ಇಂದು ರಟ್ಟಾಗುತ್ತಾ ʼಕೈʼ ಗ್ಯಾರಂಟಿ ಗುಟ್ಟು? – ಇಂದು ಸಚಿವ ಸಂಪುಟ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಇಂದು ರಟ್ಟಾಗುತ್ತಾ ʼಕೈʼ ಗ್ಯಾರಂಟಿ ಗುಟ್ಟು? – ಇಂದು ಸಚಿವ ಸಂಪುಟ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಜನರು ಕಾತುದಿಂದ ಕಾಯುತ್ತಿರುವ ಐದು ಗ್ಯಾರಂಟಿ ಜಾರಿ ಬಗ್ಗೆ ಶುಕ್ರವಾರ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಳಗ್ಗೆ 12 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. 200 ಯುನಿಟ್‌ ವಿದ್ಯುತ್‌ ಫ್ರೀ, ಮಹಿಳೆಯರಿಗೆ ಫ್ರೀ ಪಾಸ್‌ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

ಇದನ್ನೂ ಓದಿ: ಬಿಜೆಪಿ ವಿರುದ್ಧ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ಲ್ಯಾನ್ – ಜೂನ್ 12ರಂದು ನಾಯಕರ ಸಭೆ

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಇಂಧನ, ಆಹಾರ, ಸಾರಿಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕೌಶಲ ಅಭಿವೃದ್ಧಿ ಇಲಾಖೆಗಳ ಹಿರಿಯ ಅಧಿಕಾರಿಗಳಿಂದ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಕಲೆಹಾಕಿದ್ದಾರೆ. ಅಲ್ಲದೇ ಈ ಕುರಿತ ವರದಿಯನ್ನು ಆಯಾ ಇಲಾಖೆಗಳ ಸಚಿವರು ಸಭೆಯಲ್ಲಿ ಮಂಡಿಸಲಿದ್ದಾರೆ. ಬಳಿಕ ಯೋಜನೆಗಳ ಅನುಷ್ಠಾನ ಕುರಿತು ಚರ್ಚೆ ನಡೆಯಲಿದೆ. ಸಚಿವ ಸಂಪುಟ ಪೂರ್ವಭಾವಿಯಾಗಿ ಇತರ ಸಾಮಾನ್ಯ ವಿಷಯಗಳ ಬಗ್ಗೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

suddiyaana