ಕಾಂಗ್ರೆಸ್‌ ಸರ್ಕಾರ ಬೀಳಿಸಲು ವಿದೇಶದಲ್ಲಿ ಷಡ್ಯಂತ್ರ! – ಸ್ಪೋಟಕ ಹೇಳಿಕೆ ನೀಡಿದ ಡಿಕೆಶಿ

ಕಾಂಗ್ರೆಸ್‌ ಸರ್ಕಾರ ಬೀಳಿಸಲು ವಿದೇಶದಲ್ಲಿ ಷಡ್ಯಂತ್ರ! – ಸ್ಪೋಟಕ ಹೇಳಿಕೆ ನೀಡಿದ ಡಿಕೆಶಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣೆಗೆ ನಡೆಯುತ್ತಿದೆ. ಕೆಲ ದಿನಗಳ ಹಿಂದೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿಯವರು ಪೆನ್‌ಡ್ರೈವ್‌ ಬಾಂಬ್‌ ಸಿಡಿಸಿದ್ದರು. ಇದಾದ ಬಳಿಕ ಜೆಡಿಎಸ್‌, ಬಿಜೆಪಿ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ವಿಚಾರವೂ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಮಧ್ಯೆಯೇ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಸ್ಪೋಟಕ ಹೇಳಿಯೊಂದನ್ನು ನೀಡಿದ್ದಾರೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಹುಮತದ ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ವಿದೇಶಗಳಿಂದ ಕುಳಿತು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಹೇಳುವ ಮೂಲಕ ಡಿಕೆಶಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಇದನ್ನೂ ಓದಿ:‘ಹನಿಟ್ರ್ಯಾಪ್ ಮಾಡಲೆಂದೇ ಸ್ಟುಡಿಯೋ.. ಸುತ್ತಮುತ್ತ ಬರೀ ಆಂಟಿಗಳೇ ಇರ್ತಾರೆ’ – ಶಾಸಕ ಮುನಿರತ್ನ ವಿರುದ್ಧ ಗಂಭೀರ ಆರೋಪ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿ.ಕೆ ಶಿವಕುಮಾರ್‌ ಅವರು,  ವಿದೇಶದಲ್ಲಿ ಕುಳಿತು ನಮ್ಮ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ. ಇದೆಲ್ಲಾ ಒಂದು ತಂತ್ರವಾಗಿದೆ. ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ‌. ಬೆಂಗಳೂರಿನಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತೆ ಅಂತ, ವಿದೇಶಕ್ಕೆ ಹೋಗಿ ಅಲ್ಲಿ ಕುಳಿತುಕೊಂಡೇ ಆಪರೇಷನ್ ಮಾಡ್ತಿದ್ದಾರೆ ಎಂದು ಯಾರ ಹೆಸರು ಹೇಳದೇ ಪರೋಕ್ಷವಾಗಿ ಕುಮಾರಸ್ವಾಮಿ ಸಿಂಗಾಪುರ ಪ್ರವಾಸದ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಇನ್ನು ರಾಜ್ಯದಲ್ಲಿ ಕುಳಿತು ಷಡ್ಯಂತ್ರವನ್ನು ಮಾಡಿದರೆ ಎಲ್ಲರಿಗೂ ಗೊತ್ತಾಗುತ್ತದೆ ಎಂಬ ಉದ್ದೇಶದಿಂದಲೇ ವಿದೇಶಕ್ಕೆ ತೆರಳಿ ಷಡ್ಯಂತ್ರ ಮಾಡುತ್ತಿದ್ದಾರೆ. ಆದರೆ, ಯಾರು ಈ ಷಡ್ಯಂತ್ರವನ್ನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿಯನ್ನು ನೀಡಿಲ್ಲ. ಇನ್ನು ರಾಜ್ಯ ನಾಯಕರೋ ಅಥವಾ ಕೇಂದ್ರದ ನಾಯಕರು ಷಡ್ಯಂತ್ರ ಮಾಡುತ್ತಿದ್ದಾರೋ ಎಂಬುದರ ಬಗ್ಗೆಗೂ ಸುಳಿವು ನೀಡಿಲ್ಲ. ಆದರೆ, ರಾಜ್ಯದಿಂದ ಇತ್ತೀಚೆಗೆ ವಿದೇಶಕ್ಕೆ ಹೋದ ರಾಜಕೀಯ ನಾಯಕರೇ ಈ ಬಗ್ಗೆ ಷಡ್ಯಂತ್ರ ಮಾಡುತ್ತಿದ್ದಾರೆ ಎಂಬ ಅನುಮಾನಗಳೂ ಕೂಡ ವ್ಯಕ್ತವಾಗಿವೆ.

suddiyaana