ತುಂಡು ಜಮೀನಿಗಾಗಿ 9 ವರ್ಷದ ಬಾಲಕಿಯನ್ನೇ ಅಪಹರಿಸಿದ್ದರು! – ಡಿಕೆಶಿ ವಿರುದ್ಧ ಹೆಚ್‌ಡಿಡಿ ಗಂಭೀರ ಆರೋಪ

ತುಂಡು ಜಮೀನಿಗಾಗಿ 9 ವರ್ಷದ ಬಾಲಕಿಯನ್ನೇ ಅಪಹರಿಸಿದ್ದರು! – ಡಿಕೆಶಿ ವಿರುದ್ಧ ಹೆಚ್‌ಡಿಡಿ ಗಂಭೀರ ಆರೋಪ

ಚುನಾವಣೆ ಹತ್ತಿರುವಾಗುತ್ತಿದ್ದಂತೆ ಪ್ರಚಾರದ ಕಾವು ಜೋರಾಗಿದೆ. ಮಾತಿನ ಭರದಲ್ಲಿ ನಾಯಕರು ನಾಲಗೆ ಹರಿಬಿಡುತ್ತಿದ್ದಾರೆ. ಇದೀಗ ಮಾಜಿ ಪ್ರಧಾನಿ ದೇವೇಗೌಡ ಡಿಕೆ ಶಿವಕುಮಾರ್‌ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಡಿಕೆಶಿ ತುಂಡು ಜಮೀನಿಗಾಗಿ 9 ವರ್ಷದ ಬಾಲಕಿಯನ್ನು ಅಪಹರಿಸಿದ್ದರು ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ರಣದೀಪ್‌ ಸುರ್ಜೇವಾಲಾಗೆ ಚುನಾವಣಾ ಆಯೋಗದಿಂದ ಶಾಕ್‌! – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

ಮಂಗಳವಾರ ಬೆಂಗಳೂರಲ್ಲಿ ಜಮೀನೊಂದಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಬಾಲಕಿಯನ್ನು ಅಪಹರಿಸಿದ್ದನ್ನು ಕುಮಾರಸ್ವಾಮಿ ಹೇಳಿದ್ದರು. ಇದೀಗ ಈ ಬಗ್ಗೆ ಹೆಚ್‌ಡಿ ದೇವೇಗೌಡ ಮಾತನಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌ಡಿ ದೇವೆಗೌಡ, ಡಿಕೆ ಶಿವಕುಮಾರ್ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಲ್ಲದೇ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಅಮೆರಿಕದಲ್ಲಿ ಹಣ ಸಂಪಾದನೆ ಮಾಡಿಕೊಂಡು ಸ್ವದೇಶಕ್ಕೆ ವಾಪಸ್ಸಾದ ವ್ಯಕ್ತಿಯೊಬ್ಬ ಬಿಡದಿ ಬಳಿ ಒಂದು ಐಟಿ ಕಂಪನಿ ಸ್ಥಾಪಿಸಲು ಜಮೀನು ಖರೀದಿಸುತ್ತಾರೆ. ಆದರೆ ಶಿವಕುಮಾರ್ ಸುಳ್ಳು ದಾಖಲಾತಿ ಪತ್ರಗಳನ್ನು ತಯಾರಿಸಿ ಆ ಜಮೀನನ್ನು ಕಬಳಿಸಲು ಪ್ರಯತ್ನಿಸುತ್ತಾರೆ.

ಆ ವ್ಯಕ್ತಿ ಕೋರ್ಟ್ ಮೊರೆಹೊಕ್ಕಾಗ ಉಚ್ಚ ಮತ್ತು ಸರ್ವೋಚ್ಛ ನ್ಯಾಯಾಲಯ ಎರಡರಲ್ಲೂ ಶಿವಕುಮಾರ್ ಗೆ ಸೋಲಾಗುತ್ತದೆ ಎಂದು ದೇವೇಗೌಡ ಹೇಳುತ್ತಾರೆ. ನಂತರ ಅ ನಿರ್ದಿಷ್ಟ ಜಮೀನನ್ನು ಪಡೆಯಲೇ ಬೇಕೆಂದು ಹಟಕ್ಕೆ ಬೀಳುವ ಶಿವಕಮಾರ್ ಅ ವ್ಯಕ್ತಿಯ 9-ವರ್ಷದ ಮಗಳನ್ನು ಅಪಹರಿಸಿ ಯಾವುದೋ ಮನೆಯಲ್ಲಿ ಕೂಡಿಹಾಕುತ್ತಾರೆ. ಆಮೇಲೆ ಅವರ 9 ವರ್ಷದ ಮಗಳನ್ನ ತೆಗೆದುಕೊಂಡು ಹೋಗಿ ಪಕ್ಕದ ಮನೆಯಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿ ಇಡುತ್ತಾರೆ. ನಿನ್ನ ಮಗಳು ಬೇಕು ಅಂದ್ರೆ ಸಹಿ ಮಾಡು ಎಂದು ಧಮ್ಕಿ ಹಾಕುತ್ತಾರೆ. ಆ ತಾಯಿ ಎಲ್ಲಾ ಬರೆದುಕೊಡು, ನನ್ನ ಮಗಳ ಕರೆದುಕೊಂಡು ಬಾರಪ್ಪಾ ಅಂತ ಆಕೆ ಗಂಡನ ಕಾಲು ಹಿಡಿಯುತ್ತಾಳೆ. ನನ್ನ ಬಳಿ ದಾಖಲೆ ಇದೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Shwetha M