ಮೂಕಾಂಬಿಕೆ ಸನ್ನಿಧಿಯಲ್ಲಿ ಸಿಎಂ-ರಿಷಬ್ ಶೆಟ್ಟಿ ಭೇಟಿ – ಬಿಜೆಪಿ ಪರ ಪ್ರಚಾರ ಮಾಡ್ತಾರಾ ಕಾಂತಾರ ನಟ?

ಮೂಕಾಂಬಿಕೆ ಸನ್ನಿಧಿಯಲ್ಲಿ ಸಿಎಂ-ರಿಷಬ್ ಶೆಟ್ಟಿ ಭೇಟಿ – ಬಿಜೆಪಿ ಪರ ಪ್ರಚಾರ ಮಾಡ್ತಾರಾ ಕಾಂತಾರ ನಟ?

ಸಿಎಂ ಬಸವರಾಜ ಬೊಮ್ಮಾಯಿ ಟೆಂಪಲ್ ರನ್‌ನಲ್ಲಿ ಬ್ಯುಸಿಯಾಗಿದ್ದಾರೆ. ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ ಗುರುವಾರ ಬೆಳಗ್ಗೆ ಕೊಲ್ಲೂರಿನ ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ನಟ ರಿಷಬ್ ಶೆಟ್ಟಿ ಭೇಟಿ ಮಾಡಿದ್ದಾರೆ.

ಇದನ್ನೂ ಓದಿ:  ‘ಬೆಂಕಿ’ಯಿಂದ ಸಿಎಂ ಬಸವರಾಜ ಬೊಮ್ಮಾಯಿ ಜಸ್ಟ್ ಮಿಸ್..! – ಹೆಲಿಪ್ಯಾಡ್ ಧಗಧಗ

ಸಿಎಂ ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ನಟ ರಿಷಬ್ ಶೆಟ್ಟಿ ಕೂಡ ಮೂಕಾಂಬಿಕೆಯ ದರ್ಶನಕ್ಕೆ ಆಗಮಿಸಿದ್ದರು. ದೇವಸ್ಥಾನದಲ್ಲಿ ಸಿಎಂ ಮತ್ತು ರಿಷಬ್ ಶೆಟ್ಟಿ ಆಕಸ್ಮಿಕವಾಗಿ ಭೇಟಿಯಾಗಿದ್ದಾರೆ. ಸಿಎಂರನ್ನು ನೋಡುತ್ತಿದ್ದಂತೆ ನಟ ರಿಷಬ್ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದರು. ಆಗ ರಿಷಬ್ ಬೆನ್ನು ತಟ್ಟಿ ಸಿಎಂ ಖುಷಿ ಪಟ್ಟರು. ಇದೇ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ‘ರಿಷಬ್ ಶೆಟ್ಟಿ ನಾವು ಬರುವಾಗ ದೇವಸ್ಥಾನದಲ್ಲೇ ಇದ್ದರು. ನಂತರ ಒಟ್ಟಿಗೆ ಪೂಜೆ ಮಾಡಿಸಿದ್ದೇವೆ. ನಮ್ಮದು ಆಕಸ್ಮಿಕ ಭೇಟಿ. ರಿಷಬ್ ಶೆಟ್ಟಿ ನನಗೆ ಒಳ್ಳೆಯ ಸ್ನೇಹಿತ. ಪ್ರಚಾರದ ಬಗ್ಗೆ ಇನ್ನೂ ಮಾತುಕತೆ ನಡೆಸಿಲ್ಲ. ಮುಂದಿನ ದಿನಗಳಲ್ಲಿ ಮೂಕಾಂಬಿಕೆಯ ಆಶೀರ್ವಾದದಿಂದ ಅವ್ರು ನಮ್ಮ ಪರವಾಗಿ ಪ್ರಚಾರ ಮಾಡಬಹುದು’ ಎಂದಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಉಡುಪಿ ಪ್ರವಾಸದಲ್ಲಿದ್ದು ಸಿಎಂ ಬಂದರೂ ಜಿಲ್ಲೆಯ ಐದು ಶಾಸಕರು ಗೈರಾಗಿದ್ದಾರೆ. ಬೈಂದೂರು ಎಂಎಲ್ಎ ಸುಕುಮಾರ್ ಶೆಟ್ಟಿ ಗೈರಾಗಿದ್ದಾರೆ. ಶಾಸಕ ರಘುಪತಿ ಭಟ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾಪು ಲಾಲಾಜಿ ಮೆಂಡನ್, ಟಿಕೆಟ್ ತಪ್ಪಿದ್ದಕ್ಕೆ ಬೇಸರದಲ್ಲಿರುವ ಮೂವರು ಶಾಸಕರು ಗೈರಾಗಿದ್ದಾರೆ. ಹಾಗೂ ಶಾಸಕ ಸುನಿಲ್ ಕುಮಾರ್ ಚುನಾವಣೆಯ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಹೀಗಾಗಿ ಸಿಎಂಗೆ ಕೋಟ ಶ್ರೀನಿವಾಸ ಪೂಜಾರಿ, ಪ್ರಮೋದ್ ಮಧ್ವರಾಜ್ ಸಾಥ್ ನೀಡಿದರು.

 

suddiyaana