IT-BT ಕಂಪನಿ ಜೊತೆ ಸಭೆ ನಡೆಸಿ ಸಮಸ್ಯೆ ಆಲಿಸುತ್ತೇವೆ – ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ದಿನಗಳಲ್ಲಿ ಐಟಿ- ಬಿಟಿ ಕಂಪನಿಗಳ ಜತೆ ನಾನು ಹಾಗೂ ಐಟಿ, ಕೈಗಾರಿಕೆ, ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರುಗಳು ಪ್ರತ್ಯೇಕವಾಗಿ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುತ್ತೇವೆ. ಟೀಕೆ ಟಿಪ್ಪಣಿ ಮಾಡುವವರಿಗೆ ನಮ್ಮ ಕೆಲಸವೇ ಉತ್ತರ ನೀಡುತ್ತದೆ. ನಾವು ನಮ್ಮ ಪಾಡಿಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ನಾವು ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ. ಭಗವಂತ ಹಾಗೂ ಜನರು ನಮಗೆ ಆಶೀರ್ವಾದ ಮಾಡಿದ್ದು, ನಾವು ಅವರ ಸೇವೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆಶಿ ತಿಳಿಸಿದರು. ಬೆಂಗಳೂರಿನ ಕೆ ಆರ್ ಪುರಂನ ಟಿ.ಸಿ. ಪಾಳ್ಯದ ವೆಂಗಯ್ಯ ಪಾರ್ಕ್ನಲ್ಲಿ ʼಬೆಂಗಳೂರು ನಡಿಗೆʼ ಅಭಿಯಾನದ ಅಂಗವಾಗಿ ʼನಾಗರಿಕರೊಂದಿಗೆ ಸಂವಾದʼ ನಡೆಸಿ ಮಾಧ್ಯಮಗಳನ್ನು ಉದ್ದೇಶಿಸಿ \ ಮಾತನಾಡಿದರು.
ಇದನ್ನೂ ಓದಿ: ಸಂಸತ್ ಭವನದ ಸಮೀಪವಿರುವ ಸಂಸದರ ವಸತಿ ಗೃಹದಲ್ಲಿ ಬೆಂಕಿ ನರ್ತನ
ನೂತನ ಐದು ಪಾಲಿಕೆಗಳು ಬೆಂಗಳೂರಿನ ಅಭಿವೃದ್ಧಿಯಲ್ಲಿ ಇತಿಹಾಸ ಸೃಷ್ಟಿಸಲಿವೆ. ಬೆಂಗಳೂರು ನಗರದಿಂದ 6 ಸಾವಿರ ಕೋಟಿ ತೆರಿಗೆ ಸಂಗ್ರಹವಾಗುತ್ತಿದೆ. ಇದರಲ್ಲಿ ಬೆಂಗಳೂರು ನಗರ ಪೂರ್ವ ಪಾಲಿಕೆ 1600 ಕೋಟಿ ರೂಪಾಯಿ ಪಾಲು ಹೊಂದಿದೆ. ಈ ಮೊದಲು ಎಲ್ಲಾ ಭಾಗಗಳ ತೆರಿಗೆ ಹಂಚಿಕೆಯಾಗುತ್ತಾ ಇತ್ತು. ಈಗ ಆಯಾ ಪ್ರದೇಶಗಳ ತೆರಿಗೆ ಅಲ್ಲಿಯೇ ವಿನಿಯೋಗವಾಗಲಿದೆ ಎಂದು ತಿಳಿಸಿದರು.
