ಸಿದ್ದರಾಮಯ್ಯಗೆ ಕೋಲಾರ ಟಿಕೆಟ್ ಕೊಡೋದು ಡೌಟ್ – ಬೇರೆ ಅಭ್ಯರ್ಥಿ ಆಯ್ಕೆ ಮಾಡಿದ ಹೈಕಮಾಂಡ್!?

ಸಿದ್ದರಾಮಯ್ಯಗೆ ಕೋಲಾರ ಟಿಕೆಟ್ ಕೊಡೋದು ಡೌಟ್ – ಬೇರೆ ಅಭ್ಯರ್ಥಿ ಆಯ್ಕೆ ಮಾಡಿದ ಹೈಕಮಾಂಡ್!?

ಕಾಂಗ್ರೆಸ್​ನಲ್ಲಿ ಈಗಾಗ್ಲೇ 2 ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ರೂ ಕೋಲಾರ ಕ್ಷೇತ್ರದ ಅಭ್ಯರ್ಥಿ ಯಾರು ಅನ್ನೋದೇ ಇನ್ನೂ ಕಗ್ಗಂಟಾಗಿದೆ. ವರುಣಾ ಕ್ಷೇತ್ರದ ಜೊತೆಗೆ ಕೋಲಾರದಿಂದ್ಲೂ ಸ್ಪರ್ಧೆ ಮಾಡ್ಬೇಕು ಅನ್ನೋ ಸಿದ್ದರಾಮಯ್ಯ ಕನಸು ಕನಸಾಗೇ ಉಳಿಯುವ ಎಲ್ಲಾ ಲಕ್ಷಣಗಳು ಕಾಣ್ತಿವೆ. ಯಾಕಂದ್ರೆ ಸಿದ್ದರಾಮಯ್ಯಗೆ ಕೋಲಾರದ ಟಿಕೆಟ್ ನೀಡದಿರಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗಿದೆ.

ಇದನ್ನೂ ಓದಿ : ಸಿದ್ದು, ಡಿಕೆಶಿಯನ್ನ ಕಟ್ಟಿ ಹಾಕಲು ಸೋಮಣ್ಣ, ಅಶೋಕ್ ಅಖಾಡಕ್ಕೆ? – ಬಿಜೆಪಿ ಮಾಸ್ಟರ್ ಪ್ಲ್ಯಾನ್ ಏನು?

ಕೋಲಾರದಲ್ಲಿ ಬೇರೆ ಅಭ್ಯರ್ಥಿಗೆ ಟಿಕೆಟ್ ನೀಡಲು ನಿರ್ಧರಿಸಿದ್ದು, ಬೇರೆ ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಕೊತ್ತನೂರು ಮಂಜುನಾಥ್, ಶ್ರೀನಿವಾಸ್ ಸೇರಿದಂತೆ ಮೂವರು ಅಭ್ಯರ್ಥಿಗಳ ಹೆಸರನ್ನ ಫೈನಲ್ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಈ ಹಿಂದೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಬ್ಬರಿಗೆ ಒಂದೇ ಕ್ಷೇತ್ರ ಎಂದು ಕಟ್ಟುನಿಟ್ಟಾಗಿ ನಿಯಮ ಮಾಡಿದ್ರು. ಜೊತೆಗೆ ಕಾಂಗ್ರೆಸ್ ನ ಇತರೆ ನಾಯಕರು ಸಿದ್ದರಾಮಯ್ಯ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ರೆ ನಮಗೂ 2 ಟಿಕೆಟ್ ಕೊಡಿ ಎಂದು ದುಂಬಾಲು ಬಿದ್ದಿದ್ದಾರೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಕೋಲಾರದ ಟಿಕೆಟ್ ನ ಸಿದ್ದರಾಮಯ್ಯಗೆ ಕೊಡೋದು ಬಹುತೇಕ ಡೌಟ್ ಎನ್ನಲಾಗ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯಗೆ ಟಿಕೆಟ್ ನೀಡಿದ್ರೂ ಕಷ್ಟ ಟಿಕೆಟ್ ನೀಡದಿದ್ರೂ ಕಷ್ಟ ಎನ್ನುವ ಪರಿಸ್ಥಿತಿ ಕಾಂಗ್ರೆಸ್ ಹೈಕಮಾಂಡ್ ನದ್ದಾಗಿದೆ.

suddiyaana