ನಾನು ಹೇಳಿದಂತೆ ಮಾಡಿ.. ಶತ್ರು ನಾಶ ಆಗುತ್ತೆ! – ಕಲಾವಿದರ ಮುಂದೆ ನಾಗ ದೇವರು ಹೇಳಿದ್ದೇನು..?

ನಾನು ಹೇಳಿದಂತೆ ಮಾಡಿ.. ಶತ್ರು ನಾಶ ಆಗುತ್ತೆ! – ಕಲಾವಿದರ ಮುಂದೆ ನಾಗ ದೇವರು ಹೇಳಿದ್ದೇನು..?

ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಲ್ಲಿ ಬುಧವಾರ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರೋ ಕಲಾವಿದರ ಸಂಘದಲ್ಲಿ ಣಯಾಗ, ಆಶ್ಲೇಷ ಬಲಿ, ಸರ್ಪ ಶಾಂತಿ, ಮೃತ್ಯುಂಜಯ ಹೋಮ ನಡೆದಿದೆ.

ಕಳೆದ ನಾಲ್ಕೈದು ವರ್ಷಗಳಿಂದ ಚಿತ್ರರಂಗದಲ್ಲಿ ಸಾಕಷ್ಟು ಸಮಸ್ಯೆಗಳು ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಹಾರ ಕಂಡುಕೊಳ್ಳಲು ಕಲಾವಿದರ ಸಂಘ ಹೋಮ ಹವನ ನಡೆಸಿದೆ. ಇಂಡಸ್ಟ್ರಿಯ ಒಗ್ಗಟ್ಟು, ಥಿಯೇಟರ್ ಸಮಸ್ಯೆ, ನಿರ್ಮಾಪಕರ ಸಮಸ್ಯೆ ನಿವಾರಣೆಗಾಗಿ ಪೂಜೆ ಮಾಡಲಾಗುತ್ತಿದೆ. ಬುಧವಾರ ಮುಂಜಾನೆಯಿಂದ ಹೋಮ ಹವನ ನಡೆಸಲಾಗಿದೆ. ಹಿರಿಯ ನಟಿ ಶಾಂತಲಾ, ಮಾಲತಿ ಶ್ರೀ ಮೈಸೂರು, ಪದ್ಮಜಾ ರಾವ್ ಮೊದಲಾದವರು ದೀಪ ಬೆಳಗಿ ಪೂಜೆಗೆ ಚಾಲನೆ ನೀಡಿದ್ದಾರೆ. ದೊಡ್ಡಣ್ಣ ಹಾಗೂ ಅವರ ಪತ್ನಿ ಪೂಜೆ ನಡೆಸಿಕೊಟ್ಟಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿ ಪರಿಷ್ಕರಣೆಗೆ ಮುಂದಾದ ರಾಜ್ಯ ಸರ್ಕಾರ! – ಮಹತ್ವದ ನಿರ್ಧಾರಕ್ಕೆ ಹೈಕಮಾಂಡ್‌ ಅಸ್ತು?

ನಾಗದರ್ಶನ ವೇಳೆ ಹಿರಿಯ ನಟ ದೊಡ್ಡಣ್ಣ ಹಾಗೂ ರಾಕ್ ಲೈನ್ ವೆಂಕಟೇಶ್ ಪ್ರಶ್ನೆ ಮಾಡಿದ್ದಾರೆ. ಆಗ ನಾಗದರ್ಶನದ ನಂತರ ನಾಗದರ್ಶಕ ಬಳಿ ಪ್ರಶ್ನೆ ಕೇಳಿದ್ದಾರೆ. ಇದೇ ವೇಳೆ ನಾಗದೇವರು ದೊಡ್ಡಣ್ಣ, ಜಗ್ಗೇಶ್, ವೆಂಕಟೇಶ್ ಮುಂದೆ ತಪ್ಪುಗಳ ಪಟ್ಟಿಕೊಟ್ಟಿದ್ದಾರೆ. ನಿಮ್ಮಲ್ಲಿ ಒಗ್ಗಟ್ಟು ಉಂಟಾ? ಇಷ್ಟು ಮಾಡಿದ್ರೂ ಎಲ್ಲರೂ ಒಟ್ಟಾಗಿ ಸೇರಿಲ್ಲ. ನನ್ನನ್ನು ಭಯ ಪಟ್ಟು ಪೂಜಿಸಬೇಡಿ. ಪ್ರೀತಿಯಿಂದ ಗೆಲ್ಲಿ. ಈ ಜಾಗದ ಪಾವಿತ್ರ್ಯತೆ ಹಾಳು ಮಾಡ್ಬೇಡಿ. ಈ ಕಲಾವಿದರ ಸಂಘದಲ್ಲಿ ನೀವು ಏನು ಮಾಡ್ತಿದ್ದೀರಿ ಎಂದು ನಾಗದೇವರು ಪ್ರಶ್ನೆ ಮಾಡಿದೆ.

ಇದು ಶಾರದೆಯ ಸ್ಥಳ. ಆಡಂಬರ ನನಗೆ ಬೇಡ. ಈ ಸ್ಥಳದಲ್ಲಿ ಧರ್ಮದ ಕಾರ್ಯಗಳು ನಡೀತಿದ್ವು. ದೇವರ ಕಾರ್ಯ ಅಲ್ಲ. ಇಲ್ಲಿ ಹುಟ್ಟುಹಬ್ಬ ಆಚರಿಸುತ್ತಿದ್ದೀರಿ ಅದು ಸರಿಯಲ್ಲ. ಇದೆಲ್ಲವನ್ನೂ ಸರಿಪಡಿಸಿಕೊಳ್ಳಿ. ದೊಡ್ಡ ಮಟ್ಟದ ಕೆಲಸಗಳು ಆಗ್ಬೇಕು ಇಲ್ಲಿ. ಹಿಂದೆ ನಡೆದಿರುವಂತೆ ಎಲ್ಲಾ ಹಿರಿಯರು ಇಲ್ಲಿ ಸೇರುವಂತೆ ಆಗಬೇಕು. ಎಲ್ಲರೂ ಒಗ್ಗಟ್ಟಾಗಿ ನಿಲ್ಲಿ. ದಿನ ಇಲ್ಲಿ ದೀಪ ಬೆಳಗಿಸಿ. ಶತ್ರು ನಾಶ, ಅಪಕೀರ್ತಿ ಎಲ್ಲವೂ ದೂರಾಗುತ್ತೆ. ನನ್ನ ಕೋಪಕ್ಕೆ ಬಲಿ ಆಗಬೇಡಿ. ನಾನು ಹೇಳಿದಂತೆ ಮಾಡಿ. ಇಲ್ಲವಾದರೇ ನನ್ನ ಕೋಪಕ್ಕೆ ಗುರಿ ಆಗ್ತೀರಾ ಎಂದು ಎಚ್ಚರಿಕೆ ನೀಡಿದೆ.

Shwetha M

Leave a Reply

Your email address will not be published. Required fields are marked *