‘ವೀರ ಕಂಬಳ’ ಸಿನಿಮಾಕ್ಕಾಗಿ ಬಣ್ಣ ಹಚ್ಚಿದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

‘ವೀರ ಕಂಬಳ’ ಸಿನಿಮಾಕ್ಕಾಗಿ ಬಣ್ಣ ಹಚ್ಚಿದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

ತುಳುನಾಡಿನ ಜನಪದ ಕ್ರೀಡೆ ಕಂಬಳವನ್ನು ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಬೆಳ್ಳಿತೆರೆ ಮೇಲೆ ತರಲಿದ್ದಾರೆ. ವೀರ ಕಂಬಳ ಅಂತಾ ಈಗಾಗಲೇ ಸಿನಿಮಾ ಟೈಟಲ್ ಇಡಲಾಗಿದ್ದು, ಚಿತ್ರೀಕರಣವೂ ಭರದಿಂದ ಸಾಗುತ್ತಿದೆ. ಈ ಚಿತ್ರದಲ್ಲಿ ಪ್ರಕಾಶ್ ರಾಜ್, ರವಿಶಂಕರ್ ಸೇರಿ ಅನೇಕ ಅನುಭವಿ ಕಲಾವಿದರು ನಟಿಸುತ್ತಿದ್ದಾರೆ. ಇದೀಗ ವೀರ ಕಂಬಳ ಸಿನಿಮಾದಿಂದ ಹೊಸ ಅಪಡೇಟ್ಸ್ ಸಿಕ್ಕಿದೆ. ಈ ಚಿತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಕೂಡ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಡಾ. ವೀರೇಂದ್ರ ಹೆಗ್ಗಡೆಯವರಿಗೆ ಮೇಕಪ್ ಹಚ್ಚುತ್ತಿರುವ ಫೋಟೋ ವೈರಲ್ ಆಗಿದೆ.

ಇದನ್ನೂ ಓದಿ:  ‘ಕೆಡಿ’ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಖಡಕ್ ಲುಕ್ – ಪೋಸ್ಟರ್ ನೋಡಿ ಫ್ಯಾನ್ಸ್ ಫಿದಾ

ಡಾ. ವೀರೇಂದ್ರ ಹೆಗ್ಗಡೆ ಅವರು ‘ವೀರ ಕಂಬಳ’ ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರವನ್ನು ಚಿತ್ರತಂಡ ಕೂಡಾ ಅಧಿಕೃತವಾಗಿ ಘೋಷಣೆ ಮಾಡಿದೆ. ‘ವೀರ ಕಂಬಳ’ ಸಿನಿಮಾ ತುಳುನಾಡಿನ ಸಂಸ್ಕೃತಿಗೆ ಸಂಬಂಧಿಸಿದ್ದಾಗಿದೆ. ಹೀಗಾಗಿ ಡಾ. ವೀರೇಂದ್ರ ಹೆಗ್ಗಡೆ, ಈ ಚಿತ್ರದಲ್ಲಿ ನಟಿಸಲು ಒಪ್ಪಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ. ಡಾ.ವೀರೇಂದ್ರ ಹೆಗ್ಗಡೆಯವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಎಂಬ ಬಗ್ಗೆ ಮಾಹಿತಿಯನ್ನ ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ‘ವೀರ ಕಂಬಳ’ ಸಿನಿಮಾ ತುಳು ಮತ್ತು ಕನ್ನಡ ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಈ ಮೂಲಕ ಹೆಚ್ಚು ಜನರಿಗೆ ಸಿನಿಮಾ ತಲುಪಲಿದೆ. ಈ ಚಿತ್ರದಲ್ಲಿ ಪ್ರಕಾಶ್ ರಾಜ್, ರವಿಶಂಕರ್ ಕೋರ್ಟ್‌ನಲ್ಲಿ ಕರಿ ಕೋಟ್ ಹಾಕಿ ನಿಂತಿರುವ ಫೋಟೋ ಈ ಮೊದಲು ವೈರಲ್ ಆಗಿತ್ತು. ಈಗ ಡಾ. ವೀರೇಂದ್ರ ಹೆಗ್ಗಡೆ ಅವರ ಫೋಟೋ ಸಾಕಷ್ಟು ಸುದ್ದಿ ಮಾಡ್ತಿದೆ. ಈ ಚಿತ್ರದಲ್ಲಿ ಕಂಬಳ ಓಟಗಾರ ಶ್ರೀನಿವಾಸ್ ಗೌಡ, ‘ಕಾಂತಾರ’ ಚಿತ್ರದಲ್ಲಿ ಗುರುವ ಪಾತ್ರ ಮಾಡಿದ್ದ ಸ್ವರಾಜ್ ಶೆಟ್ಟಿ ನಟಿಸುತ್ತಿದ್ದಾರೆ. ತುಳುವಿನಲ್ಲಿ ಈ ಚಿತ್ರಕ್ಕೆ ‘ಬಿರ್ದ್ದ ಕಂಬುಲ’ ಎಂದು ಹೆಸರಿಡಲಾಗಿದೆ.

suddiyaana