ಕಂಬಳ ಕ್ರೀಡೆಯ ಮೇಲೆ ಮತ್ತೆ ನಿಷೇಧದ ತೂಗುಕತ್ತಿ ?

ಕಂಬಳ ಕ್ರೀಡೆಯ ಮೇಲೆ ಮತ್ತೆ ನಿಷೇಧದ ತೂಗುಕತ್ತಿ ?

ಕರಾವಳಿಯಲ್ಲೀಗ ಜನಪದ ಕ್ರೀಡೆ ಕಂಬಳದ ಗಮ್ಮತ್ತು ಶುರುವಾಗಿದೆ. ಉಡುಪಿ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಬಳದ ಖುಷಿ ಈಗಾಗಲೇ ಮನೆ ಮಾಡಿದೆ. ಆದರೆ, ಜನಪದ ಕ್ರೀಡೆ ಕಂಬಳದ ಮೇಲೆ ಮತ್ತೆ ನಿಷೇಧದ ತೂಗುಗತ್ತಿ ನೇತಾಡುತ್ತಿದೆ. ಪ್ರಾಣಿ ದಯಾ ಸಂಘದವರು ಕಂಬಳ ಕೂಟ ನಿಷೇಧಿಸುವಂತೆ ಮತ್ತೆ ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದಾರೆ. ಹೀಗಾಗಿ ಕಂಬಳ ಕ್ರೀಡೆಗೆ ಮತ್ತೆ ಸಂಕಷ್ಟ ಎದುರಾಗುತ್ತಾ ಎಂಬ ಆತಂಕವೂ ಇದೆ.

ಇದನ್ನೂ ಓದಿ:  ಸಿಡಿದ ಸಿದ್ದು.. ಬೊಮ್ಮಾಯಿ ಗುದ್ದು.. ಸದನದಲ್ಲಿ ಸಮರ..

ಕಂಬಳದಲ್ಲಿ ಪ್ರಾಣಿ ಹಿಂಸೆ ಮಾಡಲಾಗುತ್ತಿದೆ ಎಂಬುದು ಪ್ರಾಣಿ ದಯಾ ಸಂಘದ ಆರೋಪ. ಈ ಹಿಂದೆ ಕಂಬಳಕ್ಕೆ ನಿಷೇಧದ ಆತಂಕ ಎದುರಾದಾಗ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಿತ್ತು. ರಾಜ್ಯ ಸರ್ಕಾರ ಮಂಡಿಸಿದ್ದ ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ ಹಾಕುವ ಮೂಲಕ ಕಂಬಳ ಕ್ರೀಡೆಗೆ ಅವಕಾಶ ಮಾಡಿಕೊಟ್ಟಿದ್ದರು. ಆ ಬಳಿಕ ಕರಾವಳಿಯಲ್ಲಿ ನಿರಾತಂಕವಾಗಿ ಕಂಬಳ ಕ್ರೀಡೆ ನಡೆಯುತಿತ್ತು. ಆದ್ರೆ ಇದೀಗ ಮತ್ತೆ ಪ್ರಾಣಿ ದಯಾ ಸಂಘ ಪೇಟಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಕಂಬಳವನ್ನು ನಿಷೇಧಿಸುವಂತೆ ಮೇಲ್ಮನವಿ ಸಲ್ಲಿಸಿದ್ದಾರೆ. ಕಂಬಳದ ಕೋಣಗಳು ಓಟಕ್ಕೆ ಯೋಗ್ಯವಾದ ಪ್ರಾಣಿಗಳಲ್ಲ, ಹೀಗಿದ್ದರೂ ರಾತ್ರಿ ಹಗಲೆನ್ನದೆ 48 ಗಂಟೆಗಳ ಕಾಲ ಕಂಬಳದ ಕೂಟದಲ್ಲಿ ಕೋಣಗಳನ್ನು ಓಡಿಸಲಾಗುತ್ತದೆ. ಬೆತ್ತದಿಂದ ಕೋಣಗಳಿಗೆ ಹೊಡೆದು ಹಿಂಸೆ ನೀಡಲಾಗುತ್ತಿದೆ ಎಂಬುದು ಪೇಟಾದವರ ಆರೋಪ.. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹ ತಕರಾರು ಅರ್ಜಿ ಸಲ್ಲಿಸಿದ್ದು, ಕಂಬಳ ಸಮಿತಿ ಪರವಾಗಿ ಉಪ್ಪಿನಂಗಡಿಯ ವಿಜಯ ವಿಕ್ರಮ ಜೋಡುಕೆರೆ ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಸಹ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ತೀರ್ಪು ಕಾಯ್ದಿರಿಸಿದೆ. ಕಂಬಳ ಕೂಟಕ್ಕೆ ಪ್ರಾಚೀನ ಇತಿಹಾಸವಿದ್ದು, ಮಕ್ಕಳಂತೆ ಕೋಣಗಳನ್ನು ಪ್ರೀತಿಯಿಂದ ಸಾಕಿ ಸಲಹಲಾಗುತ್ತದೆ. ಕಂಬಳ ನಿಷೇಧವಾಗಬಾರದು ಎಂಬುದು ಕಂಬಳ ಪ್ರೇಮಿಗಳ ಒತ್ತಾಯವಾಗಿದೆ.

suddiyaana