ಲವರ್ ಜೊತೆ ಸೇರಿ ಗಂಡನ ಕಥೆ ಮುಗಿಸಿದ ಹೆಂಡತಿ – ಆಕ್ಸಿಡೆಂಟ್ ನಾಟಕ ಆಡಿದವರು ಲಾಕ್ ಆಗಿದ್ದೇಗೆ ಗೊತ್ತಾ?

ಯಾದಗಿರಿ ಜಿಲ್ಲೆಯಲ್ಲಿ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಸಾಗರ್ ರಾಠೋಡ್ನನ್ನು ಪತ್ನಿ ಪೂಜಾ ಮತ್ತು ಆಕೆಯ ಪ್ರಿಯತಮ ರೆಡ್ಡಿ ರಾಠೋಡ್ ಸುಪಾರಿ ನೀಡಿ ಕೊಲೆ ಮಾಡಿದ್ದಾರೆ. ಅಪಘಾತ ಎಂದು ಬಿಂಬಿಸಲು ಯತ್ನಿಸಿದ್ದ ಆರೋಪಿಗಳ ಕರಾಳ ಕೃತ್ಯವನ್ನು ಪೊಲೀಸರ ತನಿಖೆ ಬಯಲು ಮಾಡಿದೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ: ಡಿಂಪಲ್ ಕ್ವೀನ್ ರಚಿತಾರಾಮ್ಗೆ ಸಿದ್ದೇಗೌಡರಿಂದ ಪ್ರಪೋಸ್ – ಪ್ರೇಮನಿವೇದನೆಗೆ ನಾಚಿ ನೀರಾದ ಬುಲ್ ಬುಲ್
ಯಾದಗಿರಿ ತಾಲೂಕಿನ ಚಾಮನಹಳ್ಳಿ ತಾಂಡದ ನಿವಾಸಿ, ಆಟೋ ಚಾಲಕ ಸಾಗರ್ ರಾಠೋಡ್ (35) ಕೊಲೆಯಾದ ದುರ್ದೈವಿ. ಸಾಗರ್ ಪತ್ನಿ ಪೂಜಾ ಹಾಗೂ ಅದೇ ಊರಿನ ರೆಡ್ಡಿ ರಾಠೋಡ್ ನಡುವೆ ಕಳೆದ ಮೂರು ವರ್ಷಗಳಿಂದ ಅಕ್ರಮ ಸಂಬಂಧವಿತ್ತು. ಮೂರು ಬಾರಿ ಪೂಜಾ ತನ್ನ ಪ್ರಿಯತಮನ ಜೊತೆ ಓಡಿ ಹೋಗಿದ್ದಳು. ಪಂಚಾಯತಿ ಮಾಡಿ ಬುದ್ಧಿ ಹೇಳಿದರೂ ಇವರ ಕಾಮದಾಟ ನಿಂತಿರಲಿಲ್ಲ. ಕೊನೆಗೆ ದಾರಿಗೆ ಅಡ್ಡವಾಗಿದ್ದ ಸಾಗರ್ನನ್ನು ಮುಗಿಸಲು ಪತ್ನಿ ಮತ್ತು ಪ್ರಿಯತಮ ಸ್ಕೆಚ್ ಹಾಕಿದ್ದರು.
ಪ್ರಿಯತಮ ರೆಡ್ಡಿ ರಾಠೋಡ್, ಸಾಗರ್ನನ್ನು ಕೊಲ್ಲಲು ಮಹೇಶ್ ಎಂಬಾತನಿಗೆ 1 ಲಕ್ಷ ರೂ. ಸುಪಾರಿ ನೀಡಿದ್ದನು. ಮಾರ್ಚ್ 22ರ ರಾತ್ರಿ ಬಾಡಿಗೆ ಇದೆ ಎಂದು ಸುಳ್ಳು ಹೇಳಿ ಸಾಗರ್ನನ್ನು ಆಟೋ ಸಮೇತ ಕರೆಸಿಕೊಳ್ಳಲಾಯಿತು. ಲಿಂಗೇರಿ ಬಳಿ ನಿರ್ಜನ ಪ್ರದೇಶದಲ್ಲಿ ಸಾಗರ್ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಲಾಯಿತು. ಕೊಲೆಯಾದ ನಂತರ ಮೃತದೇಹವನ್ನು ಕಾರಿನಲ್ಲಿ ಹಾಕಿಕೊಂಡು ಹೊಸಹಳ್ಳಿ ಬಳಿ ತಂದು, ಅಲ್ಲಿ ಆಟೋಗೆ ಕಾರಿನಿಂದ ಡಿಕ್ಕಿ ಹೊಡೆಸಲಾಯಿತು. ಸಾಗರ್ ಅಪಘಾತದಿಂದ ಸತ್ತಿದ್ದಾನೆ ಎಂದು ಬಿಂಬಿಸಲು ಈ ಸೀನ್ ಕ್ರಿಯೇಟ್ ಮಾಡಲಾಗಿತ್ತು.
ಸ್ಥಳಕ್ಕೆ ಬಂದ ಪೊಲೀಸರಿಗೆ ಇದು ಅಪಘಾತವಲ್ಲ ಎಂಬ ಸಂಶಯ ಬಂದಿತ್ತು. ಸಾಗರ್ ಫೋನ್ ದಾಖಲೆಗಳನ್ನು ಪರಿಶೀಲಿಸಿದಾಗ ಮಹೇಶ್ ಎಂಬಾತನ ಕರೆ ಪತ್ತೆಯಾಯಿತು. ಮಹೇಶ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇಡೀ ಕೊಲೆ ರಹಸ್ಯ ಬಯಲಾಯಿತು.

ನೋಡಿರಿ

