ಕ್ರೇಜಿಸ್ಟಾರ್ ಬರ್ತಡೇಗೆ ‘ಕೆಡಿ’ ಟೀಮ್​ನಿಂದ ಪೋಸ್ಟರ್ ಗಿಫ್ಟ್ – ‘ರವಿಮಾಮ’ನ ಲುಕ್ ಗೆ ಫ್ಯಾನ್ಸ್ ಫಿದಾ!

ಕ್ರೇಜಿಸ್ಟಾರ್ ಬರ್ತಡೇಗೆ ‘ಕೆಡಿ’ ಟೀಮ್​ನಿಂದ ಪೋಸ್ಟರ್ ಗಿಫ್ಟ್ – ‘ರವಿಮಾಮ’ನ ಲುಕ್ ಗೆ ಫ್ಯಾನ್ಸ್ ಫಿದಾ!

ಕ್ರೇಜಿಸ್ಟಾರ್ ರವಿಚಂದ್ರನ್. ಕನ್ನಡ ಚಿತ್ರರಂಗದ ಪಾಲಿನ ಅಪ್ಪಟ ‘ಚಿನ್ನ’. ಪ್ರೇಮಿಗಳ ಪಾಲಿಗೆ ‘ರಸಿಕ’. ಚಂದನವನಕ್ಕೆ ‘ಕಲಾವಿದ’ನಾಗಿ ಕಾಲಿಟ್ಟ ‘ರವಿಮಾಮ’ ಸ್ಟಾರ್ ನಟರ ನಡುವೆ ‘ರಣಧೀರ’ನಾಗಿ ಬೆಳೆದು ನಿಂತಿದ್ರು. ರಾಮಾಚಾರಿ, ಹಳ್ಳಿಮೇಷ್ಟ್ರು, ಯುದ್ಧಕಾಂಡ, ದೃಶ್ಯ, ಪುಟ್ನಂಜ, ಅಣ್ಣಯ್ಯ, ಮನೆದೇವ್ರು.. ಹೀಗೆ ಸಾಲು ಸಾಲು ಹಿಟ್ ಚಿತ್ರಗಳನ್ನ ಕನ್ನಡ ಚಿತ್ರರಂಗಕ್ಕೆ ಕೊಟ್ಟಿರುವ ‘ಏಕಾಂಗಿ’. ಸಿನಿಪ್ರಿಯರ ಪಾಲಿಗೆ ಸದಾ ‘ಸಿಪಾಯಿ’ಯಂತೆ ಇರುವ ರವಿಚಂದ್ರನ್​ಗಿಂದು 62 ನೇ ವರ್ಷದ ಹುಟ್ಟುಹಬ್ಬ.

ಇದನ್ನೂ ಓದಿ : ಮದುವೆ ದಿನ ವಿಶೇಷವಾಗಿರಬೇಕೇ ?- ಬಾಹ್ಯಾಕಾಶದಲ್ಲಿ ತಾಳಿಕಟ್ಟಲು ಸಿಗಲಿದೆ ಅವಕಾಶ..!

ಸಿನಿಮಾದ ಕಥೆ ಜೊತೆಗೆ ಅದ್ಧೂರಿ ಸೆಟ್​ಗಳ ಮೂಲಕ ಭಾರತೀಯ ಚಿತ್ರರಂಗವೇ ತನ್ನತ್ತ ತಿರುಗಿ ನೋಡುವಂತೆ ಮಾಡಿರುವ ರವಿಚಂದ್ರನ್ ಕನ್ನಡಿಗರ ಪಾಲಿಗೆ ನಿಜಕ್ಕೂ ಹೆಮ್ಮೆ. ಇಂದು ರವಿಮಾಮನ ಬರ್ತಡೇ ಎರಡು ಸಿನಿಮಾಗಳ ಪೋಸ್ಟರ್ ರಿಲೀಸ್ ಆಗಿವೆ. ಜೋಗಿ ಪ್ರೇಮ್ ನಿರ್ದೇಶನದ ಕೆಡಿ (KD) ಚಿತ್ರದಲ್ಲಿ ರವಿಚಂದ್ರನ್ ನಟಿಸುತ್ತಿದ್ದು, ಆ ಸಿನಿಮಾದ ಪೋಸ್ಟರ್ (Poster) ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಜೊತೆಗೆ ದ ಜಡ್ಜ್ ಮೆಂಟ್ ಸಿನಿಮಾದಲ್ಲಿ ರವಿಚಂದ್ರನ್ ನಟಿಸಿದ್ದು ಆ ಸಿನಿಮಾ ಟೀಮ್ ಕೂಡ ಪೋಸ್ಟರ್ ರಿಲೀಸ್ ಮಾಡಿದೆ.

