ಡಿ.ರೂಪಾ ವಿರುದ್ಧ ರೊಚ್ಚಿಗೆದ್ದ ರೋಹಿಣಿ ಪತಿ & ಫ್ಯಾನ್ಸ್ – IAS Vs IPS ಕಾಳಗ ಮತ್ತಷ್ಟು ಹೆಚ್ಚಿದ್ದೇಕೆ..!?

ಡಿ.ರೂಪಾ ವಿರುದ್ಧ ರೊಚ್ಚಿಗೆದ್ದ ರೋಹಿಣಿ ಪತಿ & ಫ್ಯಾನ್ಸ್ – IAS Vs IPS ಕಾಳಗ ಮತ್ತಷ್ಟು ಹೆಚ್ಚಿದ್ದೇಕೆ..!?

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನಡುವಿನ ಸಮರ ಮತ್ತೊಂದು ಹಂತ ತಲುಪಿದೆ. ನಿನ್ನೆಯಷ್ಟೇ ರೋಹಿಣಿ ಸಿಂಧೂರಿಯವರ ಖಾಸಗಿ ಫೋಟೋಗಳನ್ನ ಡಿ.ರೂಪಾ ಹಂಚಿಕೊಂಡಿದ್ದಾರೆ. ಹಾಗೂ ಸಾಲು ಸಾಲು ಆರೋಪಗಳನ್ನ ಮಾಡಿದ್ದರು. ಈ ಬೆನ್ನಲ್ಲೇ ರೋಹಿಣಿ ಅಭಿಮಾನಿಗಳು ಹಾಗೂ ರೋಹಿಣಿ ಪತಿ ಸುಧೀರ್ ರೆಡ್ಡಿ ರೂಪಾ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಮಹಿಳಾ ಅಧಿಕಾರಿಗಳ ಮಧ್ಯೆ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದ್ದು, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅಭಿಮಾನಿಗಳು ಫೇಸ್ ಬುಕ್​ನಲ್ಲಿ ಐಪಿಎಸ್ ಅಧಿಕಾರಿ ಡಿ.ರೂಪಾ ಅವರಿಗೆ ಸರಣಿ 9 ಪ್ರಶ್ನೆಗಳನ್ನು ಕೇಳಿದ್ದಾರೆ. ರೂಪ ಅವರಿಗೆ ಹ್ಯಾಷ್ ಟ್ಯಾಗ್ ಮಾಡಿ ‘ಉತ್ತರ ಕೊಡಿ ರೂಪಾ ಅವರೇ’ (#UttaraKodiRoopaAvre) ಎಂದು ಪ್ರಶ್ನೆ ಕೇಳಿದ್ದಾರೆ. ​ಅಷ್ಟಕ್ಕೂ ರೋಹಿಣಿ ಅಭಿಮಾನಿಗಳು ಕೇಳಿರುವ ಪ್ರಶ್ನೆಗಳು ಏನಂದರೆ

ಇದನ್ನೂ ಓದಿ : ಕನ್ನಡದ ಬಾಂಡ್ ಸಿನಿಮಾಗಳ ಸರದಾರ ಇನ್ನಿಲ್ಲ – ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ವಿಧಿವಶ..!

ರೋಹಿಣಿ ಅಭಿಮಾನಿಗಳ ಪ್ರಶ್ನೆ-1

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ #RohiniSindhuri ಅವರದ್ದು ಏನೂ ತಪ್ಪಿಲ್ಲ ಎಂದು ಈಗಾಗಲೇ ಎಲ್ಲರಿಗೂ ತಿಳಿದಿದ್ದು, ಮತ್ತೆ ಮತ್ತೆ ನೀವು ಅವರ ಮೇಲೆ ಆರೋಪ ಹೊರಿಸುತ್ತಿರುವುದು ಏಕೆ @D_Roopa_IPS ರವರೇ??? #UttaraKodiRoopaAvre #ಉತ್ತರಕೊಡಿರೂಪಅವ್ರೆ

