ಬೀಪ್ ಸೌಂಡ್ನೊಂದಿಗೆ ಬಂತು ಎಮರ್ಜೆನ್ಸಿ ಅಲರ್ಟ್ ಮೆಸೇಜ್! – ಸರ್ಕಾರ ಫೋನ್ಗೆ ಸಂದೇಶ ಕಳುಹಿಸಿದ್ದು ಯಾಕೆ?
![ಬೀಪ್ ಸೌಂಡ್ನೊಂದಿಗೆ ಬಂತು ಎಮರ್ಜೆನ್ಸಿ ಅಲರ್ಟ್ ಮೆಸೇಜ್! – ಸರ್ಕಾರ ಫೋನ್ಗೆ ಸಂದೇಶ ಕಳುಹಿಸಿದ್ದು ಯಾಕೆ?](https://suddiyaana.com/wp-content/uploads/2023/10/6-9.jpg)
ಬೆಂಗಳೂರು: ರಾಜ್ಯದ ಬಹುತೇಕ ಜನರ ಫೋನ್ಗೆ ಗುರುವಾರ ಎಚ್ಚರಿಕೆಯ ಸಂದೇಶವೊಂದು ಬಂದಿದೆ. ಬೆಳಗ್ಗೆ 11.58ರ ಹೊತ್ತಿಗೆ ಮತ್ತು ಮಧ್ಯಾಹ್ನ 12.12ರ ಹೊತ್ತಿಗೆ ಎರಡೆರಡು ಬಾರಿ ಮೊಬೈಲ್ಗೆ ಬೀಪ್ ಸೌಂಡ್ನೊಂದಿಗೆ ಎಚ್ಚರಿಕೆ ಸಂದೇಶವೊಂದು ಬಂದಿದೆ. ಇದರ ಬಗ್ಗೆ ಮೊದಲೇ ಅರಿವು ಇಲ್ಲದವರು ಗಾಬರಿಯಾಗಿದ್ದಾರೆ.
ಈ ಸಂದೇಶವನ್ನು ದೂರಸಂಪರ್ಕ ಇಲಾಖೆ (ಸಿ-ಡಾಟ್) ಸೆಲ್ ಬ್ರಾಡ್ ಕಾಸ್ಟಿಂಗ್ ಕಳುಹಿದೆ. ಮುಂಬರುವ ದಿನಗಳಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಮೊಬೈಲ್ಗೆ ಇದೀಗ ಎಚ್ಚರಿಕೆ ರೀತಿಯ ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಸಂದೇಶವನ್ನು ಕಳುಹಿಸಲಾಗಿದೆ.
ಇದನ್ನೂ ಓದಿ: ಬಿಜೆಪಿ ಶಾಸಕರ ಅನುದಾನ ಕಿತ್ತು ಕಾಂಗ್ರೆಸ್ ಶಾಸಕರಿಗೆ ಕೊಟ್ಟ ಸರ್ಕಾರ – ‘ಗ್ಯಾರಂಟಿ’ಗಾಗಿ ಪೇಚಿಗೆ ಸಿಲುಕಿತಾ ಸರ್ಕಾರ?
ಸ್ಮಾರ್ಟ್ಫೋನ್ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಕುರಿತು ಕಳೆದೆರಡು ದಿಗಳಿಂದ ಸಂದೇಶಗಳು ಬರುತ್ತಿದ್ದವು. ಅಂತೆಯೇ ಇಂದು (ಗುರುವಾರ) ಮಧ್ಯಾಹ್ನ 12 ಗಂಟೆ ಸುಮಾರಿಗೆ ಇಂಗ್ಲಿಷ್ ಮತ್ತು ಕನ್ನಡದಲ್ಲಿ 2 ಬಾರಿ ಫ್ಲ್ಯಾಶ್ ಮೆಸೇಜ್ ಜೊತೆ ವಿಭಿನ್ನ ಶಬ್ದ ಕೂಡ ಮೊಬೈಲ್ಗೆ ಬಂದಿದೆ.
ಸಂದೇಶದಲ್ಲಿ ಏನಿದೆ?
ಇದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ಕಳುಹಿಸಲಾದ ಮಾದರಿ ಪರೀಕ್ಷಾ ಸಂದೇಶವಾಗಿದೆ. ನಿಮ್ಮ ಕಡೆಯಿಂದ ಯಾವುದೇ ರೀತಿಯ ಪ್ರತಿಕ್ರಿಯೆಯ ಅಗತ್ಯವಿಲ್ಲದ ಕಾರಣ ದಯವಿಟ್ಟು ಈ ಸಂದೇಶವನ್ನು ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಾರಿಗೊಳಿಸುತ್ತಿರುವ ಪ್ಯಾನ್-ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸಲು ಈ ಸಂದೇಶವನ್ನು ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ತುರ್ತು ಸಂದರ್ಭಗಳಲ್ಲಿ ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಲಾಗಿದೆ.
ಕಳೆದ ಎರಡು ದಿನಗಳಲ್ಲಿ ಕಳುಹಿಸಲಾಗಿದ್ದ ಸಂದೇಶದಲ್ಲಿ ಫೋನ್ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್ ಶಬ್ಧದೊಂದಿಗೆ ಸಂದೇಶ ಫ್ಲ್ಯಾಶ್ ಆಗಲಿದೆ. ಬಳಕೆದಾರರು ಓಕೆ ಕೊಡುವವರೆಗೂ ಈ ಶಬ್ಧ ಬರುತ್ತಲೇ ಇರುತ್ತದೆ. ಈ ಮೂಲಕ ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆದರೆ ಇದಕ್ಕೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಹೇಳಲಾಗಿತ್ತು.