ದರ್ಶನ್‌ ಗೆ ಬೆಂಬಿಡದೆ ಕಾಡುತ್ತಿದೆ ಬೆನ್ನು ನೋವು! – ಸರ್ಜರಿಗೆ ಒಳಗಾಗಬೇಕಾ ನಟ?

ದರ್ಶನ್‌ ಗೆ ಬೆಂಬಿಡದೆ ಕಾಡುತ್ತಿದೆ ಬೆನ್ನು ನೋವು! – ಸರ್ಜರಿಗೆ ಒಳಗಾಗಬೇಕಾ ನಟ?

ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ನಟ ದರ್ಶನ್‌ ಜೈಲು ಪಾಲಾಗಿದ್ದಾರೆ. ಆದ್ರೀಗ ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ ಗೆ ಅನಾರೋಗ್ಯ ಕಾಡ್ತಿದೆ.. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:ಬಿಗ್‌ ಬಾಸ್‌ ಗೆ ಜಗದೀಶ್‌ ವಾರ್ನ್‌ – ದೊಡ್ಮನೆಯಿಂದ ಲಾಯರ್‌ ಔಟ್? 

ನಟ ದರ್ಶನ್‌ ಗೆ ಬಳ್ಳಾರಿ ಜೈಲಿನ ವಾತಾವರಣ ಹೊಂದುತ್ತಿಲ್ಲ. ಅವರು ನಿರಂತರವಾಗಿ ಸೊರಗುತ್ತಿದ್ದಾರೆ. ಇದೀಗ ದರ್ಶನ್‌ ಗೆ ಬೆನ್ನುನೋವು ಬೆಂಬಿಡದೆ ಕಾಡುತ್ತಿದೆ. ಬೆನ್ನು ನೋವು ಹೆಚ್ಚಾಗಿರುವುದರಿಂದ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿನಲ್ಲೇ ದರ್ಶನ್ ಆರೋಗ್ಯ ತಪಾಸಣೆ ನಡೆಸಿದ್ದಾರೆ. ಈಗಾಗಲೇ ಬೆನ್ನಿನ ಹಿಂಭಾಗದಲ್ಲಿ ಊತ ಬಂದಿರುವ ಸಾಧ್ಯತೆ ಇದೆ. ಅವರಿಗೆ ಸರ್ಜರಿ ಮಾಡಿಸಲೇಬೇಕಾದ ಅಗತ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ದರ್ಶನ್​ಗೆ ಸ್ಕ್ಯಾನ್ ಮಾಡಿಸಲು ವೈದ್ಯರು ಸೂಚನೆ ನೀಡಿದ್ದಾರೆ.

ಆದರೆ, ದರ್ಶನ್ ಅವರು ಸ್ಕ್ಯಾನ್ ಮಾಡಿಸೋದಕ್ಕೆ ರೆಡಿ ಇಲ್ಲ. ನಾನು ಬೆಂಗಳೂರಿಗೆ ಹೋದ್ಮೇಲೆ ಸ್ಕ್ಯಾನ್ ಮಾಡಿಸ್ತೀನಿ. ಸದ್ಯಕ್ಕೆ ನೋವು ನಿವಾರಕ ಮಾತ್ರೆ ಕೊಡಿ ಸಾಕು  ಎಂದು ದರ್ಶನ್ ಕೋರಿಕೊಂಡಿದ್ದಾರೆ ಎಂದು ವರದಿ ಆಗಿದೆ.

ದರ್ಶನ್ ಅವರು ಈಗಾಗಲೇ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಶುಕ್ರವಾರ (ಅಕ್ಟೋಬರ್ 4) ಅರ್ಜಿ ವಿಚಾರಣೆ ನಡೆಯಲಿದೆ. ದರ್ಶನ್ ಅವರು ಜಾಮೀನು ಸಿಕ್ಕೇ ಸಿಗುತ್ತದೆ ಎನ್ನುವ ಭರವಸೆಯಲ್ಲಿ ಇದ್ದಾರೆ. ಈ ವಿಚಾರದಲ್ಲಿ ಕೋರ್ಟ್​ ಯಾವ ರೀತಿಯ ಆದೇಶ ಹೊರಡಿಸುತ್ತದೆ ಎಂದು ಕಾದು ನೋಡಬೇಕಿದೆ.

ಜಾಮೀನು ಅರ್ಜಿ ವಿಚಾರಣೆ ಈಗಾಗಲೇ ಎರಡು ಬಾರಿ ಮುಂದಕ್ಕೆ ಹೋಗಿದೆ. ದರ್ಶನ್ ಪರ ವಕೀಲರು ವಾದ ಮಂಡನೆಗೆ ಹೆಚ್ಚಿನ ಸಮಯ ಕೇಳುತ್ತಿದ್ದಾರೆ. ಈ ಕಾರಣದಿಂದ ಅರ್ಜಿ ವಿಚಾರಣೆ ಮುಂದಕ್ಕೆ ಹೋಗುತ್ತಿದೆ.

Shwetha M

Leave a Reply

Your email address will not be published. Required fields are marked *