ರೋಹಿಣಿ ಅಭಿಮಾನಿಗಳ ಪ್ರಶ್ನೆ -2

ಹಿರಿಯ ಐಪಿಎಸ್ ಅಧಿಕಾರಿಯಾದ ತಮ್ಮ ಗಮನಕ್ಕೆ ಈ ಆದೇಶ ಬಂದಿಲ್ಲವೇ @D_Roopa_IPS ರವರೇ..? #UttaraKodiRoopaAvre #ಉತ್ತರಕೊಡಿರೂಪ ಅವ್ರೆ

ರೋಹಿಣಿ ಅಭಿಮಾನಿಗಳ ಪ್ರಶ್ನೆ-3

ತಮ್ಮ ಟ್ವೀಟ್​​ನಲ್ಲಿ ಶಿಲ್ಪಾನಾಗ್ ಅವರನ್ನು ‘ಕನ್ನಡತಿ’ ಎಂದು ಹೈಲೆಟ್ ಮಾಡಿರುವ ತಾವು, ಸಿಂಧೂರಿಯವರು ಎಂದಾದರೂ ಕನ್ನಡಿಗರನ್ನು ದ್ವೇಷಿಸಿದ್ದನ್ನು ನೋಡಿದ್ದೀರಾ? ಅವರು ಯಾವುದೇ ವೇದಿಕೆ ಮೇಲೆ ತೆಲುಗಿನಲ್ಲಿ ಭಾಷಣ ಮಾಡಿದ್ದನ್ನು ನೋಡಿದ್ದೀರಾ? #UttaraKodiRoopaAvre #ಉತ್ತರಕೊಡಿರೂಪಅವ್ರೆ

ರೋಹಿಣಿ ಅಭಿಮಾನಿಗಳ ಪ್ರಶ್ನೆ -4

ತಾವು ನಿನ್ನೆ ಮಾತನಾಡುವಾಗ ‘ರೋಹಿಣಿಗೂ ನನಗೂ ಹೋಲಿಸಬೇಡಿ’ ಎಂದಿದ್ರಿ, ಇಷ್ಟೆಲ್ಲಾ ನಡೆದರೂ ‘ಎಂದಿನಂತೆ ಶ್ರದ್ಧೆಯಿಂದ ಕೆಲಸ ಮಾಡ್ತೀನಿ’ ಎನ್ನುವ ಅವರೆಲ್ಲಿ.? ಮಾಧ್ಯಮಗಳ ಗಮನ ತಮ್ಮೆಡೆಗೆ ಪ್ರಯತ್ನಿಸುತ್ತಿರುವ ನೀವೆಲ್ಲಿ? #UttaraKodiRoopaAvre #ಉತ್ತರಕೊಡಿರೂಪಅವ್ರೆ

ರೋಹಿಣಿ ಅಭಿಮಾನಿಗಳ ಪ್ರಶ್ನೆ -5

ಮೈಸೂರಿನ ಡಿಸಿ ನಿವಾಸದ ಈಜುಕೊಳ ನಿರ್ಮಾಣದ ಯೋಜನೆ ಮತ್ತು ಯೋಚನೆ ಎರಡು ನನ್ನದಲ್ಲ ಎಂದು ಸಿಂಧೂರಿಯವರು ಸ್ಪಷ್ಟಪಡಿಸಿದ್ದು ತಮ್ಮ ಗಮನಕ್ಕೆ ಬಂದಿಲ್ಲವೇ ಮೇಡಂ? #UttaraKodiRoopaAvre #ಉತ್ತರಕೊಡಿರೂಪಅವ್ರೆ

