ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ರಾ ಹೆಚ್‌ಡಿಕೆ? – ಚಲುವರಾಯಸ್ವಾಮಿ ಶಾಕಿಂಗ್‌ ಹೇಳಿಕೆ

ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ರಾ ಹೆಚ್‌ಡಿಕೆ? – ಚಲುವರಾಯಸ್ವಾಮಿ ಶಾಕಿಂಗ್‌ ಹೇಳಿಕೆ

ಸಚಿವ ಚಲುವರಾಯಸ್ವಾಮಿ ಹೆಚ್‌ಡಿ ಕುಮಾರಸ್ವಾಮಿ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಿರ್ಮಲಾನಂದನಾಥ ಶ್ರೀಗಳ ಫೋನ್‌ನ್ನು ಕುಮಾರಸ್ವಾಮಿ ಟ್ಯಾಪ್ ಮಾಡಿಸಿದ್ರು ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ದಿನವೇ ಗೆದ್ದ ಬಡೇ ಮಿಯಾ ಚೋಟೆ ಮಿಯಾ – ಪೃಥ್ವಿರಾಜ್ ನಟನೆಗೆ ಬಾಲಿವುಡ್ ಮಂದಿ ಫಿದಾ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಚಲುವರಾಯಸ್ವಾಮಿ, ಹಿಂದೆ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್‌ನ್ನು ಟ್ಯಾಪ್ ಮಾಡಿದ್ದಾರೆ. ಇದೀಗ ಹೇಗೆ ಅವರ ಬಳಿ ಹೋಗಿ ಕುಮಾರಸ್ವಾಮಿ ಆಶೀರ್ವಾದ ಕೇಳುತ್ತಾ ಇದ್ದಾರೆ. ನಾವು ಸಹ ಜೆಎಸ್‌ಎಸ್, ಸಿದ್ದಗಂಗಾ, ಚುಂಚನಗಿರಿ ಮಠಗಳಿಗೆ ಹೋಗಿದ್ದೀವಿ, ಅವರು ಹೋಗಿದ್ದಾರೆ. ಇದು ಚುನಾವಣೆ ವೇಳೆ ಸಹಜವಾಗಿದೆ ಅಂತಾ ಹೇಳಿದ್ದಾರೆ.

ಕುಮಾರಸ್ವಾಮಿ, ಸ್ವಾಮೀಜಿ ಫೋನ್ ಟ್ಯಾಪ್ ಮಾಡಿದ್ದಾರೆ. ಸ್ವಾಮೀಜಿಗಳು ಯಾರಿಗೂ ಪ್ರಚಾರ ಮಾಡೋಕೆ ಆಗಲ್ಲ. ಚುಂಚನಗಿರಿ ಮಠ ಒಕ್ಕಲಿಗ ಸಮುದಾಯ ಮಠ ಆದ್ರೂ ಸಹ ರಾಜ್ಯದಲ್ಲಿ ಅತ್ಯಂತ ಜಾತ್ಯತೀತ ಮಠವಾಗಿದೆ. ಎಲ್ಲಾ ಜಾತಿಗಳನ್ನು ಪ್ರೀತಿಸಿ ಬೆಳೆಸಿದವರು ಬಾಲಗಂಗಾಧರನಾಥ ಶ್ರೀಗಳು. ಜೆಡಿಎಸ್‌ನವರು ಬಾಲಗಂಗಾಧರ ಶ್ರೀಗಳಿಗೆ ಎಷ್ಟು ಕಿರುಕುಳ‌ ಕೊಟ್ಟರು ಎಂದು ಸಹ ಗೊತ್ತಿದೆ. ಈಗ ಚುನಾವಣೆ ಬಂದಿದೆ. ಅದಕ್ಕೆ ಮಠಕ್ಕೆ‌ ಕುಮಾರಸ್ವಾಮಿ ಹೋಗ್ತಾ ಇದ್ದಾರೆ ಅಷ್ಟೇ ಎಂದಿದ್ದಾರೆ.

Shwetha M