ಸೈನಿಕನಾಗಿ ಶಾರುಖ್ ಖಾನ್, ಉಗ್ರನಾಗಿ ಜಾನ್ ಅಬ್ರಾಹಂ – ‘ಪಠಾಣ್’ ಟ್ರೇಲರ್‌ಗೆ ಫ್ಯಾನ್ಸ್ ಫಿದಾ

ಸೈನಿಕನಾಗಿ ಶಾರುಖ್ ಖಾನ್, ಉಗ್ರನಾಗಿ ಜಾನ್ ಅಬ್ರಾಹಂ – ‘ಪಠಾಣ್’ ಟ್ರೇಲರ್‌ಗೆ ಫ್ಯಾನ್ಸ್ ಫಿದಾ

ನಾಲ್ಕು ವರ್ಷಗಳ ನಂತರ ಬಾಲಿವುಡ್‌ನ ಬಾದ್‌ಶಹಾ ಶಾರುಖ್‌ ಖಾನ್ ತೆರೆ ಮೇಲೆ ಭರ್ಜರಿಯಾಗಿ ಎಂಟ್ರಿಯಾಗ್ತಿದ್ದಾರೆ. ಬಾಲಿವುಡ್ ಕಿಂಗ್‌ಖಾನ್ ಅಭಿನಯದ ‘ಪಠಾಣ್​’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸಖತ್ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಅದರಲ್ಲೂ ಟ್ರೇಲರ್ ಆರಂಭದಲ್ಲಿ ‘ಪಠಾಣ್​ ವನವಾಸ ಮುಗಿಸಿ ಬರುವ ಟೈಮ್ ಆಯಿತು’ ಎಂಬ ಡೈಲಾಗ್ ಬರುತ್ತದೆ. ಈ ಸಾಲು ಶಾರುಖ್​​ಗೆ ಹೊಂದುತ್ತದೆ ಅನ್ನೋ ಮಾತು ಕೇಳಿಬರುತ್ತಿದೆ. ಯಾಕೆಂದರೆ, ಶಾರುಖ್ ಖಾನ್ ಅವರು 2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಬ್ರೇಕ್ ಪಡೆದುಕೊಂಡಿದ್ದರು. ನಾಲ್ಕು ವರ್ಷದ ಬಳಿಕ ಅವರು ‘ಪಠಾಣ್​’ ಮೂಲಕ ಕಂಬ್ಯಾಕ್ ಮಾಡುತ್ತಿದ್ದಾರೆ. ಅವರು ಸೈನಿಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಟ್ರೇಲರ್ ನಲ್ಲಿಯೇ ಕಿಂಗ್‌ಖಾನ್ ಮಾಡ್ತಿರುವ ಕಮಾಲ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಇದನ್ನೂ ಓದಿ:  ಆಸ್ಕರ್ ಅಂಗಳದಲ್ಲಿ ಕಾಂತಾರ, ವಿಕ್ರಾಂತ್ ರೋಣ – ಅರ್ಹತೆ ಸುತ್ತು ಪಾಸ್ ಮಾಡಿದ ಕನ್ನಡ ಚಿತ್ರಗಳು

ಜಾನ್ ಅಬ್ರಾಹಂ ‘ಪಠಾಣ್​’ ಚಿತ್ರದಲ್ಲಿ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಶಾರುಖ್ ರಾ ಏಜೆಂಟ್​ ಆಗಿ ಮಿಂಚಿದ್ದಾರೆ. ಟ್ರೇಲರ್​ನ ಉದ್ದಕ್ಕೂ ಸಾಕಷ್ಟು ಆ್ಯಕ್ಷನ್​ಗಳಿವೆ. ಶಾರುಖ್ ಹಾಗೂ ಜಾನ್ ಅಬ್ರಾಹಂ ಮುಖಾಮುಖಿ ಆಗಿ ಫೈಟ್ ಮಾಡಿದ್ದಾರೆ. ಕಾರ್ ಚೇಸಿಂಗ್ ದೃಶ್ಯಗಳು ಮೈನವೇರೇಳಿಸಿದೆ. ಸಿದ್ದಾರ್ಥ್ ಆನಂದ್ ಅವರು ‘ವಾರ್​’ ಅಂತಹ ಆ್ಯಕ್ಷನ್ ಸಿನಿಮಾ ಮಾಡಿ ಫೇಮಸ್ ಆದವರು. ಅವರು ‘ಪಠಾಣ್​’ ಚಿತ್ರ ಮಾಡಿದ್ದಾರೆ. ಇಲ್ಲಿಯೂ ಭರಪೂರ ಆ್ಯಕ್ಷನ್ ದೃಶ್ಯ ಇಟ್ಟಿದ್ದಾರೆ.

ಔಟ್ ಫುಟ್ ಎಕ್ಸ್ ಎನ್ನುವ ಉಗ್ರ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಜಾನ್ ಅಬ್ರಾಹಂ, ಈ ಸಂಘಟನೆಯ ಮೂಲಕ ಭಾರತದ ಮೇಲೆ ದಾಳಿ ಮಾಡಲು ಸಂಚು ರೂಪಿಸುತ್ತಾರೆ. ಈ ದಾಳಿಯನ್ನು ಭಾರತ ರಾ ಏಜೆಂಟ್ ಆಗಿರುವ ಶಾರುಖ್ ಖಾನ್ ಹೇಗೆ ತಡೆಯುತ್ತಾರೆ ಎನ್ನುವುದೇ ಪಠಾಣ್ ಸಿನಿಮಾದ ಕಥಾ ಹಂದರ. ನಾನಾ ಕಾರಣಗಳಿಂದಾಗಿ ವಿವಾದಕ್ಕೆ ಕಾರಣವಾಗಿರುವ ಈ ಸಿನಿಮಾ, ದೇಶಪ್ರೇಮವನ್ನು ಸಾರಲಿದೆ ಎಂದು ಈ ಹಿಂದೆಯೇ ಶಾರುಖ್ ಹೇಳಿದ್ದರು. ಸಿನಿಮಾ ನೋಡಿದ ನಂತರ ಮಾತನಾಡಿ ಎಂದು ಪ್ರತಿಕ್ರಿಯಿಸಿದ್ದರು. ಕಥಾ ಹಂದರ ಮತ್ತು ಶಾರುಖ್ ಮಾಡಿರುವ ಪಾತ್ರವನ್ನು ಗಮನಿಸಿದರೆ ಇದಕ್ಕಾಗಿಯೇ ಶಾರುಖ್ ಹಾಗೆ ಹೇಳಿದ್ದರು ಎನ್ನಲಾಗ್ತಿದೆ.

suddiyaana