ಲಕ್ಷಾಂತರ ಜನರ ಫೋನ್‌ಗೆ ಬಂತು ಎಮರ್ಜೆನ್ಸಿ ಅಲರ್ಟ್‌ ಮೆಸೇಜ್‌! –  ಸರ್ಕಾರ ಸಂದೇಶ ಕಳುಹಿಸಿದ್ದು ಯಾಕೆ ಗೊತ್ತಾ?

ಲಕ್ಷಾಂತರ ಜನರ ಫೋನ್‌ಗೆ ಬಂತು ಎಮರ್ಜೆನ್ಸಿ ಅಲರ್ಟ್‌ ಮೆಸೇಜ್‌! –  ಸರ್ಕಾರ ಸಂದೇಶ ಕಳುಹಿಸಿದ್ದು ಯಾಕೆ ಗೊತ್ತಾ?

ಭಾರತದ ಲಕ್ಷಾಂತರ ಜನರ ಮೊಬೈಲ್‌ಗೆ ಮಂಗಳವಾರ ಸರ್ಕಾರದಿಂದ ತುರ್ತು ಎಚ್ಚರಿಕೆ ಸಂದೇಶ ಬಂದಿದೆ. ಇದರಿಂದಾಗಿ ಕೆಲ ಕಾಲ ಜನರು ಆತಂಕಕ್ಕೆ ಒಳಗಾಗುವಂತೆ ಆಗಿತ್ತು. ಏನಿದು ಸಂದೇಶ ಎಂದು ದೇಶದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ.

ಇಂದು ಮುಂಜಾನೆಯಿಂದ ಭಾರತದ ಲಕ್ಷಾಂತರ ಜನರ ಫೋನ್‌ಗೆ ಸರ್ಕಾರದಿಂದ ತುರ್ತು ಮೆಸೆಜ್‌ ಬಂದಿದೆ.  11:35ಕ್ಕೆ   Android ಮತ್ತು iPhoneಗಳಿಗೆ ತುರ್ತು ಸಂದೇಶ ಬಂದಿದೆ. ತಮಗೆ ಬಂದ ಸಂದೇಶಗಳನ್ನು ಸೋಶಿಯಲ್​​ ಮೀಡಿಯಾದಲ್ಲಿ ಶೇರ್​​ ಮಾಡಿ, ಈ ಸಂದೇಶ ನನಗೆ ಮಾತ್ರ ಬಂದಿದ್ದ, ನಿಮಗೂ ಬಂತಾ ಎನ್ನುವ ಪ್ರಶ್ನೆಯನ್ನು ಮಾಡಿದ್ದಾರೆ. ಆದರೆ ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಪರೀಕ್ಷಾರ್ಥವಾಗಿ ಕಳುಹಿಸಿದೆ ಎಂದು ತಿಳಿದು ಬಂದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಮುಂದುವರಿದ ಮರಣ ಮೃದಂಗ! – ಭೂಕಂಪದ ತೀವ್ರತೆಗೆ 4,000 ಮಂದಿ ಬಲಿ, 2 ಸಾವಿರಕ್ಕೂ ಅಧಿಕ ಮನೆಗಳು ಸರ್ವನಾಶ!

ಅಷ್ಟಕ್ಕೂ ನಡೆದಿದ್ದೇನು?

ಮಂಗಳವಾರ ಬೆಳಿಗ್ಗೆ 11.35ರ ಹೊತ್ತಿಗೆ ಭಾರತದ ಅನೇಕ ಮೊಬೈಲ್ ಬಳಕೆದಾರರು ಸರ್ಕಾರದಿಂದ ತುರ್ತು ಎಚ್ಚರಿಕೆಯ ಸಂದೇಶವನ್ನು ಸ್ವೀಕರಿಸಿದ್ದಾರೆ. ತುರ್ತು ಎಚ್ಚರಿಕೆಯ ರೆಕಾರ್ಡೆಡ್‌ ಧ್ವನಿಯೊಂದಿಗೆ ಇದನ್ನು ಕಳುಹಿಸಲಾಗಿದೆ.  ಬೀಪ್ ಸದ್ದಿನೊಂದಿಗೆ ಬಂದ ಈ ಎಚ್ಚರಿಕೆ ಸಂದೇಶವನ್ನು ಕೆಲವು ನಿಮಿಷಗಳ ಅಂತರದಲ್ಲಿ ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಕಳುಹಿಸಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹೇಳುವುದೇನು?

ಈ ಎಚ್ಚರಿಕೆಯ ಸಂದೇಶ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆಯ ಭಾಗವಾಗಿದೆ. ಇದನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನಡೆಸಿದೆ.  ತುರ್ತು ಸಮಯದಲ್ಲಿ ಎಚ್ಚರಿಕೆ ವ್ಯವಸ್ಥೆ ಪರಿಣಾಮಕಾಯಾಗಿರುತ್ತದೆಯೇ ಎಂಬುದನ್ನು ನಿರ್ಣಯಿಸಲು ಮತ್ತು ಯಾವುದೇ ಸಂಭಾವ್ಯ ಸಮಸ್ಯೆಗಳನ್ನು ಗುರುತಿಸಲು ನಡೆಸಿದ ಪರೀಕ್ಷೆಯ ಭಾಗವಾಗಿದೆ. ಸೆಲ್ ಬ್ರಾಡ್‌ಕಾಸ್ಟಿಂಗ್ ಸಿಸ್ಟಮ್ (CBS) Cell Broadcasting System ಮೂಲಕ 11:30 ರಿಂದ ಮತ್ತು 11:44 ರ  ನಡುವೆ ಈ ಸಂದೇಶವನ್ನು ಕಳುಹಿಸಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ.

ಪ್ಯಾನ್ ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸಲು ಈ ಸಂದೇಶವನ್ನು ಕಳುಹಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು  ಸಕಾಲಿಕ ಎಚ್ಚರಿಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಗಮನಾರ್ಹವಾಗಿ, ಸೆಲ್ ಬ್ರಾಡ್‌ಕಾಸ್ಟಿಂಗ್ ಸಿಸ್ಟಮ್ ಎನ್ನುವುದು ಮೊಬೈಲ್ ಆಪರೇಟರ್‌ಗಳು ಫೋನ್ ಆನ್ ಆಗಿದೆಯೋ ಇಲ್ಲವೋ , ಮೊಬೈಲ್ ನೆಟ್‌ವರ್ಕ್ ಪ್ರದೇಶದಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಲೆಕ್ಕಿಸದೆ ನಿರ್ದಿಷ್ಟ ಪ್ರದೇಶದಲ್ಲಿ ಎಲ್ಲಾ ಫೋನ್‌ಗಳಿಗೆ  ಸಂದೇಶಗಳನ್ನು ಕಳುಹಿಸಲು ಬಳಸುವ ತಂತ್ರಜ್ಞಾನವಾಗಿದೆ.

ಭಾರತದಲ್ಲಿನ ಆಂಡ್ರಾಯ್ಡ್ ಫೋನ್ ಬಳಕೆದಾರರು ಸೆಪ್ಟೆಂಬರ್ 15, ಜುಲೈ 20 ಮತ್ತು ಆಗಸ್ಟ್ 17 ರಂದು ಇದೇ ರೀತಿಯ ಪರೀಕ್ಷಾ ಎಚ್ಚರಿಕೆಗಳನ್ನು ಸ್ವೀಕರಿಸಿದ್ದರು.

Shwetha M