ಮಹಿಳೆಯರ ‘ಮತ’ ಗೆಲ್ಲಲು ಸಿಎಂ ಹೊಸ ಪ್ಲ್ಯಾನ್ – ಬಜೆಟ್​ನಲ್ಲಿ ಸಿಗುತ್ತಾ ‘ಗೃಹಿಣಿ ಶಕ್ತಿ’..?

ಮಹಿಳೆಯರ ‘ಮತ’ ಗೆಲ್ಲಲು ಸಿಎಂ ಹೊಸ ಪ್ಲ್ಯಾನ್ – ಬಜೆಟ್​ನಲ್ಲಿ ಸಿಗುತ್ತಾ ‘ಗೃಹಿಣಿ ಶಕ್ತಿ’..?

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಾಗಲೇ ರಾಜ್ಯ ಬಿಜೆಪಿ ಸರ್ಕಾರ ನಾನಾ ಕಸರತ್ತು ಮಾಡುತ್ತಿದೆ. ಮುಂದಿನ ತಿಂಗಳು ಕೊನೇ ಬಜೆಟ್ ಆಗಿರೋದರಿಂದ ಮಹಿಳೆಯರ ಮತಬುಟ್ಟಿ ಗಟ್ಟಿಗೊಳಿಸಿಕೊಳ್ಳಲು ಹೊಸ ಅಸ್ತ್ರ ಹೂಡಿದೆ. ಕಾಂಗ್ರೆಸ್​ನ ‘ಗೃಹಲಕ್ಷ್ಮೀ’ ಯೋಜನೆಗೆ ಸೆಡ್ಡು ಹೊಡೆದು ‘ಗೃಹಿಣಿ ಶಕ್ತಿ’ ಯೋಜನೆ ಜಾರಿಗೆ ತರಲು ಸಿಎಂ ಬಸವರಾಜ ಬೊಮ್ಮಾಯಿ ಚಿಂತನೆ ನಡೆಸಿದ್ದಾರೆ.

ಇದನ್ನೂ ಓದಿ :ಲಕ್ಷ್ಮೀ ಹೆಬ್ಬಾಳ್ಕರ್ ಗಿಂತ ನಾನೇ ಹೆಚ್ಚು ಹಣ ಕೊಡ್ತೇನೆ – ರಮೇಶ್ ಜಾರಕಿಹೊಳಿ ಬಹಿರಂಗ ಆಮಿಷ..!

ಮಹಿಳೆಯರ ಮನ ಗೆಲ್ಲಲು ಇದೀಗ ಸಿಎಂ ಬೊಮ್ಮಾಯಿ ಗೃಹಿಣಿ ಶಕ್ತಿ ಎಂಬ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದಾರೆ. ಕಾಂಗ್ರೆಸ್​ನ ಗೃಹಲಕ್ಷ್ಮಿ ಯೋಜನೆಗೆ ಸೆಡ್ಡು ಹೊಡೆಯೋಕೆ ಈ ಯೋಜನೆ ಜಾರಿಗೆ ತರಲು ಬಿಜೆಪಿ ಮುಂದಾಗಿದೆ. ಈ ಬಾರಿ ಬಜೆಟ್​​​​ನಲ್ಲಿ ಮಹಿಳೆಯರಿಗಾಗಿ ಹೊಸ ಯೋಜನೆ ತರಲು ಸಿಎಂ ಚಿಂತನೆ ನಡೆಸಿದ್ದು, ಈ ಸಂಬಂಧ ಇಂದು ಸಂಜೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ಹಣದ ಲಭ್ಯತೆ ಆಧಾರದ ಮೇಲೆ ಗೌರವ ಧನ ಫಿಕ್ಸ್ ಮಾಡುವ ಮೂಲಕ ಈ ಬಜೆಟ್​​ನಲ್ಲಿಯೇ ಯೋಜನೆ ಘೋಷಣೆ ಮಾಡಿ ತಮ್ಮ ಸರ್ಕಾರದ ಅವಧಿಯಲ್ಲೇ ಅನುಷ್ಠಾನಕ್ಕೆ ತರಲು ಸಿಎಂ ಪ್ಲ್ಯಾನ್ ಮಾಡಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ  ಕೆಲವೇ ತಿಂಗಳು ಬಾಕಿಯಿದ್ದು, ಈಗಾಗಲೇ ಪ್ರಚಾರ ಕಾರ್ಯ ಶುರುವಾಗಿದೆ. ಜನರನ್ನ ಸೆಳೆಯಲು ವಿವಿಧ ಯೋಜನೆಗಳನ್ನ ಪ್ರಕಟಿಸಲಾಗುತ್ತಿದೆ. ಇತ್ತೀಚೆಗೆ ನಗರದ ಅರಮನೆ ಆವರಣದಲ್ಲಿ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡುವ ‘ಗೃಹಲಕ್ಷ್ಮಿ’ ಯೋಜನೆಗೆ ಸಂಬಂಧಿಸಿದ ಭಿತ್ತ ಪತ್ರ ಅನಾವರಣ ಮಾಡುವ ಮೂಲಕ ಅಧಿಕೃತವಾಗಿ ಯೋಜನೆಯನ್ನು ಘೋಷಿಸಿದ್ದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಿದರೆ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ 2,000 ರೂಪಾಯಿ ನೀಡಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.  ರಾಜ್ಯದ ಮಹಿಳೆಯರೇ ನಿಮ್ಮ ಮನೆಯ ಗ್ಯಾಸ್ ಸಿಲಿಂಡರ್ ಖಾಲಿಯಾಗಿದೆ ಎಂಬ ಚಿಂತೆ ಬಿಡಿ. ನಿಮ್ಮ ಮನೆಯ ಸಿಲಿಂಡರ್ ತುಂಬಿಸುವುದು ಇನ್ಮುಂದೆ ಕಾಂಗ್ರೆಸ್ ಹೊಣೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಆದರೀಗ ಅದಕ್ಕೆ ವಿರುದ್ಧವಾಗಿ ಬಿಜೆಪಿ ಗೃಹಿಣಿ ಶಕ್ತಿ ಯೋಜನೆಯನ್ನ ಜಾರಿಗೆ ತರಲು ಪ್ಲ್ಯಾನ್​ ಮಾಡಿದೆ.

suddiyaana