ಕೆಲ ತಿಂಗಳ ಹಿಂದೆಯಷ್ಟೇ ರವಿಚಂದ್ರನ್ ಅವರ ಫಸ್ಟ್ ಲುಕ್ ಅನ್ನು ಕೆಡಿ ಟೀಮ್ ರಿಲೀಸ್ ಮಾಡಿತ್ತು. ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್ ನಲ್ಲಿ ರವಿಚಂದ್ರನ್ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಕೆವಿಎನ್‌ ನಿರ್ಮಾಣದ ಧ್ರುವ ಸರ್ಜಾ (Dhruva Sarja) ಮತ್ತು ನಿರ್ದೇಶಕ ಪ್ರೇಮ್ (Director Prem) ಕಾಂಬಿನೇಷನ್ ಸಿನಿಮಾ ‘ಕೆಡಿ’ ಸಖತ್ ಸದ್ದು ಮಾಡ್ತಿದೆ. ಚಿತ್ರದ ಟೈಟಲ್ ಮೂಲಕ ಕ್ಯೂರಿಯಸ್ ಹುಟ್ಟು ಹಾಕಿರುವ ಈ ಸಿನಿಮಾ ಬಗ್ಗೆ ಫ್ಯಾನ್ಸ್ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಈ ಸಿನಿಮಾ ಮೂಲಕ ಮತ್ತೊಮ್ಮೆ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಈಗಾಗಲೇ ಕೆಡಿ ಸಿನಿಮಾದ ಬಹುತೇಕ ಚಿತ್ರೀಕರಣ ಕೂಡ ಮುಗಿದಿದೆ ಎಂದು ಹೇಳಲಾಗುತ್ತಿದೆ. ಸಂಜಯ್ ದತ್ ಅವರ ಶೂಟಿಂಗ್ ವೇಳೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿತ್ತು. ಆ ನಂತರ ಚಿತ್ರೀಕರಣ ಸ್ವಲ್ಪ ದಿನದ ಮಟ್ಟಿಗೆ ನಿಲ್ಲಿಸಲಾಗಿತ್ತು. ಪ್ರೇಮ್ ಮತ್ತೆ ಈ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

‘ಕೆಡಿ’ ಸಿನಿಮಾ (KD Kannada Movie) ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ. ಕನ್ನಡ, ತಮಿಳು, ಹಿಂದಿ, ಮಲಯಾಳಂ ಹಾಗೂ ತೆಲುಗು ಭಾಷೆಯಲ್ಲಿ ತೆರೆಕಾಣಲಿದೆ. ಆ ಕಾರಣದಿಂದಲೂ ಈ ಸಿನಿಮಾ ಮೇಲೆ ನಿರೀಕ್ಷೆ ಇದೆ. ಅರ್ಜುನ್​ ಜನ್ಯ ಅವರು ಸಂಗೀತ ನೀಡುತ್ತಿದ್ದಾರೆ. ತೆರೆ ಹಿಂದೆ ಘಟಾನುಘಟಿ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಧ್ರುವ ಸರ್ಜಾ ಈ ಚಿತ್ರಕ್ಕೆ ಹೀರೋ. ಅವರ ವೃತ್ತಿಜೀವನಕ್ಕೆ ಇದು ಮಹತ್ವದ ಸಿನಿಮಾ ಆಗುವ ನಿರೀಕ್ಷೆ ಇದೆ.

 

 

suddiyaana