ನಾನು ಯಾಕೆ ಸಿಎಂ ಆಗಬಾರದು? – ಮತ್ತೊಮ್ಮೆ ಮುಖ್ಯಮಂತ್ರಿ ಕುರ್ಚಿ ಆಸೆ ಬಿಚ್ಚಿಟ್ಟ ಡಾ.ಜಿ ಪರಮೇಶ್ವರ್!

ನಾನು ಯಾಕೆ ಸಿಎಂ ಆಗಬಾರದು? – ಮತ್ತೊಮ್ಮೆ ಮುಖ್ಯಮಂತ್ರಿ ಕುರ್ಚಿ ಆಸೆ ಬಿಚ್ಚಿಟ್ಟ ಡಾ.ಜಿ ಪರಮೇಶ್ವರ್!

ರಾಜ್ಯ ಕಾಂಗ್ರೆಸ್​ನಲ್ಲಿ ಸಿಎಂ ಕುರ್ಚಿಗಾಗಿ ನಡೆದಿರೋ ಕಸರತ್ತು ಒಂದೆರಡಲ್ಲ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಮದಗಜಗಳಂತೆ ಕಾದಾಡ್ತಿದ್ದಾರೆ. ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಕಂಡ್ರೂ ಒಳಗಿನ ಬೇಗುದಿ ಹೈಕಮಾಂಡ್​ಗಷ್ಟೇ ಗೊತ್ತಿದೆ. ಇಂಥಾದ್ರಲ್ಲಿ ಈಗ ಗೃಹಸಚಿವ ಡಾ.ಜಿ ಪರಮೇಶ್ವರ್ ಕೂಡ ನಾನು ಯಾಕೆ ಸಿಎಂ ಆಗಬಾರದು ಎಂದು ಮತ್ತೊಮ್ಮೆ ವರಸೆ ತೆಗೆದಿದ್ದಾರೆ.

ವಸಂತ ನಗರದ ಅಂಬೇಡ್ಕರ್‌ ಭವನದಲ್ಲಿ ದಲಿತಪರ ಸಂಘಟನೆಗಳು ದಲಿತ ಸಮುದಾಯದ ಸಚಿವರುಗಳಿಗೆ ಆಯೋಜಿಸಿದ್ದ ಅಭಿನಂದನಾ ಸಮಾವೇಶದಲ್ಲಿ ತಮ್ಮ ಮನದಿಂಗಿತ ವ್ಯಕ್ತಪಡಿಸಿದ್ದಾರೆ. ನಮ್ಮಲ್ಲಿ ಕೀಳರಿಮೆ ಇರಬಾರದು. ಅದಕ್ಕೆ ನಾನು ಯಾವಾಗಲೂ ನಾನು ಸಿಎಂ ಆಗಬೇಕು ಅಂತ ಹೇಳುತ್ತೇನೆ. ನಮಗೆ ಸಿಎಂ ಆಗುವ ಅವಕಾಶಗಳನ್ನು ತಪ್ಪಿಸಿದ್ದಾರೆ. ನಮ್ಮಲ್ಲಿ ಒಗ್ಗಟ್ಟು ಇದ್ದರೆ ಮಾತ್ರ ನಾವು ಉಳಿದುಕೊಳ್ಳುತ್ತೇವೆ. ಅದು ಬಿಟ್ಟು ಎಡ, ಬಲ ಎಂದು ಹೇಳುತ್ತಿದ್ದರೆ ನಾವು ಏನು ಸಾಧನೆ ಮಾಡುವುದಿಲ್ಲ. ನಮ್ಮಲ್ಲಿ ಒಗ್ಗಟ್ಟಿನ ಮಂತ್ರ ಇರಬೇಕು ಎಂದರು. ಕಾಂಗ್ರೆಸ್‌ಗೆ (Congress) 2018 ರಲ್ಲಿ ಸೋಲಾಯಿತು. ಯಾವ ಸಮುದಾಯವನ್ನು ಕಡೆಗಣಿಸಿದರೋ ಅದರಿಂದ ಪಾಠ ಕಲಿಯಬೇಕಾಯ್ತು ಎಂದು ಪರೋಕ್ಷವಾಗಿ ದಲಿತ ಸಿಎಂ ಮಾಡದ ಕಾರಣ ಕಾಂಗ್ರೆಸ್‌ಗೆ ಸೋಲಾಯಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ : ನಾಯಕರ ಪೈಪೋಟಿ.. ಹೈಕಮಾಂಡ್ ಅಸಡ್ಡೆ – ತಿಂಗಳಾದ್ರೂ ಬಿಜೆಪಿಯಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ಕಗ್ಗಂಟು!

ನಮ್ಮ ಪಕ್ಷದ ಆಂತರಿಕ ವಲಯದಲ್ಲಿ ಗೆಲುವಿನ ಪರಾಮರ್ಶೆ ಮಾಡುವಾಗ ಈ ಬಾರಿ ದಲಿತರು (Dalits) ನಮ್ಮ ಕೈ ಹಿಡಿದಿದ್ದಾರೆ ಎಂಬ ಮಾತು ಬಂದಿದೆ. ಮುಸ್ಲಿಮರು 100% ನಮ್ಮ ಕೈ ಹಿಡಿದಿದ್ದಾರೆ ಅಂತ ಮಾತನಾಡುತ್ತಾರೆ. ನಮ್ಮ ಬಗ್ಗೆ ಈಗ ಎಲ್ಲರಿಗೆ ಗೊತ್ತಾಗಿದೆ. 51 ಮೀಸಲು ಕ್ಷೇತ್ರಗಳ ಪೈಕಿ 32 ರಲ್ಲಿ ಗೆದ್ದಿದ್ದೇವೆ. ನಮ್ಮ ಪಕ್ಷದ ಪ್ರಣಾಳಿಕೆ ಸಮಿತಿಗೆ ನಾನೇ ಅಧ್ಯಕ್ಷನಾಗಿದ್ದೆ. ಪ್ರಣಾಳಿಕೆಯಲ್ಲಿ ಹೇಳಿದಂತೆ ಮೊದಲ ಅಧಿವೇಶನದಲ್ಲಿ ಸದಾಶಿವ ಆಯೋಗ ವರದಿ ಮಂಡಿಸುತ್ತೇವೆ ಎಂದರು.

suddiyaana