ರೋಹಿಣಿ ಅಭಿಮಾನಿಗಳ ಪ್ರಶ್ನೆ -6

‘ಗಾಯಕ ಲಕ್ಕಿ ಅಲಿ ಜಮೀನಿಗೂ ಮತ್ತು ನನಗೂ ಯಾವುದು ಸಂಬಂಧ ಇಲ್ಲ’ ಎಂದು ಸಿಂಧೂರಿಯವರು ಸ್ಪಷ್ಟಪಡಿಸಿದ್ದಾರೆ, ಅವರ ಕುಟುಂಬದ ಯಾರ ಮೇಲೆ ಆರೋಪ ಬಂದರೂ, ಸಿಂಧೂರಿಯವರ ಮೇಲೆ ನೇರ ಆರೋಪ ಹೊರಿಸುವುದು ಏಕೆ?? #UttaraKodiRoopaAvre #ಉತ್ತರಕೊಡಿರೂಪಅವ್ರೆ

ರೋಹಿಣಿ ಅಭಿಮಾನಿಗಳ ಪ್ರಶ್ನೆ -7

ಎಲ್ಲಾ ಕನ್ನಡಿಗರಿಗೆ ತಮ್ಮ ಮೇಲೆ ಅಪಾರ ಗೌರವವಿದೆ, ಕನ್ನಡದ ಎಲ್ಲಾ ಹೆಣ್ಣು ಮಕ್ಕಳಿಗೆ ತಾವೇ ದೊಡ್ಡ ಸ್ಪೂರ್ತಿ, ಇದರ ನಡುವೆ ಕರ್ನಾಟಕ ಸರ್ಕಾರದ ಹಿರಿಯ, ಮಹಿಳಾ ಅಧಿಕಾರಿಯನ್ನು ಬೇರೆ ರಾಜ್ಯದವರು ಎಂದು ಹೇಳಿ ನೋವುಂಟು ಮಾಡುವುದು ಸರಿಯೇ? #UttaraKodiRoopaAvre #ಉತ್ತರಕೊಡಿರೂಪಅವ್ರೆ

ರೋಹಿಣಿ ಅಭಿಮಾನಿಗಳ ಪ್ರಶ್ನೆ -8

ಸಿಂಧೂರಿಯವರು ಕರ್ನಾಟಕಕ್ಕೆ ಬಂದ ಆರೇ ತಿಂಗಳಲ್ಲಿ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡುವುದನ್ನು ಕಲಿತಿದ್ದಾರೆ, ಅವರು ತಮ್ಮ ಕಚೇರಿ ವೇಳೆಯಲ್ಲಿ ಎಂದಾದರೂ ಕನ್ನಡಿಗರನ್ನು ಕಡೆಗಣಿಸಿರುವುದು ತಮ್ಮ ಗಮನಕ್ಕೆ ಬಂದಿದೆಯೇ? #UttaraKodiRoopaAvre #ಉತ್ತರಕೊಡಿರೂಪಅವ್ರೆ

ರೋಹಿಣಿ ಅಭಿಮಾನಿಗಳ ಪ್ರಶ್ನೆ-9

ರೋಹಿಣಿ ಅವರ ಮೇಲೆ ಯಾವುದೇ ಆರೋಪ ಇದ್ದರೂ, ಅದನ್ನು ನೇರವಾಗಿ @CSofKarnataka ಹಾಗೂ @DgpKarnataka ರವರ ಗಮನಕ್ಕೆ ತರದೆ, WhastApp Screenshot ಗಳಲ್ಲಿ ತೆಗೆದ ಅವರ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು ಸರಿಯೇ? #UttaraKodiRoopaAvre #ಉತ್ತರಕೊಡಿರೂಪಅವ್ರೆ

