ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಗುಣಮುಖ – ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಗುಣಮುಖ – ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಪಾರ್ವತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಇದನ್ನೂ ಓದಿ: ಶಾಲಾ ವಿದ್ಯಾರ್ಥಿಗಳ ಶೂ, ಸಾಕ್ಸ್ ಖರೀದಿಗೆ ಅನುದಾನ ಬಿಡುಗಡೆ – ಮಕ್ಕಳ ಹಣಕ್ಕೂ ಸರ್ಕಾರ ಕತ್ತರಿ!

ಸಿಎಂ ಪತ್ನಿ ಪಾರ್ವತಿ ಅವರು ನ್ಯೂಮೋನಿಯಾದಿಂದ ಬಳಲುತ್ತಿದ್ದರು. ಜೂ. 20 ರಂದು ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಪಾರ್ವತಿ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ಮನೆಗೆ ಮರಳಿದ್ದಾರೆ.

ಜೂನ್ 21ರಂದು ಬೆಳಗ್ಗೆ 9.30ಕ್ಕೆ ಸಿದ್ದರಾಮಯ್ಯನವರು ದೆಹಲಿಗೆ ತೆರಳಬೇಕಿತ್ತು. ಆದರೆ ಪತ್ನಿ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಳಗ್ಗೆಯೇ ಆಸ್ಪತ್ರೆಗೆ ಬಂದು ಪತ್ನಿಯ ಆರೋಗ್ಯ ವಿಚಾರಿಸಿದ್ದರು. ನಂತರ 11.30ಕ್ಕೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದರು. ಆಸ್ಪತ್ರೆಯಲ್ಲಿ ಪಾರ್ವತಿ ಅವರ ಜೊತೆಗೆ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಉಳಿದುಕೊಂಡಿದ್ದರು.

suddiyaana