ವಿಮಾನ ದುರಂತದಿಂದ ಪಾರಾದ ಮಾರ್ಟಿನ್ ಚಿತ್ರ ತಂಡ – ಮೊದಲ ಬಾರಿಗೆ ಸಾವನ್ನು ಹತ್ತಿರ ನೋಡಿ ವಾಪಸ್ ಬಂದೆ ಎಂದ ನಟ ಧ್ರುವ ಸರ್ಜಾ

ವಿಮಾನ ದುರಂತದಿಂದ ಪಾರಾದ ಮಾರ್ಟಿನ್ ಚಿತ್ರ ತಂಡ – ಮೊದಲ ಬಾರಿಗೆ ಸಾವನ್ನು ಹತ್ತಿರ ನೋಡಿ ವಾಪಸ್ ಬಂದೆ ಎಂದ ನಟ ಧ್ರುವ ಸರ್ಜಾ

ಸ್ಯಾಂಡಲ್‍ವುಡ್ ನಾಯಕ ನಟ ಧ್ರುವ ಸರ್ಜಾ ಸೇರಿದಂತೆ ಮಾರ್ಟಿನ್ ಚಿತ್ರ ತಂಡ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಅದೃಷ್ಟ ಚೆನ್ನಾಗಿದ್ದು, ವಿಮಾನ ಅಪಘಾತದಿಂದ ಬಚಾವಾದೆವು ಎಂದು ಧ್ರುವ ಸರ್ಜಾ ವಿಡಿಯೋ ಮುಖಾಂತರ ಹೇಳಿಕೊಂಡಿದ್ದಾರೆ. ಸ್ಯಾಂಡಲ್‌ವುಡ್ ಪ್ರಿನ್ಸ್ ಮಾತು ಕೇಳಿ ಅಭಿಮಾನಿಗಳು ಕೂಡಾ ನಿರಾಳರಾಗಿದ್ದಾರೆ.

ಇದನ್ನೂ ಓದಿ: ಹುಲಿ ಉಗುರಿನ ದ್ವೇಷ, ಕಿಡಿ ಕಾರಿದ ಜಗ್ಗೇಶ್ – ವರ್ತೂರು ಸಂತೋಷ್ ಅಭಿಮಾನಿಗಳು ಸುಮ್ನೆ ಇರ್ತಾರಾ?

ಮಾರ್ಚಿನ್ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್​ಗಾಗಿ ಸೋಮವಾರ ಸಂಜೆ ಸಾಂಗ್ ದೆಹಲಿ ವಿಮಾನ ನಿಲ್ದಾಣದಿಂದ ಶ್ರೀನಗರ ವಿಮಾನ ನಿಲ್ದಾಣಕ್ಕೆಗೆ ಇಂಡಿಗೋ ವಿಮಾನದಲ್ಲಿ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಹವಾಮಾನ ವೈಪರೀತ್ಯದಿಂದ ವಿಮಾನವನ್ನು ಲ್ಯಾಂಡಿಂಗ್ ಮಾಡಲು ಸಾಧ್ಯವಾಗದೇ ಪೈಲಟ್ ಪರದಾಡಿದ್ದಾರೆ. ವಿಮಾನದ ಸೀಟ್‍ಗಳು ನಡುಗಿದ್ದು, ಪ್ರಯಾಣಿಕರು ಗಾಬರಿ ಆಗಿದ್ದಾರೆ. ಕೊನೆಗೆ ಪೈಲಟ್‍ನ ಸಮಯ ಪ್ರಜ್ಞೆಯಿಂದ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.

ಚಿತ್ರತಂಡದವರು ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ವಿಷಯ ತಿಳಿಸಿದ್ದಾರೆ. ಪೈಲಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಕ್ರ್ಯಾಶ್ ಆಗಬೇಕಿದ್ದ ಫ್ಲೈಟ್​​​ ಕೂದಲೆಳೆ ಅಂತರದಲ್ಲಿ ಸುರಕ್ಷಿತವಾಗಿ ಲ್ಯಾಂಡ್​ ಆಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಧ್ರುವ ಸರ್ಜಾ ಕೂಡಾ ಅಭಿಮಾನಿಗಳಿಗಾಗಿ ವಿಡಿಯೋದಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿಸಿದರು. ‘ಇವತ್ತಿನ ರೀತಿ ಇಷ್ಟು ಕೆಟ್ಟ ಅನುಭವ ಇಡೀ ಜೀವನದಲ್ಲೇ ಆಗಿರಲಿಲ್ಲ. ಈಗ ನಾವು ಸೇಫ್​ ಆಗಿದ್ದೇವೆ. ಜೈ ಆಂಜನೇಯ. ಪೈಲಟ್​ಗೆ ಧನ್ಯವಾದ’ ಎಂದು ಧ್ರುವ ಸರ್ಜಾ ಹೇಳಿದ್ದಾರೆ.

‘ಮೊದಲ ಬಾರಿ ಸಾವನ್ನು ಹತ್ತಿರದಿಂದ ನೋಡಿ ವಾಪಸ್​ ಬಂದಿದ್ದೇನೆ. ಚಿರು, ತಂದೆ-ತಾಯಿ ಹಾಗೂ ಅಭಿಮಾನಿಗಳು ಆಶೀರ್ವಾದದಿಂದ ಪಾರಾಗಿದ್ದೇನೆ. ಫ್ಲೈಟ್​ನಲ್ಲಿ ಇದ್ದ ಎಲ್ಲರೂ ಜೀವ ಉಳಿಸಿಕೊಳ್ಳಲು ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದರು. ನಾವು ಸೇಫ್​ ಆಗಿ ಲ್ಯಾಂಡ್​ ಆದಾಗ ಜನರು ಖುಷಿಯಿಂದ ಕೂಗಾಡಿದರು. ತಮ್ಮ ಪ್ರೀತಿಪಾತ್ರರಿಗೆ ಕರೆ ಮಾಡಿದರು. ಆನಂದ ಭಾಷ್ಪ ಸುರಿಸಿದರು. ಚೆನ್ನಾಗಿ ಬದುಕಲು ನಮಗೆ ಈ ಮರುಜನ್ಮ ಒಂದು ಕಾರಣವಾಗಿದೆ’ ಎಂದು ಧ್ರುವ ಸರ್ಜಾ ಅವರು ಪೋಸ್ಟ್​ ಮಾಡಿದ್ದಾರೆ.

‘ಮಾರ್ಟಿನ್ ಚಿತ್ರತಂಡದವರು ಸೇಫ್​ ಆಗಿದ್ದಾರೆ ಎಂಬುದು ತಿಳಿದು ಅಭಿಮಾನಿಗಳು ಕೂಡ ನಿಟ್ಟುಸಿರು ಬಿಟ್ಟಿದ್ದಾರೆ. ‘ಸುರಕ್ಷಿತವಾಗಿ ಬನ್ನಿ ಅಣ್ಣ. ನಿಮಗಾಗಿ ಕಾಯುತ್ತಿದ್ದೇವೆ. ನಿಮ್ಮ ಜೊತೆ ದೇವರು ಇದ್ದಾನೆ’ ಎಂದು ಅಭಿಮಾನಿಗಳು ಕಮೆಂಟ್​ ಮಾಡಿದ್ದಾರೆ.

 

Sulekha