ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ರಿಲೀಸ್ – ಸಿಎಂ ಬೊಮ್ಮಾಯಿ ವಿರುದ್ದ ‘ಕೈ’ ಅಭ್ಯರ್ಥಿ ಯಾರು?
![ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ರಿಲೀಸ್ – ಸಿಎಂ ಬೊಮ್ಮಾಯಿ ವಿರುದ್ದ ‘ಕೈ’ ಅಭ್ಯರ್ಥಿ ಯಾರು?](https://suddiyaana.com/wp-content/uploads/2023/04/1-congrss.jpg)
ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ಬಾಕಿಯಿರುವ ಹದಿನೈದು ಕ್ಷೇತ್ರಗಳ ಪೈಕಿ ಏಳು ಕ್ಷೇತ್ರಗಳಿಗೆ ಮಂಗಳವಾರ ಟಿಕೆಟ್ ಘೋಷಣೆ ಮಾಡಿದೆ.
ಇದನ್ನೂ ಓದಿ: ಅಯ್ಯಪ್ಪ ಭಕ್ತರಿಗೆ ಗುಡ್ ನ್ಯೂಸ್ – ಶಬರಿಮಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಗ್ರೀನ್ ಸಿಗ್ನಲ್
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ನಿರೀಕ್ಷೆಯಂತೆಯೇ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಶಿಗ್ಗಾಂವಿ ಕ್ಷೇತ್ರದಲ್ಲಿ ಮೊಹಮ್ಮದ್ ಯೂಸುಫ್ ಸವಣೂರು ಅವರನ್ನು ಕಣಕ್ಕಿಳಿಸಲಾಗಿದೆ. ಲಿಂಗಸುಗೂರು ಕ್ಷೇತ್ರದಲ್ಲಿ ಹಾಲಿ ಶಾಸಕ ದುರ್ಗಪ್ಪ ಎಸ್. ಹೂಲಗೇರಿ ಅವರಿಗೆ ಕಡೆಗೂ ಕಾಂಗ್ರೆಸ್ ಟಿಕೆಟ್ ನೀಡಿದೆ. ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ದೀಪಕ್ ಚಿಂಚೋರೆ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಆದರೆ ಹರಿಹರದಲ್ಲಿ ಹಾಲಿ ಶಾಸಕ ರಾಮಪ್ಪ ಅವರಿಗೆ ಟಿಕೆಟ್ ಕೈತಪ್ಪಿದ್ದು ನಂದಾಗವಿ ಶ್ರೀನಿವಾಸ್ ಗೆ ಟಿಕಟ್ ಘೋಷಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಹೆಚ್. ಡಿ ತಮ್ಮಯ್ಯ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಶ್ರವಣಬೆಳಗೊಳ ಕ್ಷೇತ್ರದಲ್ಲಿ ಎಂ. ಎ. ಗೋಪಾಲಸ್ವಾಮಿ ಅವರನ್ನು ಕಣಕ್ಕಿಳಿಸಿದೆ.
ನಾಮಪತ್ರ ಸಲ್ಲಿಕೆಗೆ ಕೇವಲ ಇನ್ನು ಎರಡು ದಿನಗಳು ಮಾತ್ರ ಉಳಿದಿದ್ದು ಶೀಘ್ರದಲ್ಲಿ ಉಳಿದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಮಂಗಳೂರು ಉತ್ತರ ಕ್ಷೇತ್ರ ಸೇರಿ ಎಂಟು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಾಕಿಯುಳಿದಿದೆ.