗುತ್ತವೆ ಎಂದರು.

ಇನ್ನು ಪ್ರತಿಭಟನೆಯಲ್ಲಿ ಪ್ರೊ.ನರೇಂದ್ರ ನಾಯಕ್, ಕೆ.ನೀಲಾ, ಪ್ರೊ.ಕಾಳ ಚೆನ್ನೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ರು.. ಎಲ್ಲರೂ ಕೂಡ ಸೌಜನ್ಯ ಸಾವಿನ ಪ್ರಕರಣ ಮರುತನಿಖೆಗೆ ಒಪ್ಪಿಸಬೇಕು ಹಾಗೂ ನೈಜ ಅಪರಾಧಿಗಳನ್ನ ಪತ್ತೆ ಹಚ್ಚುವ ಮೂಲಕ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದ್ರು..  ಒಟ್ಟಾರೆ ಸೌಜನ್ಯ ಪರ ದಿನದಿಂದ ದಿನಕ್ಕೆ ಹೋರಾಟಗಳು ಹೆಚ್ಚುತ್ತಿವೆ.. ಆದ್ರೆ ರಾಜ್ಯ ಸರ್ಕಾರ ಇದನ್ನ ಎಷ್ಟು ಗಂಭೀರವಾಗಿ ಪರಿಗಣಿಸುತ್ತೆ.. ಮರುತನಿಖೆಗೆ ಒಪ್ಪಿಸುತ್ತಾ ಅನ್ನೋದನ್ನು ಕಾದುನೋಡಬೇಕಾಗಿದೆ.

suddiyaana