ಸರ್ಜರಿ ಬಳಿಕ ದರ್ಶನ್‌ ಗೆ ದೀರ್ಘ ವಿಶ್ರಾಂತಿ! – ಮತ್ತೆ ಜೈಲಿಗೆ ಹೋಗಲ್ವಾ ದಾಸ?

ಸರ್ಜರಿ ಬಳಿಕ ದರ್ಶನ್‌ ಗೆ ದೀರ್ಘ ವಿಶ್ರಾಂತಿ! – ಮತ್ತೆ ಜೈಲಿಗೆ ಹೋಗಲ್ವಾ ದಾಸ?

ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ನಟ ದರ್ಶನ್‌ ಜೈಲು ಪಾಲಾಗಿದ್ರು. ಅನಾರೋಗ್ಯದ ಕಾರಣ ನೀಡಿ, ದರ್ಶನ್‌ ಜಾಮೀನು ಪಡೆದು ಹೊರಬಂದಿದ್ದಾರೆ. ಇದೀಗ ದರ್ಶನ್‌ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರ ಚಿಕಿತ್ಸೆ ಅಗತ್ಯವಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: HDK, ನಿಖಿಲ್‌ಗೆ FIR ಸಂಕಷ್ಟ – ಏನಿದು ಕೇಸ್‌, ಎಷ್ಟು ಸ್ಟ್ರಾಂಗ್?

ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಈಗ ದರ್ಶನ್ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದರ್ಶನ್ ಅವರ ಬೆನ್ನು ಹುರಿಯಲ್ಲಿ ಸಮಸ್ಯೆ ಇದೆ ಎನ್ನಲಾಗಿದೆ. ಈ ಕಾರಣಕ್ಕೆ ಅವರಿಗೆ ನಡೆಯೋಕೂ ಸಾಧ್ಯ ಆಗುತ್ತಿರಲಿಲ್ಲ. ಅವರ ಕಾಲು ಕೂಡ ವೀಕ್ ಆಗಿದೆ ಎಂದು ವೈದ್ಯರು ಹೇಳಿದ್ದರು. ನಿರಂತರವಾಗಿ ಅವರನ್ನು ಪರೀಕ್ಷಿಸಿರುವ ವೈದ್ಯರು, ಸರ್ಜರಿ ನಡೆಸುವ ನಿರ್ಧಾರಕ್ಕೆ ಬಂದಿದ್ದಾರೆ. ಇದಾದ ಬಳಿಕ ಅವರಿಗೆ ರಿಲೀಫ್ ಸಿಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇದೀಗ ದರ್ಶನ್​ಗೆ ಶಸ್ತ್ರಚಿಕಿತ್ಸೆ ಮಾಡಲು ವೈದ್ಯರ ತಂಡ ಮುಂದಾಗಿದೆ. ಒಂದೆರಡು ದಿನಗಳಲ್ಲಿ ದರ್ಶನ್​ಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ದರ್ಶನ್​​ಗೆ ಸರ್ಜರಿ ನಡೆಸಲು ಪತ್ನಿ ವಿಜಯಲಕ್ಷ್ಮೀ ಸಮ್ಮತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಇನ್ನು ಬೆನ್ನುಹುರಿ ಶಸ್ತ್ರಚಿಕಿತ್ಸೆ ಎಂದರೆ ಅದು ತುಂಬಾನೇ ಸೂಕ್ಷ್ಮ ಶಸ್ತ್ರಚಿಕಿತ್ಸೆ ಆಗಿದೆ. ಸರ್ಜರಿ ಬಳಿಕ ವೈದ್ಯರು ದರ್ಶನ್​ಗೆ ವಿಶ್ರಾಂತಿ ಪಡೆಯಲು ಸೂಚನೆ ನೀಡುವ ಸಾಧ್ಯತೆ ಇದೆ. ವೈದ್ಯರು ಎಷ್ಟು ದಿನ ದರ್ಶನ್​ಗೆ ವಿಶ್ರಾಂತಿ ಪಡೆಯಲು ಸೂಚನೆ ನೀಡುತ್ತಾರೆ ಎನ್ನುವ ಕುತೂಹಲ ಮೂಡಿದೆ. ಈಗಾಗಲೇ ದರ್ಶನ್​ ಜೈಲಿನಿಂದ ಹೊರ ಬಂದು ವಾರ ಕಳೆದಿದೆ. ಅವರ ಬಳಿ ಇನ್ನು ಐದು ವಾರಗಳು ಮಾತ್ರ ಉಳಿದಿವೆ. ಇದಾದ ಬಳಿಕ ಅವರು ಮರಳಿ ಜೈಲು ಸೇರಬೇಕಿದೆ.

Shwetha M