ಕೆ.ಆರ್.ಪುರ ಹಾಗೂ ಮಹದೇವಪುರ ಒಳಗೊಂಡಿರುವ ಬೆಂಗಳೂರು ಪೂರ್ವ ಪಾಲಿಕೆ ಇಡೀ ರಾಜ್ಯದಲ್ಲಿ ಅತಿ ಹೆಚ್ಚು ಶ್ರೀಮಂತ ಪಾಲಿಕೆ. ಈ ಭಾಗದಲ್ಲಿ ಅನೇಕ ಐಟಿ ಬಿಟಿ ಕಂಪನಿಗಳಿದ್ದು, ಈ ಪ್ರದೇಶದ ಸಮಗ್ರ ಅಭಿವೃದ್ಧಿಗೆ 74ನೇ ತಿದ್ದುಪಡಿ ಅಡಿಯಲ್ಲಿ ಪಾಲಿಕೆ ರಚಿಸಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಅಪಾರ ಹಣ ವಿನಿಯೋಗ ಮಾಡಬಹುದು. ಈ ಹಿಂದೆ ಒಂದೇ ಪಾಲಿಕೆ ಇದ್ದಾಗ ಈ ಭಾಗದಿಂದ ಬರುವ ತೆರಿಗೆ ಆದಾಯವನ್ನು ಬೆಂಗಳೂರಿನ ಇತರೆ ಭಾಗಗಳ ಅಭಿವೃದ್ಧಿಗೆ ಬಳಕೆಯಾಗುತ್ತಿತ್ತು. ಈಗ ಹೊಸ ಕಾಯ್ದೆ ಮೂಲಕ ಈ ಭಾಗದಲ್ಲಿ ಕ್ರೂಢೀಕರಣವಾಗುವ ಅಷ್ಟೂ ಸಂಪನ್ಮೂಲವನ್ನು ಈ ಪಾಲಿಕೆಯ 50 ವಾರ್ಡ್ಗಳ ಅಭಿವೃದ್ಧಿಗೆ ನೀಡಲಾಗುವುದು. ಇದರಿಂದ ಈ ಭಾಗದ ಐಟಿ ವಲಯ ಹಾಗೂ ನಾಗರೀಕರಿಗೆ ಉತ್ತಮ ಸೌಲಭ್ಯ ಕಲ್ಪಿಸಬಹುದಾಗಿದೆ ಎಂದು ಹೇಳಿದರು.
ಜನರ ಸಮಸ್ಯೆಗಳ ಶೀಘ್ರ ನಿವಾರಣೆಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಟೆಂಡರ್ ಇಲ್ಲದೇ ಪಾಲಿಕೆಯ ಕೌನ್ಸಿಲ್ 10 ಕೋಟಿ ಮೊತ್ತದ ಕಾಮಗಾರಿಗಳಿಗೆ ಹಾಗೂ ಪಾಲಿಕೆ ಆಯುಕ್ತರು 3 ಕೋಟಿ ರೂಪಾಯಿ ಖರ್ಚು ಮಾಡಲು ಅವಕಾಶ ನೀಡಲಾಗಿದೆ. ಬಿಬಿಎಂಪಿ ಇದ್ದಾಗ 10 ಕೋಟಿ ಖರ್ಚು ಮಾಡಬಹುದಾಗಿತ್ತು. ಈಗ ಆ ಹಣ 50 ಕೋಟಿಗೆ ಏರಿಕೆಯಾಗಿದೆ. ಬೆಂಗಳೂರಿನ ಅಭಿವೃದ್ಧಿಗೆ ಐದು ಪಟ್ಟು ಹೆಚ್ಚು ಅವಕಾಶ ದೊರೆತಿದೆ ಎಂದು ವಿವರಿಸಿದರು.
ಬೆಂಗಳೂರಿನ ಜನತೆಗೆ ನಮ್ಮ ಸರ್ಕಾರ ದೀಪಾವಳಿ ಕೊಡುಗೆ ನೀಡಿದೆ. ಕಂದಾಯ ಭೂಮಿಯಲ್ಲಿ ಕಟ್ಟಿರುವ ಮನೆಗಳಿಗೆ ‘ಬಿ’ ಖಾತೆ ಹೊಂದಿರುವ ಹಾಗೂ ಹೊಂದಿರದವರು 500 ರೂಪಾಯಿ ಶುಲ್ಕ ಹಾಗೂ ಆಸ್ತಿ ಮೌಲ್ಯದ ಶೇ.5 ರಷ್ಟು ಹಣ ಪಾವತಿ ಮಾಡಿದರೆ ‘ಎ’ ಖಾತೆ ನೀಡಲಾಗುವುದು ಎಂದರು.

ನೋಡಿರಿ

