ಸಿದ್ದು ಸಂಪುಟಕ್ಕೆ 8 ಮಂದಿ ಸಚಿವರ ಆಯ್ಕೆ – ಇಂದೇ ಪ್ರಮಾಣ ವಚನ

ಸಿದ್ದು ಸಂಪುಟಕ್ಕೆ 8 ಮಂದಿ ಸಚಿವರ ಆಯ್ಕೆ – ಇಂದೇ ಪ್ರಮಾಣ ವಚನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಜೊತೆಗೆ ಎಂಟು ಮಂದಿ ಸಚಿವರು ಇಂದು ಪ್ರಮಾಣ ವಚನ ಸ್ವೀಕಸಲಿದ್ದಾರೆ.‌

ಸಿದ್ದು ಸಂಪುಟ ರಚನೆ ಬಗ್ಗೆ ತಡರಾತ್ರಿವರೆಗೂ ಹೈಕಮಾಂಡ್‌ ಜೊತೆಗೆ ಮೀಟಿಂಗ್ ನಡೆದಿದ್ದು, ಮೊದಲ ಹಂತದಲ್ಲಿ ಎಂಟು ಶಾಸಕರನ್ನು ಸಚಿವರಾಗಿ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ:ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಪದಗ್ರಹಣ ಕಾರ್ಯಕ್ರಮ – ಯಾವ್ಯಾವ ರಸ್ತೆಗಳಲ್ಲಿ ಸಂಚಾರ ಬಂದ್?

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌ ಜೊತೆಗೆ ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್​ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಶನಿವಾರ ಮಧ್ಯಾಹ್ನ ಕಂಠೀರವ ಸ್ಟೇಡಿಯಂ ನಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನೂತನ ಸಚಿವರು ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ.

ಮೊದಲ ಹಂತದಲ್ಲಿ 20 ಕ್ಕೂ ಹೆಚ್ಚು ಸಚಿವರನ್ನು ಒಳಗೊಂಡ ಕ್ಯಾಬಿನೆಟ್ ರಚನೆಯಾಗುವ ನಿರೀಕ್ಷೆ ಇತ್ತು. ಆದರೆ ಕಡೇ ಗಳಿಗೆಯಲ್ಲಿ ಕೇವಲ 8 ಮಂದಿ ಶಾಸಕರನ್ನು ಮಾತ್ರ ಆಯ್ಕೆ ಮಾಡಲಾಗಿದೆ.

suddiyaana