ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಳೆದ್ರಾ ಡಿಕೆಶಿ, ಸಿದ್ದರಾಮಯ್ಯ?
ಸಿಎಂ, ಡಿಸಿಎಂ ತಪ್ಪೇ ಮಾಡಿಲ್ವಾ?

ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಳೆದ್ರಾ ಡಿಕೆಶಿ, ಸಿದ್ದರಾಮಯ್ಯ?ಸಿಎಂ, ಡಿಸಿಎಂ ತಪ್ಪೇ ಮಾಡಿಲ್ವಾ?

ಜೂನ್ 3ಕ್ಕೆ ಇಡೀ ಕರ್ನಾಟಕವೇ ಖುಷಿ ಪಟ್ಟಿತ್ತು. 18 ವರ್ಷಗಳ ಬಳಿಕ ಆರ್​ಸಿಬಿ ಐಪಿಎಲ್ ಕಪ್ ಗೆದ್ದಿದ್ದಕ್ಕೆ ಇಡೀ ರಾಜ್ಯವೇ ಸಂಭ್ರಮಿಸಿತ್ತು. ಆದರೆ, ಜೂನ್ 4 ಕರ್ನಾಟಕದ ಪಾಲಿಗೆ ಕರಾಳ ದಿನವಾಗಿ ಹೋಯಿತು. ಕಪ್ ಗೆದ್ದ ಖುಷಿ ಕಣ್ಣು ಬಿಡೋದ್ರೊಳಗೆ ಹೋಗಿತ್ತು.  ಆರ್​ಸಿಬಿ ವಿಜಯೋತ್ಸವವನ್ನು ಕಣ್ತುಂಬಿಕೊಳ್ಳಲು ಬಂದಿದ್ದ 11 ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದರು. ಈ ಘಟನೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಬೆಂಗಳೂರು ಪೊಲೀಸ್ ಆಯುಕ್ತ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ.

 

ಕರ್ನಾಟಕ ಸರ್ಕಾರದ ವೈಫಲ್ಯದ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿತ್ತು  ದುರಂತದ ಬಗ್ಗೆ ಸಿದ್ದರಾಮಯ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಹಾಗೇ, ಸಿಐಡಿ ತನಿಖೆಗೂ ಆದೇಶಿಸಿದೆ. ಇದೆಲ್ಲದರ ನಡುವೆ ತನ್ನ ವೈಫಲ್ಯವನ್ನು ಮರೆಮಾಚಿಕೊಳ್ಳುವ ಪ್ರಯತ್ನ ಮಾಡಿರುವ ರಾಜ್ಯ ಸರ್ಕಾರ ಪೊಲೀಸರ ಬಾಯಿಗೆ ತನ್ನ ತಪ್ಪನ್ನ ಒರೆಸಿದ್ದುಸ ಪೊಲೀಸರನ್ನ ಸಸ್ಪೆಂಡ್ ಮಾಡಲಾಗಿದೆ.  ಪೊಲೀಸ್ ಆಯುಕ್ತ ಬಿ. ದಯಾನಂದ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್‌.ಟಿ.ಶೇಖರ್, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್‌, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್‌.ಟಿ.ಶೇಖರ್, ಎಸಿಪಿ ಬಾಲಕೃಷ್ಣ, ಕಬ್ಬನ್‌ಪಾರ್ಕ್‌ ಇನ್ಸ್‌ಪೆಕ್ಟರ್‌ ಗಿರೀಶ್‌.ಎ.ಕೆ ಅವರನ್ನು ಅಮಾನತು ಮಾಡಲಾಗಿದೆ.

ಆರ್​ಸಿಬಿ ವಿಜಯ ಯಾತ್ರೆಯನ್ನು ಕರ್ನಾಟಕ ಸರ್ಕಾರ ಆಯೋಜಿಸಿದ್ದು ಎಂದೇ ಎಲ್ಲರೂ ಭಾವಿಸಿದ್ದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್​ಸಿಬಿ ಆಟಗಾರರಿಗೆ ಸನ್ಮಾನ ಮಾಡಿದ್ದರಿಂದ ಇದು ಸರ್ಕಾರಿ ಕಾರ್ಯಕ್ರಮ ಎಂದೇ ಭಾವಿಸಲಾಗಿತ್ತು. ಆದರೆ, ತನ್ನ ಪ್ರಕಟಣೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರ ಜೂನ್ 3ರಂದು ಬೆಂಗಳೂರಿನಲ್ಲಿ ಆರ್​ಸಿಬಿ ವಿಜಯಯಾತ್ರೆ ಮತ್ತು ಸಂಭ್ರಮಾಚರಣೆ ಆಯೋಜಿಸುತ್ತೇವೆ ಎಂದು ಆರ್​ಸಿಬಿಯ ಸಿಇಒ ತಿಳಿಸಿದ್ದರು. ಆದರೆ, ಈ ಬಗ್ಗೆ ದಯಾನಂದ್ ಅವರು ಆಯೋಜಕರಿಗೆ ಲಿಖಿತ ಉತ್ತರ ನೀಡಿ ಅನುಮತಿ ನಿರಾಕರಿಸಲು ವಿಫಲರಾಗಿದ್ದಾರೆ. ಸಮಯಾವಕಾಶ ಸಾಕಾಗುವುದಿಲ್ಲ ಎಂದು ಅವರು ಅನುಮತಿ ನಿರಾಕರಿಸಬೇಕಿತ್ತು ಎಂದು ಪ್ರಕಟಣೆಯಲ್ಲಿ ಕಾರಣ ನೀಡಲಾಗಿದೆ. ಆದರೆ, ಅರ್ಧ ದಿನದಲ್ಲಿ ಸಿದ್ಧತೆ ಮಾಡಿಕೊಳ್ಳಲು ಕಷ್ಟವಾಗುತ್ತದೆ ಎಂದು ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಲಿಖಿತವಾಗಿ ಅನುಮತಿ ನಿರಾಕರಿಸಿದ್ದಾರೆ ಎಂಬ ಕಾರಣ ನೀಡಿ ದಯಾನಂದ್ ಅವರನ್ನು ಅಮಾನತು ಮಾಡಲಾಗಿದೆ. ಇದ್ದಕ್ಕೆ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿದೆ.  ಸರ್ಕಾರ ತಾನು ತಪ್ಪು ಮಾಡಿ ಅದ್ದನ್ನ ಪೊಲೀಸರ ಮೇಲೆ ಹೊರಿಸಿದೆ ಎಂದು ಬಿಜೆಪಿ ಸೇರಿದಂತೆ ಜನ ಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿ ಹಾಗೂ ಕುಮಾರಸ್ವಾಮಿ ಜಂಟಿಸುದ್ದಿಗೋಷ್ಠಿ ಮಾಡಿ ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು

