ಮೀನು ತಿಂದ 15 ಕ್ಕೂ ಹೆಚ್ಚು ಮಂದಿ ಅಸ್ವಸ್ಥ – ಇಬ್ಬರು ಸಾವು

ಮೀನು ತಿಂದ 15 ಕ್ಕೂ ಹೆಚ್ಚು ಮಂದಿ ಅಸ್ವಸ್ಥ – ಇಬ್ಬರು ಸಾವು

ರಾಜ್ಯದ ಬಹುತೇಕ ಕೆರೆಗಳಲ್ಲಿ ನೀರು ಬತ್ತಿದೆ. ಹೀಗಾಗಿ ಅನೇಕರು ಕೆರೆಗಳಲ್ಲಿ ಮೀನು ಹಿಡಿಯುತ್ತಿದ್ದಾರೆ. ಇದೀಗ ಇಲ್ಲೊಂದು ಕಡೆ ಕೆರೆ ಮೀನು ತಿಂದು ಇಬ್ಬರು ಸಾವನ್ನಪ್ಪಿದ್ದು, 15 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದ ರೇವಣ್ಣ – ಕಾರಣವೇನು ಗೊತ್ತಾ?

ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ, ಬಸವಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನೀರಿಲ್ಲದೆ ಬತ್ತಿ ಹೋಗಿದ್ದ ಬಸವನಹಳ್ಳಿ ಗ್ರಾಮದ ಕೆರೆಯಲ್ಲಿ ಕೆಸರಿನಲ್ಲಿದ್ದ ಮೀನನ್ನು ಗ್ರಾಮಸ್ಥರು ಹಿಡಿದಿದ್ದರು. ಮೀನುಗಳನ್ನು ಹಿಡಿದು ಅಡುಗೆ ಮಾಡಿ ಊಟ ಮಾಡಿದ ನಂತರ ಹದಿನೈದಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ರವಿಕುಮಾರ (46), ಪುಟ್ಟಮ್ಮ 50) ಮೃತ ದುರ್ದೈವಿಗಳು.

ಮೀನು ತಿಂದ ಕೆಲವೇ ಹೊತ್ತಲ್ಲಿ 15 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರು ಅರಕಲಗೂಡು ಹಾಗೂ ಹಾಸನ ಆಸ್ಪತ್ರೆಗೆ ದಾಖಲಿದೆ. ಈ ಘಟನೆ ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ ಗ್ರಾಮಕ್ಕೆ ಜಿಲ್ಲಾಧಿಕಾರಿ ಸಿಸತ್ಯಭಾಮ ಬೇಟಿ ಪರಿಶೀಲನೆ ನಡೆಸಿದ್ದಾರೆ.  ಮೃತರ ಮರೋಣತ್ತರ ಪರೀಕ್ಷೆ ನಡೆದ ನಂತರ ಸಾವಿಗೆ ಅಸಲಿ ಕಾರಣ ಏನೆಂದು ತಿಳಿಯಲಿದೆ.

Shwetha M

Leave a Reply

Your email address will not be published. Required fields are marked *