ದರ್ಶನ್‌ ಗೆ ಮತ್ತೆ ನಿರಾಸೆ –  ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ

ದರ್ಶನ್‌ ಗೆ ಮತ್ತೆ ನಿರಾಸೆ –  ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ದರ್ಶನ್‌ ಆಂಡ್‌ ಗ್ಯಾಂಗ್ ಅರೆಸ್ಟ್‌ ಆಗಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ದಾಸ ಆದಷ್ಟು ಬೇಗ ರಿಲೀಸ್‌ ಆಗಲಿ ಎಂದು ಫ್ಯಾನ್ಸ್‌ ಬಯಸುತ್ತಿದ್ದಾರೆ.. ಆದ್ರೀಗ ಡಿ ಬಾಸ್‌ ಫ್ಯಾನ್ಸ್‌ ಗೆ ನಿರಾಸೆ ಆಗಿದೆ. ದರ್ಶನ್‌ ಜಾಮೀನು ಅರ್ಜಿ ದಿನಾಂಕವನ್ನು ಮುಂದೂಡಲಾಗಿದೆ.

ಇದನ್ನೂ ಓದಿ: ಚೈತ್ರಾ, ಜಗದೀಶ್‌ BBKಗೆ ಬೇಕಿತ್ತಾ? – ಕಾಂಟ್ರವರ್ಸಿ ಮಾಡಿದ್ರೆ ದೊಡ್ಮನೆಗೆ ಎಂಟ್ರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್​ಶೀಟ್​ ಸಲ್ಲಿಕೆ ಆದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಯಿತು. ಕೇಸ್​ಗೆ ಸಂಬಂಧಿಸಿದಂತೆ ಕೆಲವು ಅನುಮಾನಗಳು ಇದ್ದಿದ್ದರಿಂದ ದರ್ಶನ್ ಪರ ವಕೀಲರು ಬಳ್ಳಾರಿ ಜೈಲಿಗೆ ಭೇಟಿ ನೀಡಿ ಮಾತುಕಥೆ ನಡೆಸಿ ಬಂದಿದ್ದರು. ಈಗ ವಾದಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲ ಸುನೀಲ್ ಅವರು ಕೋರಿದ್ದಾರೆ.

ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್​ ಪರ ವಕೀಲರು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಅಕ್ಟೋಬರ್​ 4ರಂದು ಬೇಲ್​ ಅರ್ಜಿ ವಿಚಾರಣೆ ನಡೆಯಲಿದೆ.

Shwetha M

Leave a Reply

Your email address will not be published. Required fields are marked *