ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಧನುಷ್‌ – ಮುಡಿ ಕೊಟ್ಟು ಹರಕೆ ತೀರಿಸಿದ ಕಾಲಿವುಡ್‌ ಸ್ಟಾರ್‌

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ನಟ ಧನುಷ್‌ – ಮುಡಿ ಕೊಟ್ಟು ಹರಕೆ ತೀರಿಸಿದ ಕಾಲಿವುಡ್‌ ಸ್ಟಾರ್‌

ಕಾಲಿವುಡ್‌ ನಟ ಧನುಷ್‌ ತಮ್ಮ ಮಕ್ಕಳೊಂದಿಗೆ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಧನುಷ್‌ ಹಾಗೂ ಅವರ ಮಕ್ಕಳು ತಿರುಪತಿಯಲ್ಲಿ ಕೇಶ ಮುಂಡನ ಮಾಡಿಸಿಕೊಂಡಿದ್ದಾರೆ.

ನಟ ಧನುಷ್‌ ಅವರ ಮಕ್ಕಳಾದ ಯಾತ್ರಾ ಮತ್ತು ಲಿಂಗ ಅವರೊಂದಿಗೆ ಬೆಳ್ಳಂ ಬೆಳಗ್ಗೆ ತಿರುಪತಿಗೆ ಆಗಮಿಸಿದ್ದಾರೆ. ಬೆಳ್ಳಂ ಬೆಳಗ್ಗೆ ತಿರುಪತಿಗೆ ಆಗಮಿಸಿದ್ದ ಧನುಷ್, ಮುಡಿ ಕೊಟ್ಟು ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಸಾಮಾನ್ಯರಂತೆ ಸರದಿ ಸಾಲಿನಲ್ಲಿ ಮಕ್ಕಳೊಂದಿಗೆ ನಿಂತು ತಿಮ್ಮಪ್ಪನ ದರ್ಶನ ಮಾಡಿದ ಧನುಷ್ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.

ಇದನ್ನೂ ಓದಿ: ಬಂಗಾರಮ್ಮನ ಮನೆ ಸೇರುತ್ತಾಳಾ ಸ್ನೇಹಾ? – ಪುಟ್ಟಕ್ಕನ ಮಕ್ಕಳು ಧಾರಾವಾಹಿಯಲ್ಲಿ ಇನ್ಮುಂದೆ ಅತ್ತೆ-ಸೊಸೆ ಕಾಳಗ

ಮಕ್ಕಳೊಂದಿಗೆ ಮುಡಿಕೊಟ್ಟು ಸಾಮಾನ್ಯ ಭಕ್ತರಂತೆ ನಟ ಧನುಷ್‌ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಮಾಡಿದ್ದಾರೆ. ಇವರ ಸರಳ ವ್ಯಕ್ತಿತ್ವಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಕ್ಯಾಪ್ಟನ್ ಮಿಲ್ಲರ್ ಚಿತ್ರಕ್ಕಾಗಿ ಧನುಷ್ ಉದ್ದನೆಯ ಕೂದಲು ಬೆಳೆಸಿದ್ದರು. ಇದೀಗ ಸಿನಿಮಾದ ಕಂಪ್ಲೀಟ್ ಶೂಟಿಂಗ್ ಮುಗಿದಿದೆ. ಮೊನ್ನೆಯಷ್ಟೇ ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ಫಸ್ಟ್ ಲುಕ್ ಗೆ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿದೆ. ಈ ಸಿನಿಮಾದಲ್ಲಿ ಧನುಷ್ ಅಪರೂಪದ ಪಾತ್ರವನ್ನು ಮಾಡಿದ್ದಾರೆ.

suddiyaana