ಹೀಗೆ ರೋಹಿಣಿ ಅಭಿಮಾನಿಗಳು ಡಿ.ರೂಪಾ ವಿರುದ್ಧ ತಿರುಗಿ ಬಿದ್ದಿದ್ರೆ ಮತ್ತೊಂದು ಕಡೆ ರೋಹಿಣಿ ಪತಿ ಸುಧೀರ್ ರೆಡ್ಡಿ ಕೂಡ ತಿರುಗೇಟು ನೀಡಿದ್ದಾರೆ  ರೋಹಿಣಿ ಸಿಂಧೂರಿಗೆ ಯಾವುದೇ ಪ್ರಚಾರ ಬೇಡ. ಯಾವ್ಯಾವ ಅಧಿಕಾರಿಗಳಿಗೆ ಫೋಟೋ ಕಳುಹಿಸಿದ್ದಾರೆ ಮೊದಲು ಹೇಳಿ. ನಾನು ಹುಟ್ಟಿದ್ದು ಇಲ್ಲೇ, ನಾನು ಕನ್ನಡಿಗ. ಆಂಧ್ರಪ್ರದೇಶದಲ್ಲಿ ನಮ್ಮ ಸಂಬಂಧಿಕರು ಯಾರೂ ಇಲ್ಲ. ನಮ್ಮ ಕುಟುಂಬದ ಬಗ್ಗೆ ಅನಗತ್ಯವಾಗಿ ಮಾತನಾಡುವುದು ಸರಿಯಲ್ಲ. ರೋಹಿಣಿ ಸಿಂಧೂರಿ ಸಾಮಾಜಿಕ ಜಾಲತಾಣ ಬಳಕೆ ಮಾಡುತ್ತಿಲ್ಲ. ಫೋಟೋಗಳನ್ನು ಅವರು ಹ್ಯಾಕ್ ಮಾಡಿ ತೆಗೆದುಕೊಂಡಿರಬಹುದು. ರೋಹಿಣಿ ಸಿಂಧೂರಿ ಯಾರಿಗೆ ಫೋಟೋ ಕಳಿಸಿದ್ದಾರೆ ಹೆಸರು ಹೇಳಿ. ನನ್ನ ತಂದೆ ಕಾಲದಿಂದಲೂ ರಿಯಲ್ ಎಸ್ಟೇಟ್​​​ ಮಾಡುತ್ತಿದ್ದೇವೆ ಎಂದು ಐಪಿಎಸ್​ ಅಧಿಕಾರಿ ಡಿ.ರೂಪಾ ವಿರುದ್ಧ ಬೆಂಗಳೂರಿನಲ್ಲಿ ರೋಹಿಣಿ ಸಿಂಧೂರಿ ಪತಿ ಸುಧೀರ್​ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

IPS ಅಧಿಕಾರಿ ರೂಪಾ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇನೆ IPS ಅಧಿಕಾರಿ ರೂಪಾ ವಿರುದ್ಧ ಪೊಲೀಸರಿಗೆ ದೂರು ನೀಡುತ್ತೇನೆ. ಹೊಟ್ಟೆಕಿಚ್ಚಿನಿಂದ ಡಿ.ರೂಪಾ ಅವರು ಈ ರೀತಿ ಮಾಡುತ್ತಿದ್ದಾರೆ. ರೋಹಿಣಿ ಸಿಂಧೂರಿ ಒಳ್ಳೆಯ ಕೆಲಸ ಮಾಡಿ ಹೆಸರು ಮಾಡಿದ್ದಾರೆ. ಹಣಕಾಸು ವಿಚಾರದಲ್ಲಿ ನಾವು ಚೆನ್ನಾಗಿಯೇ ಇದ್ದೇವೆ. ಡಿ.ಕೆ.ರವಿ ಅವರ ವಿಚಾರವನ್ನು ಈಗ ಪ್ರಸ್ತಾಪಿಸುವುದು ಸರಿಯಲ್ಲ. ಹೋಗಿರುವವರ ಬಗ್ಗೆ ಏನನ್ನೂ ಮಾತನಾಡಬಾರದು. ಹೋಗಿರುವವರ ಬಗ್ಗೆ ಮಾತನಾಡುವ ಸಂಸ್ಕಾರ ರೂಪಾ ಅವರದ್ದು ಎಂದು ಹೇಳಿದರು.

 

suddiyaana