ಪೊಲೀಸ್‌ ಅಧಿಕಾರಿಗಳ ಸಸ್ಪೆಂಡ್‌ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಖಂಡಿಸಿದ್ದಾರೆ. ಈ ಸಂದರ್ಭದಲ್ಲಿ ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಗೃಹಸಚಿವ ಪರಮೇಶ್ವರ್‌ ಅವರು ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರುʼ ಎಂಬಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದು ಸರ್ಕಾರದ ನಿರ್ಲಕ್ಷ್ಯ ಹಾಗೂ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಬಹುದು ಎಂಬ ದುರಾಲೋಚನೆಯ ಕ್ರಮ ಎಂದು ಖಂಡಿಸಿದ್ದಾರೆ

ಯಾರದ್ದೋ ತಪ್ಪಿಗೆ ಯಾರಿಗೋ ಶಿಕ್ಷೆ

ಬಿಜೆಪಿ ಶಾಸಕ ಸುರೇಶ್ ಕುಮಾರ್, ‘ಯಾರದೋ ತಪ್ಪಿಗೆ ಯಾರಿಗೋ ಶಿಕ್ಷೆ. ಪೋಲಿಸ್ ಅಧಿಕಾರಿಗಳ ಸಲಹೆ ತಿರಸ್ಕರಿಸಿ ಹುಚ್ಚು ಪ್ರಚಾರ ಗಿಟ್ಟಿಸಲು ಹೋಗಿ ಅಮಾಯಕರನ್ನು ಬಲಿ ಕೊಟ್ಟವ, ತಾನು ನುಣಿಚಿಕೊಳ್ಳಲು ಇದೀಗ ದಕ್ಷ ಅಧಿಕಾರಿಗಳನ್ನು ಬಲಿ ಕೊಡಹೊರಟಿರುವುದು ದಿವಾಳಿತನದ ಸ್ಪಷ್ಟ ಉದಾಹರಣೆ ಎಂದಿದ್ದಾರೆ.

ಮುಖ್ಯಮಂತ್ರಿಗಳೇ, ನಿಮ್ಮ ಸರಕಾರದ ಪ್ರಚಾರದ ಗೀಳಿನಿಂದಾದ ಆಚಾತುರ್ಯಕ್ಕೆ ಒಬ್ಬ ಪ್ರಾಮಾಣಿಕ, ದಕ್ಷ ಅಧಿಕಾರಿಗೆ ಅಮಾನತು ಬಳುವಳಿ ಕೊಟ್ರಲ್ಲ ಸರ್. ಛೇ..’ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಬೇಸರ ವ್ಯಕ್ತಪಡಿಸಿದ್ದಾರೆ.

ನಟ ಹಾಗೂ ಬಿಜೆಪಿ ಸಂಸದ ಜಗ್ಗೇಶ್, ‘ನಾನು ಕಂಡ ಒಬ್ಬ ದಕ್ಷ ಅಧಿಕಾರಿ ದಯಾನಂದ್‌ರವರು. ಹಣ್ಣು ತಿಂದವರು ಯಾರೋ? ಸಿಪ್ಪೆ ಅನ್ಯರಿಗೆ ನೀಡಿ ತಪ್ಪಿತಸ್ಥರ ಮಾಡಿಬಿಟ್ಟರು. ಅಲ್ಲಿಗೆ ನ್ಯಾಯಕ್ಕೆ ಬೆಲೆ ಇಲ್ಲದ ಕಾಲ! What a joke..’ ಎಂದು ಹೇಳಿದ್ದಾರೆ.

ಇನ್ನು ಇದನ್ನು ಯಾರು ಮಾಡಿದ್ದಾರೋ ಅವರ ಮೇಲೆ ಕ್ರಮ ಆಗಲಿ. ಅದಕ್ಕೆ ಪೊಲೀಸ್ ಅಧಿಕಾರಿಗಳ್ಯಾಕೆ ಬಲಿ ಆಗಬೇಕು. ದಕ್ಷ ಅಧಿಕಾರಿಗಳು, ಜನಪರ ಕೆಲಸ ಮಾಡುತ್ತಿದ್ದ ದಯನಾಂದ್‌ ಅವರ ಅಮಾನತು ಆದೇಶ ವಾಪಾಸ್ ಪಡೆಯಿರಿ ಎಂದು ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಆಗ್ರಹಿಸಿದ್ದಾರೆ.

 

Kishor KV

Leave a Reply

Your email address will not be published. Required fields are marked *