ಮೋದಿ ವಿರುದ್ಧ ಗುಡುಗಿದ್ದ ಕೋಲಾರದಲ್ಲೇ ಮತ್ತೆ ರಾಹುಲ್ ಭಾಷಣಕ್ಕೆ ‘ಕೈ’ ಪ್ಲ್ಯಾನ್ – ‘ಅನರ್ಹ’ವೇ ಅಸ್ತ್ರವಾಗುತ್ತಾ..?

ಮೋದಿ ವಿರುದ್ಧ ಗುಡುಗಿದ್ದ ಕೋಲಾರದಲ್ಲೇ ಮತ್ತೆ ರಾಹುಲ್ ಭಾಷಣಕ್ಕೆ ‘ಕೈ’ ಪ್ಲ್ಯಾನ್ – ‘ಅನರ್ಹ’ವೇ ಅಸ್ತ್ರವಾಗುತ್ತಾ..?

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಬಳಿಕ ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದೆ. ವಿಪಕ್ಷಗಳೆಲ್ಲಾ ಬಿಜೆಪಿ ವಿರುದ್ಧ ನಿಗಿನಿಗಿ ಕೆಂಡವಾಗಿವೆ.  ಇದೀಗ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಭಾಷಣ ಮಾಡಿದ ಸ್ಥಳದಿಂದಲೇ ಪ್ರತೀಕಾರ ತೀರಿಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.

ಕೋಲಾರದಲ್ಲಿ ಏಪ್ರಿಲ್ 5 ರಂದು ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಲು ಪ್ಲ್ಯಾನ್ ರೂಪಿಸಿದೆ. ಮತ್ತೆ ಅಲ್ಲಿಂದ ರಾಹುಲ್ ಗಾಂಧಿ ಭಾಷಣ ಮಾಡಲು ಪಕ್ಷವು ತಯಾರಿ ನಡೆಸಿದೆ ಎನ್ನಲಾಗಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಕೋಲಾರ ನಗರದಲ್ಲಿ ಮೋದಿ ಉಪನಾಮದ ಕುರಿತು ಮಾಡಿದ ಭಾಷಣಕ್ಕಾಗಿ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ, ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿದೆ. ಹೀಗಾಗಿ, ಅದೇ ಸ್ಥಳದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಮತ್ತು ಅದನ್ನು ತನ್ನ ಅನುಕೂಲಕ್ಕೆ ಬಳಸಿಕೊಳ್ಳಲು ಕಾಂಗ್ರೆಸ್ ಮುಂದಾಗಿದೆ.

ಇದನ್ನೂ ಓದಿ : ಸಂಸದ ಸ್ಥಾನದಿಂದ ರಾಹುಲ್ ಅನರ್ಹ – ಕಲಾಪಕ್ಕೆ ಕಪ್ಪು ಬಟ್ಟೆ ಧರಿಸಿ ಬಂದ ಕಾಂಗ್ರೆಸ್ ಸಂಸದರು

2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಕೆ.ಹೆಚ್. ಮುನಿಯಪ್ಪ ಪರ ಮತ ಯಾಚಿಸಿದ್ದರು. ತಮ್ಮ ಭಾಷಣದ ವೇಳೆ ರಾಹುಲ್ ಗಾಂಧಿ, ‘ನೀರವ್ ಮೋದಿ, ಲಲಿತ್ ಮೋದಿ ಮತ್ತು ನರೇಂದ್ರ ಮೋದಿ, ಎಲ್ಲರಿಗೂ ಒಂದೇ ಉಪನಾಮವಿದೆ ಮತ್ತು ಎಲ್ಲರೂ ಕಳ್ಳರು. ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ’ ಎಂದಿದ್ದರು. ಕೋಲಾರದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಮುಳಬಾಗಲಿನ ರೋಡ್‌ಶೋ ಮತ್ತು ಕೆಜಿಎಫ್‌ನ ಕಾರ್ಪೊರೇಷನ್ ಮೈದಾನದಲ್ಲಿ ಸಾರ್ವಜನಿಕ ರ್ಯಾಲಿಯಲ್ಲೂ ಅವರು ಇದನ್ನ ಪುನರುಚ್ಚರಿಸಿದ್ದರು.

suddiyaana