ಆಸ್ಕರ್ ರೇಸ್ನಲ್ಲಿ ಭಾರತದ ಸಾಕ್ಷ್ಯಚಿತ್ರ! – ‘ಟು ಕಿಲ್ ಎ ಟೈಗರ್’ಪ್ರಶಸ್ತಿಗೆ ನಾಮನಿರ್ದೇಶನ
![ಆಸ್ಕರ್ ರೇಸ್ನಲ್ಲಿ ಭಾರತದ ಸಾಕ್ಷ್ಯಚಿತ್ರ! – ‘ಟು ಕಿಲ್ ಎ ಟೈಗರ್’ಪ್ರಶಸ್ತಿಗೆ ನಾಮನಿರ್ದೇಶನ](https://suddiyaana.com/wp-content/uploads/2024/01/8-13.jpg)
ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗೆ ಭಾರತ ಮೂಲದ ಕೆನಡಾದಲ್ಲಿ ನೆಲೆಸಿರುವ ನಿಶಾ ಪಹೂಜಾ ಅವರ ‘ಟು ಕಿಲ್ ಎ ಟೈಗರ್’ (To Kill A Tiger) ಸಾಕ್ಷ್ಯಚಿತ್ರವು ನಾಮನಿರ್ದೇಶನಗೊಂಡಿದೆ. ಭಾರತ ಮೂಲದ ಕೆನಡಾದಲ್ಲಿ ನೆಲೆಸಿರುವ ನಿಶಾ ಪಹೂಜಾ ಅವರು ಈ ಸಾಕ್ಷ್ಯ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಇದನ್ನೂ ಓದಿ: ಮತ್ತೆ NDA ಸೇರಿಕೊಳ್ತಾರಾ ನಿತೀಶ್ ಕುಮಾರ್? – ಜೆಡಿಯು-ಆರ್ ಜೆಡಿ ಮೈತ್ರಿಯಲ್ಲೂ ಬಿರುಕು?
‘ಟು ಕಿಲ್ ಎ ಟೈಗರ್’ಸಾಕ್ಷ್ಯಚಿತ್ರವನ್ನು ಭಾರತದ ನೆಲದಲ್ಲೇ ಚಿತ್ರೀಕರಿಸಲಾಗಿದೆ. ಕಾರ್ನಿಲಿಯಾ ಪ್ರನ್ಸಿಪೆ ಮತ್ತು ಡೇವಿಡ್ ಒಪ್ಪೆನ್ ಹಿಮ್ ನಿರ್ಮಿಸಿರುವ ಈ ಸಾಕ್ಷ್ಯಚಿತ್ರದಲ್ಲಿ 13 ವರ್ಷದ ಮಗಳನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸೆಗಿರುವ ದುರುಳರ ವಿರುದ್ಧ ನ್ಯಾಯಕ್ಕಾಗಿ ಹೋರಾಟ ಮಾಡುವ ತಂದೆಯ ಕಥೆಯನ್ನು ಇದು ಹೊಂದಿದೆ. ಇದು ಈ ಹಿಂದೆ ಟೊರೆಂಟೊ ಚಿತ್ರೋತ್ಸವದಲ್ಲಿ ಕೂಡ ಪ್ರದರ್ಶನಗೊಂಡಿತ್ತು.
ಇನ್ನು ಅತ್ಯುತ್ತಮ ಸಿನಿಮಾ ಪಟ್ಟಿಯಲ್ಲಿ ದಿ ಜೋನ್ ಆಫ್ ಇಂಟರೆಸ್ಟ್, ಬಾರ್ಬಿ, ಮಾಸ್ಟ್ರೊ, ಓಪನ್ ಹೈಮರ್, ಅನಾಟಮಿ ಆಫ್ ಎ ಫಾಲ್ ಸೇರಿದಂತೆ ಹಲವು ಚಿತ್ರಗಳು ಕಾಣಿಸಿಕೊಂಡಿದ್ದರೆ, ಅತ್ಯುತ್ತಮ ನಟ ವಿಭಾಗದಲ್ಲಿ ಜೆಫ್ರಿ ರೈಟ್, ಬ್ರ್ಯಾಡ್ಲಿ ಕೂಪರ್, ಪಾಲ್ ಗಿಯಾಮಟ್ಟಿ, ಕೋಲ್ಮನ್ ಡೆಮಿನಿಗೋ ಸೇರಿದಂತೆ ಹಲವು ಕಲಾವಿದರು ಇದ್ದಾರೆ.
ನಿರ್ದೇಶನದ ವಿಭಾಗದಲ್ಲಿ ಕ್ರಿಸ್ಟೊಫರ್ ನೋಲನ್, ಜಸ್ಟಿನ್ ಟ್ರೈಟ್, ಜೊನಥನ್ ಗ್ಲೆಜರ್, ಯೊಗೊರ್ಸ್ ಲ್ಯಾಂತಿಮೋಸ್ ಕಾಣಿಸಿಕೊಂಡಿದ್ದಾರೆ. ಅತ್ಯುತ್ತಮ ನಟಿ ವಿಭಾಗದಲ್ಲಿ ಕ್ಯಾರಿ ಮುಲ್ಲಿಗನ್, ಆನೆಟ್ ಬೆನಿಂಗ್, ಎಮ್ಮ ಸ್ಟೊನ್, ಸಾಂಡ್ರಾ ಹುಲ್ಲರ್ ಮೊದಲಾದವರು ಇದ್ದಾರೆ.
ಕಳೆದ ಬಾರಿ ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಸಂದಿದ್ದವು. ಆದರೆ, ಈ ಬಾರಿ ಆಸ್ಕರ್ ನಾಮಿನೇಟ್ ಪಟ್ಟಿಯಲ್ಲಿ ಭಾರತದ ಯಾವುದೇ ಸಿನಿಮಾಗಳು ಇರದೇ ಇರುವುದು ಸಹಜವಾಗಿಯೇ ನಿರಾಸೆ ತಂದಿದೆ.